30 ಕೆಜಿ ಚಿನ್ನ ಅಕ್ರಮ ಸಾಗಾಣಿಕೆಯ ಆರೋಪ ಎದುರಿಸುತ್ತಿರುವ  ಸ್ವಪ್ನ ಸುರೇಶ್ ಲಾಕ್ ಡೌನ್ ಸಂದರ್ಭದಲ್ಲಿ ಕೆರಳದಿಂದ ಬೆಂಗಳೂರು ತಲುಪಿದ್ದು ಹೇಗೆ?

ಬೆಂಗಳೂರು: ಯುಎಇಯಿಂದ 30 ಕೆ.ಜಿ. ಚಿನ್ನವನ್ನು ಭಾರತಕ್ಕೆ ಅಕ್ರಮ ಸಾಗಾಣಿಕೆ ಮಾಡಿದ ಆರೋಪ ಎದುರಿಸುತ್ತಿರುವ ಸ್ವಪ್ನ ಸುರೇಶ್ ಅವರನ್ನು ಎನ್ಐಎ (ರಾಷ್ಟ್ರೀಯ ತನಿಖಾ ದಳ) ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಬಂಧಿಸಿತ್ತು. ಸ್ವಪ್ನ ಜೊತೆ ಇನ್ನೊಬ್ಬ ಆರೋಪಿ ಸಂದೀಪ್ ನಾಯರ್ ಕೂಡ ಆಗಲೇ ಸಿಕ್ಕಿಬಿದ್ದಿದ್ದ.

ಲಾಕ್ ಡೌನ್ ಕಟ್ಟುನಿಟ್ಟಿನಲ್ಲಿಯೂ ಸ್ವಪ್ನ ಮತ್ತು ಸಂದೀಪ್ ಕೇರಳ ಗಡಿ ದಾಟಿ ಬೆಂಗಳೂರು ತಲುಪಿದರು ಹೇಗೆ? ತಿರುವನಂತಪುರದಲ್ಲಿರುವ ಬಿಗಿಯಾದ ಸಂಚಾರ ನಿಯಮಗಳನ್ನು ಭೇದಿಸಿ, ಕೇರಳ ಮತ್ತು ತಮಿಳುನಾಡು ಗಡಿಗಳನ್ನು ದಾಟಿ ಅವರಿಬ್ಬರೂ ಬೆಂಗಳೂರು ತಲುಪಿದ್ದಾದರೂ ಹೇಗೆ? ಅಂತಾರಾಜ್ಯ ಪ್ರಯಾಣಕ್ಕೆ ಜನಸಾಮಾನ್ಯರು ಪಾಸ್ ಪಡೆಯಬೇಕು. ಆದರೆ ಆರೋಪಿಗಳು ಹೇಗೆ ಬೆಂಗಳೂರು ತಲುಪಿದರು? ಎಂಬ ಪ್ರಶ್ನೆಗಳನ್ನು ಕೇರಳದ ಕಾಂಗ್ರೆಸ್ ಮತ್ತು ಬಿಜೆಪಿ ಎತ್ತಿವೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಾರ್ಯದರ್ಶಿಯಾಗಿದ್ದ ಶಿವಶಂಕರ್ ಅವರಿಗೆ ಸ್ವಪ್ನ ಆತ್ಮೀಯರಾಗಿದ್ದರು ಎನ್ನಲಾಗಿದೆ. ಕೇರಳ ಸರ್ಕಾರ ಶಿವಶಂಕರ್ ಅವರನ್ನು ವಜಾಗೊಳಿಸಿದೆ.

Leave a Reply

Your email address will not be published. Required fields are marked *

You May Also Like

ತಿರುಪತಿ ತಿಮ್ಮಪ್ಪನ ದರ್ಶನ ಯಾವಾಗ?

ಕೇಂದ್ರ ಸರ್ಕಾರ ಜೂ. 30ರ ವರೆಗೂ ಲಾಕ್ ಡೌನ್ ಘೋಷಣೆ ಮಾಡಿದೆ. ಅಲ್ಲದೇ, ಈ ಬಾರಿ ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದ್ದು, ಅದಕ್ಕಾಗಿ ಈ ವಾರವೇ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ.

ಮಾಜಿ ಕ್ರಿಕೆಟ್ ಕ್ಯಾಪ್ಟನ್ ಮೇಲೊಂದು ಜೀವನ ಚಿತ್ರ.

ನವದೆಹಲಿ: ನಮ್ಮೆಲ್ಲರ ನೆಚ್ಚಿನ ಭಾರತದ ಮಾಜಿ ಕ್ಯಾಪ್ಟನ್ ಹಾಗೂ ದಾದಾ ಎಂದಲೆ ಹೆಸರಾದಂತ ಈಗಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರು ಬಾಲಿವುಡ್ ನಲ್ಲಿ ತಮ್ಮ ಜೀವನ ಚರಿತ್ರೆ ಮೇಲೊಂದು ಚಿತ್ರದ ಚಿತ್ರೀಕರಣಕ್ಕೆ ಒಪ್ಪಿಕೊಂಡಿದ್ದಾರೆ.

ಶ್ರೀಮಂತರ ಪಟ್ಟಿಯಲ್ಲಿ ಕೆಳಕ್ಕೆ ಇಳಿದ ಮುಖೇಶ್ ಅಂಬಾನಿ!

ಮುಂಬಯಿ : ಫೋರ್ಬ್ಸ್ ಪಟ್ಟಿಯಲ್ಲಿ ಹಿಂದಕ್ಕೆ ಬಿದ್ದಿರುವ ಭಾರತೀಯ ಉದ್ಯಮಿ ಮುಖೇಶ್ ಅಂಬಾನಿ ಅವರು 9ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.

ಜಾರ್ಖಂಡ್ ನಲ್ಲಿ ಜುಲೈ ಅಂತ್ಯದವರೆಗೆ ಲಾಕ್ ಡೌನ್ ಘೋಷಣೆ!

ರಾಂಚಿ : ಕೊರೊನಾ ವೈರಸ್ ನ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಾರ್ಖಂಡ್ ನಲ್ಲಿ…