30 ಕೆಜಿ ಚಿನ್ನ ಅಕ್ರಮ ಸಾಗಾಣಿಕೆಯ ಆರೋಪ ಎದುರಿಸುತ್ತಿರುವ  ಸ್ವಪ್ನ ಸುರೇಶ್ ಲಾಕ್ ಡೌನ್ ಸಂದರ್ಭದಲ್ಲಿ ಕೆರಳದಿಂದ ಬೆಂಗಳೂರು ತಲುಪಿದ್ದು ಹೇಗೆ?

ಬೆಂಗಳೂರು: ಯುಎಇಯಿಂದ 30 ಕೆ.ಜಿ. ಚಿನ್ನವನ್ನು ಭಾರತಕ್ಕೆ ಅಕ್ರಮ ಸಾಗಾಣಿಕೆ ಮಾಡಿದ ಆರೋಪ ಎದುರಿಸುತ್ತಿರುವ ಸ್ವಪ್ನ ಸುರೇಶ್ ಅವರನ್ನು ಎನ್ಐಎ (ರಾಷ್ಟ್ರೀಯ ತನಿಖಾ ದಳ) ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಬಂಧಿಸಿತ್ತು. ಸ್ವಪ್ನ ಜೊತೆ ಇನ್ನೊಬ್ಬ ಆರೋಪಿ ಸಂದೀಪ್ ನಾಯರ್ ಕೂಡ ಆಗಲೇ ಸಿಕ್ಕಿಬಿದ್ದಿದ್ದ.

ಲಾಕ್ ಡೌನ್ ಕಟ್ಟುನಿಟ್ಟಿನಲ್ಲಿಯೂ ಸ್ವಪ್ನ ಮತ್ತು ಸಂದೀಪ್ ಕೇರಳ ಗಡಿ ದಾಟಿ ಬೆಂಗಳೂರು ತಲುಪಿದರು ಹೇಗೆ? ತಿರುವನಂತಪುರದಲ್ಲಿರುವ ಬಿಗಿಯಾದ ಸಂಚಾರ ನಿಯಮಗಳನ್ನು ಭೇದಿಸಿ, ಕೇರಳ ಮತ್ತು ತಮಿಳುನಾಡು ಗಡಿಗಳನ್ನು ದಾಟಿ ಅವರಿಬ್ಬರೂ ಬೆಂಗಳೂರು ತಲುಪಿದ್ದಾದರೂ ಹೇಗೆ? ಅಂತಾರಾಜ್ಯ ಪ್ರಯಾಣಕ್ಕೆ ಜನಸಾಮಾನ್ಯರು ಪಾಸ್ ಪಡೆಯಬೇಕು. ಆದರೆ ಆರೋಪಿಗಳು ಹೇಗೆ ಬೆಂಗಳೂರು ತಲುಪಿದರು? ಎಂಬ ಪ್ರಶ್ನೆಗಳನ್ನು ಕೇರಳದ ಕಾಂಗ್ರೆಸ್ ಮತ್ತು ಬಿಜೆಪಿ ಎತ್ತಿವೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಾರ್ಯದರ್ಶಿಯಾಗಿದ್ದ ಶಿವಶಂಕರ್ ಅವರಿಗೆ ಸ್ವಪ್ನ ಆತ್ಮೀಯರಾಗಿದ್ದರು ಎನ್ನಲಾಗಿದೆ. ಕೇರಳ ಸರ್ಕಾರ ಶಿವಶಂಕರ್ ಅವರನ್ನು ವಜಾಗೊಳಿಸಿದೆ.

Leave a Reply

Your email address will not be published. Required fields are marked *

You May Also Like

ಶ್ರೀರಾಮ್ ಘೋಷಣೆಗೆ ಜೈ ಸಿಯಾ ರಾಮ್ ಎಂಬ ಪ್ರತ್ಯುತ್ತರ

ದೇಶದೆಲ್ಲೆಡೆ ಟೂಲ್‌ಕಿಟ್, ರೈತರ ಪ್ರತಿಭಟನೆ, ಪೆಟ್ರೋಲ್ ದರ ಏರಿಕೆ ಸುದ್ದಿಯಾಗುತ್ತಿದ್ದರೆ, ಪಶ್ಚಿಮ ಬಂಗಾಳದಲ್ಲಿ ಮಾತ್ರ ಘೋಷಣೆಗಳ ರಾಜಕೀಯ ನಡೆಯುತ್ತಿದೆ. ಚುನಾವಣೆ ಎದುರು ನೋಡುತ್ತಿರುವ ಪಶ್ಚಿಮ ಬಂಗಾಳದಲ್ಲಿ ಈಗಲೇ ಬಿಜೆಪಿ ಮತ್ತು ಆಡಳಿತರೂಢ ಟಿಎಂಸಿ ಪಕ್ಷಗಳು ತಮ್ಮ ಕಾರ್ಯಕರ್ತರನ್ನು ಸೆಳೆಯಲು ಘೋಷಣೆಗಳ ಮೊರೆ ಹೋಗಿದ್ದಾರೆ.

ಟ್ವೀಟರ್ ನಟ ರಜನಿಕಾಂತ ಟ್ವೀಟ್ ಅಳಿಸಿ ಹಾಕಿದ್ದು ಯಾಕೆ?

ಖ್ಯಾತ ನಟ ರಜನಿಕಾಂತ್ ಮಾಡಿದ ಟ್ವೀಟ್ ನ್ನು ಸ್ವತಃ ಟ್ವೀಕರ್ ಅಳಿಸಿ ಹಾಕಿದೆ. ಅವರ ಟ್ವೀಟ್ ಜಾಗದಲ್ಲೀಗ ಟ್ವೀಟರ್ ನಿಯಮ ಉಲ್ಲಂಘಿಸಿರುವುದರಿಂದ ಈ ಟ್ವೀಟ್ ಲಭ್ಯವಿಲ್ಲ ಎಂದು ಸೂಚಿಸಿದೆ. ಟ್ವೀಟ್ ಅಳಿಸಿ ಹಾಕಲಿ ಕಾರಣ ಏನು ಗೊತ್ತೆ?

ಜಪಾನ್​ನ ಬೆತ್ತಲೆ ಹಬ್ಬದಲ್ಲಿ ಈ ಬಾರಿ ಆಯ್ದ ಜನರಿಗೆ ಮಾತ್ರ ಎಂಟ್ರಿ!

ಕೊರೋನಾ ಸೋಂಕಿನ ರಣಕೇಕೆಯಿಂದ ಸಾವಿರಾರು ಜನರು ಪ್ರಾಣ ಕಳೆದುಕೊಂಡರು. ಅಷ್ಟೇ ಅಲ್ಲದೇ ದೇಶ-ವಿದೇಶಗಳಲ್ಲಿಯೂ ಕೊರೊನಾ ಸೋಂಕಿನಿಂದಾಗಿ ಪ್ರತಿವರ್ಷ ನಡೆಯುತ್ತಿದ್ದ ಹಲವಾರು ಕಾರ್ಯಕ್ರಮಗಳು ಸ್ಥಗಿತಗೊಂಡಿವೆ.

4 ಮಕ್ಕಳ ತಾಯಿಯೊಂದಿಗೆ ಲವ್ ನಲ್ಲಿ ಬಿದ್ದ ವೈದ್ಯ, ಮುಂದೇನಾಯ್ತು?

ಲಕ್ನೋ : ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ನಾಲ್ಕು ಮಕ್ಕಳ ತಾಯಿಯೊಂದಿಗೆ ಲವ್ ನಲ್ಲಿ ಬಿದ್ದ ವೈದ್ಯ, ಅವಳನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.