ಜುಲೈ 14ರಿಂದ 7 ದಿನ ಕಾಲ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ.

ಬೆಂಗಳೂರು:ಇತ್ತೀಚೆಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00  ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್  ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. 

ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. 

ಈಗಾಗಲೇ ನಿಗದಿಯಾಗಿರುವಂತೆ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸಲಾಗುವುದು. ಲಾಕ್ ಡೌನ್ ಸಂದರ್ಭದಲ್ಲಿ ಜನರು ಯಾವುದೇ ಆತಂಕಕ್ಕೆ ಒಳಗಾಗದೇ ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಂವಾದ ನಡೆಸಿದ ಶಾಸಕ ನಡಹಳ್ಳಿ..! ಅನುದಿನವೂ ಇಷ್ಟಪಟ್ಟು ಓದಿ ಭವಿಷ್ಯ ಕಟ್ಟಿಕೊಳ್ಳಿ ಗುಲಾಬಚಂದ ಜಾಧವ;

ಉತ್ತರಪ್ರಭ ಆಲಮಟ್ಟಿ: ದಿನದ 24 ಗಂಟೆಯಲ್ಲಿ ಎಷ್ಟು ಕಾಲ ಓದ್ತಿರಾ, ಟಿವಿ ನೋಡ್ತಿರಾ, ಹರಟೆ ಹೋಡ್ತಿರಾ,…

ಹೊರಟ್ಟಿ ಅವರಿಗೆ ರಾಜಕಾರಣ ಬೇಡ ಎನಿಸುತ್ತಿದೆಯಂತೆ! ಹಾಗಾದ್ರೆ ಮುಂದಿನ ನಡೆ?

ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ರಾಜಕೀಯದಿಂದ ನಿವೃತ್ತಿ ಹೊಂದುವರೇ? ಹಿಗೊಂದು ಪ್ರಶ್ನೆ ಇದೀಗ ಅವರ ಮಾತಿನಿಂದಲೇ ಮೂಡಿದೆ. ಹೀಗಾಗಿ ರಾಜಕೀಯ ವಲಯದಲ್ಲಿ ಹೊರಟ್ಟಿ ಅವರ ಹೇಳಿಕೆ ಗುಸುಗುಸು ಚರ್ಚೆಗೆ ಮುನ್ನುಡಿ ಬರೆದಂತಾಗಿದೆ.

ಬಾಗಲಕೋಟೆ ರೋಟರಿ ಕ್ಲಬ್ ವತಿಯಿಂದ ಹಿರಿಯ ಪತ್ರಕರ್ತರಿಗೆ ಸನ್ಮಾನ..

ಬಾಗಲಕೋಟೆ: ನಗರದ ರೋಟರಿ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಇಂದು ಹಿರಿಯ ಪತ್ರಕ ರ್ತರಾದ…

ಅಡುಗೆ ಅನಿಲದ ಬೆಲೆ ಏರಿಕೆ, ಬಡವರ ಮೇಲೆ ಕೇಂದ್ರದ ಗಧಾಪ್ರಹಾರ: ಎಂ.ಎಸ್.ಹಡಪದ ಆಕ್ರೋಶ

ದಿನದಿಂದ ದಿನಕ್ಕೆ ಅಡುಗೆ ಅನಿಲ ಬೆಲೆ ಏಕಾಏಕಿ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗ್ರಾಹಕರನ್ನು ತತ್ತರಿಸುವಂತೆ ಮಾಡುತ್ತಿದೆ. ಕೇಂದ್ರದ ಆಡಳಿತ ಬಡವರ ಮೇಲಿನ ಗಧಾಪ್ರಹಾರದ ಆಡಳಿತವಾಗಿದೆ ಎಂದು ಸಿಪಿಐಎಂ ಮುಖಂಡ ಎಂ.ಎಸ್.ಹಡಪದ ಆಕ್ರೋಶ ವ್ಯಕ್ತಪಡಿಸಿದ್ದಾರೆ.