ತಿರುಪತಿಗೆ ಕೋಟಿಕೋಟಿ: ಮಾಜಿ ಸಿಎಂ ಎಚ್.ಡಿ.ಕೆ. ವಿರೋಧ

kumaraswamy yadiyurappa karnataka

ಸರ್ಕಾರದ ನಡೆ ವಿರೋಧಿಸಿ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು:ನಾನು ಸಿಎಂ ಆಗಿದ್ದಾಗ ಕೇವಲ ₹26 ಕೋಟಿ ಆಗಿದ್ದ ತಿರುಪತಿ ವಸತಿ ಸಮುಚ್ಚಯ ಯೋಜನೆ, @BSYBJP ಸರ್ಕಾರದಲ್ಲಿ, ಒಂದೇ ವರ್ಷದಲ್ಲಿ 200 ಕೋಟಿಗೆ ಏರಿಕೆಯಾಗಿದೆ. ಕೋವಿಡ್ ನಿಭಾಯಿಸಲು  ಸರ್ಕಾರಕ್ಕೆ ಬೆಂಬಲ ನೀಡೋಣ. ಆದರೆ ಕೋವಿಡ್ ಕಾಲದ ಈ ಲೂಟಿಗಲ್ಲ. ಸರ್ಕಾರ ಕೂಡಲೇ ಈ ಯೋಜನೆಯನ್ನು ನಿಲ್ಲಿಸಲಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಅಪಾರ ದೈವಭಕ್ತ ಕುಟುಂಬದಿಂದ ಬಂದ ಎಚ್ ಡಿ ಕುಮಾರಸ್ವಾಮಿಯವರು ಇಂತಹ ಅಭಿಪ್ರಾಯ ವ್ಯಕ್ತಪಡಿಸಲು ಸಾಧ್ಯವೇ ಎಂಬ ಅನುಮಾನ ವ್ಯಕ್ತವಾಗುವುದು ಸಹಜ. ಆದರೆ, ಇಂದು ಈ ಕುರಿತು ಅವರು ಎರಡು ಟ್ವೀಟ್ ಮಾಡಿದ್ದು,  ಈ ಯೋಜನೆಗೆ ರಾಜ್ಯ ಸರ್ಕಾರ ಟಿಟಿಡಿಗೆ 200 ಕೋಟಿ, ವಿನ್ಯಾಸ, ವಾಸ್ತುಶಿಲ್ಪಕ್ಕಾಗಿ ಖಾಸಗಿ  ಸಂಸ್ಥೆಗೆ ಯೋಜನೆಯ ಶೇ.5(10 ಕೋಟಿ) ಅನ್ನು ನೀಡುತ್ತಿದೆ. ಈ ಯೋಜನೆ ಕೈಗೆತ್ತಿಕೊಳ್ಳಲು ರಾಜ್ಯದ ಲೋಕೋಪಯೋಗಿ ಇಲಾಖೆ ಶಕ್ತವಲ್ಲವೇ? ವಿನ್ಯಾಸ ರೂಪಿಸಲು ಇಲಾಖೆಯಲ್ಲಿ ಯಾರೂ ಇಲ್ಲವೇ? ಕೋವಿಡ್‌ ಸಂಕಷ್ಟ  ಕಾಲದಲ್ಲಿ ಈ ಯೋಜನೆ ಅಗತ್ಯವಾದರೂ ಏನು? ಎಂದು ಪ್ರಶ್ನಿಸಿದ್ದಾರೆ.

ಮೊದಲೇ ಕೊರೊನಾ ಹೆಸರಿನಲ್ಲಿ ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಕಾಂಗ್ರೆಸ್ ಸೇರಿದಂತೆ ಸಾಮಾಜಿಕ ಹೋರಾಟಗಾರರು, ನೆಟ್ಟಿಗರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇಗ ಎಚ್.ಡಿ.ಕುಮಾರಸ್ವಾಮಿ ಕೂಡ ರಾಜ್ಯ ಸರ್ಕಾರದ ವಿರುದ್ಧ ಲೂಟಿಯ ಆರೋಪ ಹೊರಿಸಿದ್ದಾರೆ.

Exit mobile version