ಬೆಂಗಳೂರು:ನಾನು ಸಿಎಂ ಆಗಿದ್ದಾಗ ಕೇವಲ ₹26 ಕೋಟಿ ಆಗಿದ್ದ ತಿರುಪತಿ ವಸತಿ ಸಮುಚ್ಚಯ ಯೋಜನೆ, @BSYBJP ಸರ್ಕಾರದಲ್ಲಿ, ಒಂದೇ ವರ್ಷದಲ್ಲಿ 200 ಕೋಟಿಗೆ ಏರಿಕೆಯಾಗಿದೆ. ಕೋವಿಡ್ ನಿಭಾಯಿಸಲು  ಸರ್ಕಾರಕ್ಕೆ ಬೆಂಬಲ ನೀಡೋಣ. ಆದರೆ ಕೋವಿಡ್ ಕಾಲದ ಈ ಲೂಟಿಗಲ್ಲ. ಸರ್ಕಾರ ಕೂಡಲೇ ಈ ಯೋಜನೆಯನ್ನು ನಿಲ್ಲಿಸಲಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಅಪಾರ ದೈವಭಕ್ತ ಕುಟುಂಬದಿಂದ ಬಂದ ಎಚ್ ಡಿ ಕುಮಾರಸ್ವಾಮಿಯವರು ಇಂತಹ ಅಭಿಪ್ರಾಯ ವ್ಯಕ್ತಪಡಿಸಲು ಸಾಧ್ಯವೇ ಎಂಬ ಅನುಮಾನ ವ್ಯಕ್ತವಾಗುವುದು ಸಹಜ. ಆದರೆ, ಇಂದು ಈ ಕುರಿತು ಅವರು ಎರಡು ಟ್ವೀಟ್ ಮಾಡಿದ್ದು,  ಈ ಯೋಜನೆಗೆ ರಾಜ್ಯ ಸರ್ಕಾರ ಟಿಟಿಡಿಗೆ 200 ಕೋಟಿ, ವಿನ್ಯಾಸ, ವಾಸ್ತುಶಿಲ್ಪಕ್ಕಾಗಿ ಖಾಸಗಿ  ಸಂಸ್ಥೆಗೆ ಯೋಜನೆಯ ಶೇ.5(10 ಕೋಟಿ) ಅನ್ನು ನೀಡುತ್ತಿದೆ. ಈ ಯೋಜನೆ ಕೈಗೆತ್ತಿಕೊಳ್ಳಲು ರಾಜ್ಯದ ಲೋಕೋಪಯೋಗಿ ಇಲಾಖೆ ಶಕ್ತವಲ್ಲವೇ? ವಿನ್ಯಾಸ ರೂಪಿಸಲು ಇಲಾಖೆಯಲ್ಲಿ ಯಾರೂ ಇಲ್ಲವೇ? ಕೋವಿಡ್‌ ಸಂಕಷ್ಟ  ಕಾಲದಲ್ಲಿ ಈ ಯೋಜನೆ ಅಗತ್ಯವಾದರೂ ಏನು? ಎಂದು ಪ್ರಶ್ನಿಸಿದ್ದಾರೆ.

ಮೊದಲೇ ಕೊರೊನಾ ಹೆಸರಿನಲ್ಲಿ ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಕಾಂಗ್ರೆಸ್ ಸೇರಿದಂತೆ ಸಾಮಾಜಿಕ ಹೋರಾಟಗಾರರು, ನೆಟ್ಟಿಗರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇಗ ಎಚ್.ಡಿ.ಕುಮಾರಸ್ವಾಮಿ ಕೂಡ ರಾಜ್ಯ ಸರ್ಕಾರದ ವಿರುದ್ಧ ಲೂಟಿಯ ಆರೋಪ ಹೊರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಮ್ಮದು ಬೆಂಕಿ ಆರಿಸುವ ಸಂಸ್ಕೃತಿ

ಸಮಾಜವನ್ನು ಒಡೆಯುವ ಸಂಸ್ಕೃತಿ ತಮ್ಮದಲ್ಲ. ನಾವು ಬೆಂಕಿ ಹಚ್ಚುವವರಲ್ಲ. ಹಚ್ಚಿದ ಬೆಂಕಿಯನ್ನು ಆರಿಸುವವರು ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ ಕೇಸರಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲಾಕ್ ಡೌನ್ ತೆರವಿನಿಂದ ಕೊರೊನಾ ಪ್ರಮಾಣದಲ್ಲಿ ಹೆಚ್ಚಳ: ಕೇಜ್ರಿವಾಲ್

ಲಾಕ್ ಡೌನ್ ತೆರವಿನಿಂದಾಗಿ ದೆಹಲಿಯಲ್ಲಿ ಕೊರೊನಾ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆರೋಪಿಸಿದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕಾಸೀಮಸಾಹೇಬ್ ಹುಸೇನಸಾಹೇಬ

ಉತ್ತರಪ್ರಭನಿಡಗುಂದಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಜನಪದ ಸಾಹಿತಿ ಕಾಸೀಮಸಾಹೇಬ್ ಹುಸೇನಸಾಹೇಬ ಬಿಜಾಪುರ (87)…

ಕೆಎಸ್ಆರ್ ಟಿ ಸಿ ಬ್ರ್ಯಾಂಡ್ ಕರ್ನಾಟಕದ ಕೈ ತಪ್ಪಿಲ್ಲ : ಸಚಿವ ಸವದಿ ಸ್ಪಷ್ಟನೆ

ಕೆಎಸ್ಆರ್ ಟಿಸಿ ಪದ ಮತ್ತು ಲೋಗೋವನ್ನು ಕೇರಳಪಾಲಾಗಿದೆ ಎಂಬ ಸುದ್ದಿ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ನಿರಾಕರಿಸಿದ್ದಾರೆ.