ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ದೇಶಕ್ಕೆ ಸಾಗಿಸಲ್ಪಟ್ಟ 30 ಕೆಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜುಲೈ 4ರಂದು ತಿರುವನಂತಪುರದಲ್ಲಿ ವಶಪಡಿಸಿಕೊಂಡು ಸ್ವಪ್ನ ಸುರೇಶ್ ಎಂಬ ಮಹಿಳೆಯನ್ನು ಬಂಧಿಸಿದ್ದಾರೆ.

ಯಾರಿದು ಸ್ವಪ್ನ-ಸುಂದರಿ?
ಕೇರಳ ಸರ್ಕಾರದ ಮುಖ್ಯಮಂತ್ರಿಗೂ ಮುಜುಗರ ತರುವಂತಾಗಲು ಈ ಸುಂದರಿಯ ಜಾಬ್ ಪ್ರೊಪೈಲ್ ಕಾರಣವಾಗುತ್ತಿರುವುದು ಹೇಗೆ? ಎಂಬ ಪ್ರಶ್ನೆ ಈಗ ಮುನ್ನೆಲೆಗೆ ಬಂದಿದೆ. ಕೇರಳ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್.ಐ.ಎ) ಒಪ್ಪಿಸಿದೆ.

ಈ ಹಿಂದೆ ಸ್ವಪ್ನ ಸುರೇಶ್ ಯುಎಇ ಕಾನ್ಸುಲೇಟ್ ನಲ್ಲಿ ಕೆಲಸ ಮಾಡಿದ್ದರು. ಈಗ ಚಿನ್ನವನ್ನು ಯುಎಇ ಕಾನ್ಸುಲೇಟ್ ಹೆಸರಿನ ಕಾರ್ಗೋ ಮೂಲಕ ಕೇರಳದಲ್ಲಿರುವ ಯುಎಇ ಮಿಷನ್ ಹೆಸರಿಗೆ ಕಳಿಸಿದ್ದು, ಸ್ವಪ್ನ ಈ ವಿಷಯವಾಗಿ ವಿಶೇಷ ಆಸಕ್ತಿ ತೋರಿದ್ದರು. ಈ ಕಾರಣಕ್ಕೆ ಕಸ್ಟಮ್ಸ್ ಅಧಿಕಾರಿಗಳು ಈಕೆಯನ್ನು ಬಂಧಿಸಿದ್ದಾರೆ.

ಕೇರಳ ಸರ್ಕಾರದ ಐಟಿ ಇಲಾಖೆಯ ಜೊತೆ ಪ್ರಾಜೆಕ್ಟ್ ಒಂದನ್ನು ನಡೆಸುತ್ತಿರುವ ಖಾಸಗಿ ಕಂಪನಿಯಲ್ಲಿ ಸ್ವಪ್ನ ಗುತ್ತಿಗೆ ಆಧಾರದ ಕೆಲಸ ಮಾಡುತ್ತಿದ್ದಾರೆ. ಕೇರಳ ಸಿಎಂ ಮುಖ್ಯ ಕಾರ್ಯದರ್ಶಿಗಳಲ್ಲಿ ಒಬ್ಬರಾಗಿದ್ದ ಶಿವಶಂಕರನ್ ಜೊತೆಗೆ ಸ್ವಪ್ನ ಆತ್ಮೀಯರಾಗಿದ್ದರು. ಈಗ ಶಿವಶಂಕರನ್ ಅವರನ್ನು ಕೇರಳ ಸರ್ಕಾರ ವಜಾಗೊಳಿಸಿದೆ. ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆಗೆ
ಕೇರಳ ಕಾಂಗ್ರೆಸ್ ಆಗ್ರಹಿಸಿದೆ.

Leave a Reply

Your email address will not be published. Required fields are marked *

You May Also Like

ಆಂಧ್ರಪ್ರದೇಶ: ಎಸ್.ಎಸ್.ಎಲ್ಸಿ ಪರೀಕ್ಷೆ ರದ್ದುಗೊಳಿಸಿ ಆದೇಶ

ಆಂಧ್ರಪ್ರದೇಶ : ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಲೋಕಸಭೆಯಲ್ಲಿ ಚುನಾವಣಾ ಕಾನೂನು (ತಿದ್ದುಪಡಿ) ಮಸೂದೆ ಮಂಡನೆ –ಮತದಾರರ ಪಟ್ಟಿಗೆ ಆಧಾರ ಜೊಡಣೆ ಪ್ರತಿಪಕ್ಷ ವಿರೋಧ

ದೆಹಲಿ:ಲೋಕಸಭೆಯಲ್ಲಿ ಚುಣಾವಾಣಾ ಕಾನೂನು (ತಿದ್ದುಪಡಿ) ಮಸೂದೆಯನ್ನು ಮಂಡಿಸಲಾಯಿತು. ಈ ತಿದ್ದುಪಡಿಯಲ್ಲಿ ಮುಖ್ಯವಾಗಿ ನಕಲಿ ಮತದಾರರನ್ನು ತಡೆಯುವುದು…

ನಿನ್ನೆ ಒಂದೇ ದಿನ ದಾಖಲೆಯ ಸೋಂಕಿತರು

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಿದೆ. ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆಯಾಗುತ್ತಿದ್ದಾರೆ.…

ಮದ್ಯಾಹ್ನದ ಬಿಸಿಊಟದ ಬದಲು ವಿದ್ಯಾರ್ಥಿಗಳ ಖಾತೆಗೆ ಸರ್ಕಾರದ ಹಣ

ನವದೆಹಲಿ: ಮಕ್ಕಳ ಪೌಷ್ಠಿಕಾಂಶದ ಮಟ್ಟವನ್ನು ಕಾಪಾಡಲು ಸಹಾಯ ಮಾಡುವ ಸಲುವಾಗಿ, ಮಧ್ಯಾಹ್ನದ ಊಟ ಯೋಜನೆಯಡಿ ಮಕ್ಕಳಿಗೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಆರ್ಥಿಕ ಸಹಾಯವನ್ನು ಕಳುಹಿಸಲಾಗುವುದು. ಸರ್ಕಾರದ ಈ ಯೋಜನೆಯಿಂದ ಸುಮಾರು 11.8 ಕೋಟಿ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ ಎನ್ನಲಾಗಿದೆ.