ನವದೆಹಲಿ: 45ಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಅದರಲ್ಲೂ 60 ದಾಟಿದವರಿಗೆ ಕೋರೊನಾ ಸೋಂಕು ತಗುಲಿದರೆ ಮರಣ ಹೊಂದುವ ಸಾಧ್ಯತೆ ಹೆಚ್ಚು.

ಭಾರತದಲ್ಲಿ ಕೊರೋನಾ ಸೋಂಕಿನಿಂದ ಮೃತರಾದವರ ವಯಸ್ಸುಗಳನ್ನು ಪರಿಗಣಿಸಿದಾಗ ಈ ಅಂಶವೂ ಕಂಡು ಬರುತ್ತದೆ. ಆದರೆ, ಇಲ್ಲಿ ಅಷ್ಟೇನೂ ರಿಸ್ಕ್ ಇಲ್ಲ ಎನ್ನಲಾಗುವ 30-44 ವರ್ಷ ವಯೋಮಾನದವರಲ್ಲೂ ಸಾವಿನ ಪ್ರಮಾಣ ತುಸು ಹೆಚ್ಚೇ ಇದೆ. ಸೋಂಕಿನಿಂದ ಮೃತಪಟ್ಟವರಲ್ಲಿ 30-59 ವಯಸ್ಸಿನವರು ಶೇ.43 ಇದ್ದಾರೆ!

ಈ ಅಂಕಿಅಂಶ ಗಮನಿಸಿ
45ರ ನಂತರದವರು (ಜನಸಂಖ್ಯೆಯ ಶೇ.25ರಷ್ಟಿದ್ದಾರೆ) ಸೋಂಕಿತರಾದರೆ ಸಾಯುವ ಸಾಧ್ಯತೆ ಹೆಚ್ಚು. ಭಾರತದಲ್ಲಾದ ಒಟ್ಟು ಕೊರೋನಾ ಸಾವುಗಳಲ್ಲಿ 45ಕ್ಕಿಂತ ಹೆಚ್ಚಿನ ವಯಸ್ಸಿನವರ ಪ್ರಮಾಣ ಶೇ.85. ಈ ವಯೋಮಾನದ ಗುಂಪಿನಲ್ಲೇ 45-74 ವಯಸ್ಸಿನವರು ಅದಿಕ ಪ್ರಮಾಣದಲ್ಲಿ (ಶೇ.71) ಮೃತಪಟ್ಟಿದ್ದಾರೆ.

ಇನ್ನು ಅಷ್ಟೇನೂ ಸಾಯುವ ಸಾಧ್ಯತೆ ಇಲ್ಲ ಎನ್ನಲಾಗಿದ್ದ 30-44 ಮತ್ತು 45-59 ವಯೋಮಾನದ ಸೋಂಕಿತರ ಸಾವಿನ ಪ್ರಮಾಣ ಶೇ. 43ರಷ್ಟಿದೆ.

ದೇಶದಲ್ಲೀಗ ಒಟ್ಟು ಸೋಂಕಿತರು 7.67 ಲಕ್ಷ, ಗುಣಮುಖರಾದವರು 4.74 ಲಕ್ಷ, ಸಕ್ರಿಯ ಕೇಸುಗಳು 2.69 ಲಕ್ಷ, ಒಟ್ಟು ಸಾವು 21,129. ಹೆಚ್ಚು ಜನ ಗುಣಮುಖರಾಗುತ್ತಿದ್ದರೂ ಗುಣಮುಖರಾದವರ, ಮತ್ತು ಸಕ್ರಿಯ ಕೇಸುಗಳ ನಡುವೆ 2 ಲಕ್ಷ ಅಂತರವಿದೆ.

Leave a Reply

Your email address will not be published. Required fields are marked *

You May Also Like

2021ನೇ ಸಾಲಿನ ಆಸ್ಕರ್ ಪ್ರಶಸ್ತಿ ಘೋಷಣೆ

ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ರವಿವಾರ ಪ್ರಸಕ್ತ ಸಾಲಿನ ಆಸ್ಕರ್ ಪ್ರಶಸ್ತಿ ಘೋಷಣೆಯಾಗಿದೆ. ಈ ಬಾರಿಯೂ ಯಾವುದೇ ಅಧಿಕೃತ ಸಮಾರಂಭ ನಡೆಯದೇ, ವರ್ಚುವಲ್ ಆಗಿ ಪ್ರಶಸ್ತಿ ವಿಜೇತ ನಟ, ನಟಿ ಹಾಗೂ ಚಿತ್ರಗಳನ್ನು ಘೋಷಿಸಲಾಗಿದೆ.

ಕಾರುಗಳನ್ನು ಕದಿಯುತ್ತಿದ್ದ ಸಿನಿಮಾ ನಟನ ಬಂಧನ!

ಲಕ್ನೋ : ಸಿನಿಮಾನ ನಟನೊಬ್ಬ ತನ್ನ ಸಹಚರರೊಂದಿಗೆ ಸೇರಿಕೊಂಡು ಐಷಾರಾಮಿ ಕಾರುಗಳನ್ನೇ ಕದಿಯುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ ಗುರುಸ್ವಾಮಿ ಬೆತ್ತಲೆ ವಿಡಿಯೋಗೆ ಸಿಕ್ಕ ಸ್ಪಷ್ಟನೆ!

ಶಬರಿ ನಗರದ ಅಯ್ಯಪ್ಪ ಸ್ವಾಮೀಜಿ ಮಠದ ಪೀಠಾದೀಶನ ಬೆತ್ತಲೆ ಪುರಾಣದ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.

‘ಶಾಲೆ ಯಾವಾಗ ಆರಂಭಿಸೋಣ? ಪಾಲಕರ ಅಭಿಪ್ರಾಯ ಕೇಳಿ’: ರಾಜ್ಯಗಳಿಗೆ ಕೇಂದ್ರದ ತರಾತುರಿಯ ಸಂದೇಶ!

ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ವಿಭಾಗವು ಎಲ್ಲ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳಿಗೆ ತರಾತುರಿಯಲ್ಲಿ ಒಂದು ಪತ್ರ ಕಳಿಸಿ, 3 ದಿನದಲ್ಲಿ ವಿದ್ಯಾರ್ಥಿಗಳ ಪಾಲಕರ ಅಭಿಪ್ರಾಯ ಸಂಗ್ರಹಿಸಿ, ಶಾಲೆ ಯಾವಾಗ ಆರಂಭಿಸಬೇಕು ಎಂದು ಸಲಹೆ ಪಡೆಯಿರಿ ಎಂದು ತಿಳಿಸಿದೆ. ಅಗಸ್ಟ್, ಸೆಪ್ಟೆಂಬರ್ ಅಥವಾ ಅಕ್ಟೋಬರ್ –ಯಾವ ತಿಂಗಳಲ್ಲಿ ಶಾಲೆ ಮರು ಆರಂಭವಾದರೆ ಒಳ್ಳೆಯದು ಎಂದು ಪಾಲಕರಿಂದ ತಿಳಿದುಕೊಂಡು, ಸರ್ಕಾರದ ಅಭಿಪ್ರಾಯ ರೂಪಿಸಿ ಕೂಡಲೇ ಕೇಂದ್ರಕ್ಕೆ ಕಳಿಸಿಕೊಡಿ ಎಂದು ತಿಳಿಸಿದೆ.