ಗದಗ: ಜಿಲ್ಲೆಯಲ್ಲಿ ರವಿವಾರ ದಿ. 12 ರಂದು 13 ಜನರಿಗೆ ಕೊವಿಡ್-19 ಸೋಂಕು ದೃಢ ಪಟ್ಟಿದೆ. ಹಾವೇರಿ ಜಿಲ್ಲೆ ಪ್ರವಾಸದ ಹಿನ್ನಲೆಯುಳ್ಳ ಶಿರಹಟ್ಟಿ ತಾಲೂಕಿನ ಶಿಗ್ಲಿ ಗ್ರಾಮದ ನಿವಾಸಿ 37 ವರ್ಷದ ಪುರುಷ      (ಪಿ-36323) ಸೋಂಕು ದೃಢಪಟ್ಟಿರುತ್ತದೆ.

ಲಕ್ಷ್ಮೇಶ್ವರ ನಗರದ ದಾಸರ ಓಣಿ ನಿವಾಸಿ 24 ವರ್ಷದ ಮಹಿಳೆ ಪಿ-28940 ಸೋಂಕಿತರ ಸಂಪರ್ಕದಿಂದಾಗಿ ಅದೇ ಪ್ರದೇಶದ ನಿವಾಸಿ  20 ವರ್ಷದ ಮಹಿಳೆ (ಪಿ-36447) ಸೋಂಕು ದೃಢಪಟ್ಟಿರುತ್ತದೆ.

ಬೆಳಗಾವಿ ಜಿಲ್ಲೆಯ ಸುರೇಬಾನ ಪ್ರವಾಸದ ಹಿನ್ನೆಲೆಯುಳ್ಳ ಗದಗ ತಾಲೂಕಿನ ಮುಳಗುಂದ ನಿವಾಸಿ 49 ವರ್ಷದ ಪುರುಷ (ಪಿ-36463) ಸೋಂಕು ದೃಢಪಟ್ಟಿರುತ್ತದೆ.

ಬೆಂಗಳೂರಿನಿಂದ ಪ್ರವಾಸದ ಹಿನ್ನೆಲೆಯುಳ್ಳ ಗದಗ ತಾಲೂಕಿನ ಹರ್ತಿ ಗ್ರಾಮದ ನಿವಾಸಿಗಳಾದ 37 ವರ್ಷದ ಮಹಿಳೆ   (36473) ಹಾಗೂ 38 ವರ್ಷದ ಪುರುಷ (36501) ಸೋಂಕು ದೃಢಪಟ್ಟಿರುತ್ತದೆ.

ಗದಗ ಬೆಟಗೇರಿ ಹುಡ್ಕೋ ಕಾಲನಿಯ ನಿವಾಸಿ 47 ವರ್ಷದ ಪುರುಷ (36559) ಸೋಂಕು ದೃಢಪಟ್ಟಿದ್ದು ಸೋಂಕು ಸಂಪರ್ಕದ ಮಾಹಿತಿ ಪತ್ತೆ ಹಚ್ಚಲಾಗುತ್ತಿದೆ.

ಗದಗ ಬೆಟಗೇರಿ ನಗರದ ಬಸವೇಶ್ವರ ನಗರ ನಿವಾಸಿ 51 ವರ್ಷದ ಮಹಿಳೆ ಪಿ-31106 ಸೋಂಕಿತರ ಸಂಪರ್ಕದಿಂದಾಗಿ  ನಗರದ ಶಹಪೂರ ಪೇಟೆಯ ನಿವಾಸಿ 26 ವರ್ಷದ ಪುರುಷ (36570) ಸೋಂಕು ದೃಢಪಟ್ಟಿರುತ್ತದೆ.

ಲಕ್ಷ್ಮೇಶ್ವರ ನಗರದ ದಾಸರ ಓಣಿ ನಿವಾಸಿ 24 ವರ್ಷದ ಮಹಿಳೆ ಪಿ-28940 ಸೋಂಕಿತರ ಸಂಪರ್ಕದಿಂದಾಗಿ ಅದೇ ಪ್ರದೇಶದ ನಿವಾಸಿ 1 ವರ್ಷದ ಮಗು (36586) ಸೋಂಕು ದೃಢಪಟ್ಟಿರುತ್ತದೆ.

ಲಕ್ಷ್ಮೇಶ್ವರದ ಇಂದಿರಾ ನಗರ ನಿವಾಸಿ 41 ವರ್ಷದ ಮಹಿಳೆ ಪಿ-18285 ಸೋಂಕಿತರ ಸಂಪರ್ಕದಿಂದಾಗಿ ಗದಗ ತಾಲೂಕಿನ ನಾಗಾವಿಯ ಗಾಳೆಮ್ಮನ ಗುಡಿ ನಿವಾಸಿಗಳಾದ 32 ವರ್ಷದ ಪುರುಷ (36616) ಹಾಗೂ 4 ವರ್ಷದ ಬಾಲಕ (36634) ಸೋಂಕು ದೃಢಪಟ್ಟಿರುತ್ತದೆ.

ನರಗುಂದದ ಹೊರಕೇರಿ ಓಣಿ ನಿವಾಸಿ 19 ವರ್ಷದ ಯುವಕ (ಪಿ-36666) ಗೆ ಕೆಮ್ಮು ಹಾಗೂ ಜ್ವರದ ಲಕ್ಷಣಗಳಿಂದಾಗಿ ಸೋಂಕು ದೃಢಪಟ್ಟಿರುತ್ತದೆ.

ಬೆಂಗಳೂರಿನಿಂದ ಪ್ರವಾಸದ ಹಿನ್ನೆಲೆಯುಳ್ಳ ಶಿರಹಟ್ಟಿ ತಾಲೂಕಿನ ಗೊಜನೂರು ಗ್ರಾಮದ 33 ವರ್ಷದ ಪುರುಷ  (ಪಿ-36686) ಸೋಂಕು ದೃಢಪಟ್ಟಿರುತ್ತದೆ.

ಗದಗ ಬೆಟಗೇರಿ ಕಾಗದಗಾರ ಓಣಿ ನಿವಾಸಿ 72 ವರ್ಷದ ಪುರುಷ (ಪಿ-36726) ಗೆ ತೀವ್ರ ಉಸಿರಾಟದ ತೊಂದರೆಯ ಲಕ್ಷಣಗಳಿಂದಾಗಿ ಸೋಂಕು ದೃಢಪಟ್ಟಿರುತ್ತದೆ.

ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ. (ರಾಜ್ಯ ಬುಲೆಟಿನನಲ್ಲಿ ಒಂದು ಪ್ರಕರಣ ಪುನರಾವರ್ತನೆಯಾಗಿದ್ದು ಅದನ್ನು ಸರಿಪಡಿಸಲು ಕ್ರಮ ಜರುಗಿಸಲಾಗುತ್ತಿದೆ ಎಂದು ಜಿಲ್ಲಾ ಸಮೀಕ್ಷಣಾ ಅಧಿಕಾರಿಗಳು ತಿಳಿಸಿರುತ್ತಾರೆ.)

Leave a Reply

Your email address will not be published. Required fields are marked *

You May Also Like

ಮುಂಡರಗಿ ಅರಣ್ಯ ಅಧಿಕಾರಿಗಳನ್ನು ವಜಾಗೊಳಿಸಲು ಬೃಹತ್ ಪ್ರತಿಭಟನೆ – ರವಿಕಾಂತ ಅಂಗಡಿ

ಮುಂಡರಗಿ: ಬಗರಹುಕುಂ ಸಾಗುವಳಿದಾರರು ಪೂರ್ವಜರ ಕಾಲದಿಂದ ತಮ್ಮ ಉಪಜೀವನಕ್ಕಾಗಿ ಉಳುಮೆ ಮಾಡುತ್ತಾ ಬಂದಿದ್ದಾರೆ ಅವರನ್ನು ಮುಂಡರಗಿ…

22ನೆ ಸ್ಥಾನದಲ್ಲಿ ಗದಗ ಜಿಲ್ಲೆ : ಕಲಾ ವಿಭಾಗದಲ್ಲಿ ಕಳಪೆ, ಪಿಯುಸಿ-2 ಫಲಿತಾಂಶ ವಿವರ

ಕಳೆದ ಬಾರಿ ಶೇ. 57ರಷ್ಟು ಫಲಿತಾಂಶ ಪಡೆದಿದ್ದ ಜಿಲ್ಲೆ ಈ ಬಾರಿ ಶೇ.63 ಸಾಧನೆ ಮಾಡಿದೆ. ಒಟ್ಟಾರೆ ಜಿಲ್ಲಾವಾರು ಫಲಿತಾಂಶದಲ್ಲಿ ಕಳಪೆ ಸಾಧನೆ ಮಾಡಿದ್ದು, 22 ನೆ ಸ್ಥಾನದಲ್ಲಿದೆ.

ಜಾನುವಾರುಗಳ ಚಿಕಿತ್ಸೆಗೆ ಮನೆ ಬಾಗಿಲಿಗೆ ಬರಲಿದೆ ವಾಹನ: ಯೋಜನೆ ಬಗ್ಗೆ ಇಲ್ಲಿದೆ ಮಾಹಿತಿ

ಜಾನುವಾರುಗಳಿಗೆ ಚಿಕಿತ್ಸೆ ಕೊಡಿಸಲು ರೈತರು ಇನ್ನಿಲ್ಲದ ಹರಸಾಹಸ ಪಡಬೇಕಾಗಿತ್ತು. ಆದರೆ ರಾಜ್ಯದಲ್ಲಿ ಇಂದಿನಿಂದ ಪಶುಸಂಜೀವಿನಿ ಯೋಜನೆಯನ್ನು…

ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರಿಗೆ ಗುಡ್ ನ್ಯೂಸ್!

ಲಾಕ್‌ಡೌನ್‌ ತೆರವಾದ ನಂತರ, ಬಸ್ ಸಂಚಾರ ಆರಂಭಗೊಂಡಿದ್ದರೂ ಪ್ರಯಾಣಿಕರ ಸಂಖ್ಯೆ ನಿರೀಕ್ಷೆಯಂತೆ ಹೆಚ್ಚುತ್ತಿಲ್ಲ. ಅದಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರನ್ನು ಸೆಳೆಯಲು, ದೈನಂದಿನ ಹಾಗೂ ಮಾಸಿಕ ಪಾಸ್‌ಗಳನ್ನು ರಿಯಾಯಿತಿ ದರದಲ್ಲಿ ನೀಡುವ ಯೋಜನೆ ಹಮ್ಮಿಕೊಂಡಿದೆ.