ಜುಲೈ 14ರಿಂದ 7 ದಿನ ಕಾಲ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ.

ಬೆಂಗಳೂರು:ಇತ್ತೀಚೆಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00  ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್  ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. 

ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. 

ಈಗಾಗಲೇ ನಿಗದಿಯಾಗಿರುವಂತೆ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸಲಾಗುವುದು. ಲಾಕ್ ಡೌನ್ ಸಂದರ್ಭದಲ್ಲಿ ಜನರು ಯಾವುದೇ ಆತಂಕಕ್ಕೆ ಒಳಗಾಗದೇ ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.

Leave a Reply

Your email address will not be published. Required fields are marked *

You May Also Like

ರೈತರ ಸಾಲ ಮನ್ನಾ ಮಾಡಿದ ಸರ್ಕಾರ

ಬ್ಯಾಂಕುಗಳಲ್ಲಿ ಬಾಕಿ ಉಳಿದ 57,229 ರೈತರ 295 ಕೋಟಿ ರೂ. ಸಾಲವನ್ನು ಸರ್ಕಾರ ಮನ್ನಾ ಮಾಡಿದೆ.

ಆಕಸ್ಮಿಕ ಬೆಂಕಿಗೆ ಬಣಿವೆ ಭಸ್ಮ

ವರದಿ: ವಿಠಲ ಕೆಳೂತ್ಮಸ್ಕಿ: ತಾಲೂಕಿನ ಜಕ್ಕೇರಮಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೇವಿನ ಬಣಿವೆ ಸುಟ್ಟು…

ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ದೇವರಮನಿ

ಕಾಂಗ್ರೆಸ್ನಿಂದ ಮೇಯರ್ ಆಕಾಂಕ್ಷಿಯಾಗಿದ್ದ ದೇವರಮನಿ ಶಿವಕುಮಾರ್ ಪಾಲಿಕೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದಾರೆ.

ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ವಧರ್ಮ, ಜಾತಿಯ ಬೆಂಬಲ

ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗಾಗಿ ಹಕ್ಕೊತ್ತಾಯಕ್ಕಾಗಿ ಪಟ್ಟಣದಲ್ಲಿ ಬುಧವಾರ ನಡೆದ ಬೃಹತ್ ಹೋರಾಟದ ಮೆರವಣಿಗೆಯಲ್ಲಿ ತಾಲ್ಲೂಕಿನ ಮುಸ್ಲಿಂ, ಜೈನ, ಕ್ರಿಶ್ಚಿಯನ್, ವೀರಶೈವ ಲಿಂಗಾಯತ, ಕುರುಬ, ನಾಯಕ ಸೇರಿ ಎಲ್ಲಾ ಧರ್ಮ, ಜಾತಿಯ ಮುಖಂಡರು ಭಾಗವಹಿಸಿ ದೇವಾಂಗ ಸಮಾಜಕ್ಕೆ ಬೆಂಬಲ ವ್ಯಕ್ತಪಡಿಸಿದರು.