30 ಕೆಜಿ ಚಿನ್ನ ಅಕ್ರಮ ಸಾಗಾಣಿಕೆಯ ಆರೋಪ ಎದುರಿಸುತ್ತಿರುವ  ಸ್ವಪ್ನ ಸುರೇಶ್ ಲಾಕ್ ಡೌನ್ ಸಂದರ್ಭದಲ್ಲಿ ಕೆರಳದಿಂದ ಬೆಂಗಳೂರು ತಲುಪಿದ್ದು ಹೇಗೆ?

ಬೆಂಗಳೂರು: ಯುಎಇಯಿಂದ 30 ಕೆ.ಜಿ. ಚಿನ್ನವನ್ನು ಭಾರತಕ್ಕೆ ಅಕ್ರಮ ಸಾಗಾಣಿಕೆ ಮಾಡಿದ ಆರೋಪ ಎದುರಿಸುತ್ತಿರುವ ಸ್ವಪ್ನ ಸುರೇಶ್ ಅವರನ್ನು ಎನ್ಐಎ (ರಾಷ್ಟ್ರೀಯ ತನಿಖಾ ದಳ) ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಬಂಧಿಸಿತ್ತು. ಸ್ವಪ್ನ ಜೊತೆ ಇನ್ನೊಬ್ಬ ಆರೋಪಿ ಸಂದೀಪ್ ನಾಯರ್ ಕೂಡ ಆಗಲೇ ಸಿಕ್ಕಿಬಿದ್ದಿದ್ದ.

ಲಾಕ್ ಡೌನ್ ಕಟ್ಟುನಿಟ್ಟಿನಲ್ಲಿಯೂ ಸ್ವಪ್ನ ಮತ್ತು ಸಂದೀಪ್ ಕೇರಳ ಗಡಿ ದಾಟಿ ಬೆಂಗಳೂರು ತಲುಪಿದರು ಹೇಗೆ? ತಿರುವನಂತಪುರದಲ್ಲಿರುವ ಬಿಗಿಯಾದ ಸಂಚಾರ ನಿಯಮಗಳನ್ನು ಭೇದಿಸಿ, ಕೇರಳ ಮತ್ತು ತಮಿಳುನಾಡು ಗಡಿಗಳನ್ನು ದಾಟಿ ಅವರಿಬ್ಬರೂ ಬೆಂಗಳೂರು ತಲುಪಿದ್ದಾದರೂ ಹೇಗೆ? ಅಂತಾರಾಜ್ಯ ಪ್ರಯಾಣಕ್ಕೆ ಜನಸಾಮಾನ್ಯರು ಪಾಸ್ ಪಡೆಯಬೇಕು. ಆದರೆ ಆರೋಪಿಗಳು ಹೇಗೆ ಬೆಂಗಳೂರು ತಲುಪಿದರು? ಎಂಬ ಪ್ರಶ್ನೆಗಳನ್ನು ಕೇರಳದ ಕಾಂಗ್ರೆಸ್ ಮತ್ತು ಬಿಜೆಪಿ ಎತ್ತಿವೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಾರ್ಯದರ್ಶಿಯಾಗಿದ್ದ ಶಿವಶಂಕರ್ ಅವರಿಗೆ ಸ್ವಪ್ನ ಆತ್ಮೀಯರಾಗಿದ್ದರು ಎನ್ನಲಾಗಿದೆ. ಕೇರಳ ಸರ್ಕಾರ ಶಿವಶಂಕರ್ ಅವರನ್ನು ವಜಾಗೊಳಿಸಿದೆ.

Leave a Reply

Your email address will not be published. Required fields are marked *

You May Also Like

ನಟಿ ಖುಷ್ಬೂ ಅವರನ್ನು ಬಂಧಿಸಿದ ಪೊಲೀಸರು!

ಚೆನ್ನೈ : ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರು ತಮಿಳುನಾಡಿನ ಚಿದಂಬರಂಗೆ ಹೋಗುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಎಷ್ಟು..?

ಬೆಂಗಳೂರು: ಜಗತ್ತಿನ ಆತಂಕಕ್ಕೆ ಕಾರಣವಾಗಿರುವ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮುಂದುವರೆಸಿದೆ. ಸದ್ಯ ಕೊರೊನಾಗೆ…

ಶ್ರೀಮಂತರ ಪಟ್ಟಿಯಲ್ಲಿ ಕೆಳಕ್ಕೆ ಇಳಿದ ಮುಖೇಶ್ ಅಂಬಾನಿ!

ಮುಂಬಯಿ : ಫೋರ್ಬ್ಸ್ ಪಟ್ಟಿಯಲ್ಲಿ ಹಿಂದಕ್ಕೆ ಬಿದ್ದಿರುವ ಭಾರತೀಯ ಉದ್ಯಮಿ ಮುಖೇಶ್ ಅಂಬಾನಿ ಅವರು 9ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.

ಹಳ್ಳಿ ಕಡೆಗೆ ಕೊರೋನಾ ನಡಿಗೆ…!

ಬೆಂಗಳೂರು: ಇತ್ತಿಚಿನ ಕೊರೋನಾ ಸೋಂಕಿತರ ಸಂಖ್ಯೆಯನ್ನು ಗಮನಿಸಿದರೆ ಹಳ್ಳಿ ಕಡೆಗೆ ನನ್ನ ನಡಿಗೆ ಎಂದು ಕೊರೋನಾ…