ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಜನ್ಮದಿನಾಚರಣೆ ಮಾಡಿಕೊಳ್ಳುತ್ತಿದ್ದು, ತಮಗೆ ಶುಭಕೋರಲು ಮನೆಗೆ ಬರಬೇಡಿ, ನಿಮ್ಮ ಆರೋಗ್ಯದ ಕಡೆಗೆ ಗಮನ ಕೊಡಿ ಎಂದು ಅವರು ಮನವಿ ಮಾಡಿಕೊಂಡಿದ್ದರು.

ಇಂದು ಸಾಮಾಜಿಕ ಜಾಲತಾಣಗಳಲ್ಲಿ ಶಿವರಾಜ್ ಕುಮಾರ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದ್ದು, ಶಿವಣ್ಣ 12/7/62.. ನಾನು 17/3/63 ನನಗಿಂತ 8ತಿಂಗಳು ಹಿರಿಯರು..ನನಗೆ ಇನ್ನೊಂದು ಜನ್ಮ  ಇದ್ದರೆ ಶಿವಣ್ಣನೆ ನನಗೆ ಅಣ್ಣನಾಗಿ ಬರಲಿ.. ನನ್ನ ಬದುಕಲ್ಲಿ ನಾನು ಕಂಡ ಶ್ರೇಷ್ಠಮನುಜ..ರಾಜಣ್ಣ ಅವರ ಕರೆಯುತ್ತಿದ್ದದ್ದು ದೊಡ್ಡ ನೋಟಿನ ಸಾಹುಕಾರ ಎಂದು! ಕಾರಣ ಇವರು ಹುಟ್ಟಿದ ದಿನ ರಾಜಣ್ಣನಿಗೆ ನಿರ್ಮಾಪಕರು 6 ಸಾವಿರದ ನೋಟು ಮುಂಗಡ  ನೀಡಿದ್ದರಂತೆ! ಎಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ತಾಯಿ ಚಾಮುಂಡೇಶ್ವರಿ ನಿಮಗೆ ಇನ್ನಷ್ಟು ಕಾಲ ಉತ್ತಮ ಆರೋಗ್ಯ, ಆಯುಷ್ಯ ಕೊಟ್ಟು ಕನ್ನಡದ ಕಲಾಸೇವಯನ್ನು ಮತ್ತಷ್ಟು ವರುಷಗಳ ಕಾಲ ಮುಂದುವರೆಸುವ ಭಾಗ್ಯ ನೀಡಿ ಹರಸಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯಸಭಾ ಚುನಾವಣೆ: ಸಂಘ ನಿಷ್ಟರಿಗೆ ಮಣೆ ಕಮಲದಲ್ಲಿ ಅಸಂತೋಷ..!

ಬೆಂಗಳೂರು: ಇತ್ತಿಚೆಗಷ್ಟೆ ಶಾಸಕ ಉಮೇಶ್ ಕತ್ತಿ ತಮ್ಮ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭೆಗೆ ಕಳಿಸಬೇಕು ಎಂದು…

6 ತಿಂಗಳ ನಂತರವೂ ಕೇಂದ್ರಕ್ಕೆ ಗೊಂದಲವೇ?: ಕವಾಟವಿರುವ ಎನ್-95 ಮಾಸ್ಕ್ ಅಪಾಯಕಾರಿ’

ಕೇಂದ್ರ ಆರೋಗ್ಯ ಸೇವೆಗಳ ಡೈರೆಕ್ಟರ್ ಜನರಲ್ ಹೊರಡಿಸಿದ ಸುತ್ತೋಲೆ ಈಗ ಜನರನ್ನು ಗೊಂದಲಕ್ಕೆ ತಳ್ಳಿದೆ.ಸದ್ಯ ಬಳಕೆಯಲ್ಲಿರುವ ಕವಾಟ ಅಥವಾ ರಂಧ್ರಗಳಿರುವ ಎನ್-95 ಮಾಸ್ಕ್ ಸೋಂಕು ತಡೆಯಲಾರವು.

ಮಹಿಳೆಯಿಂದ ಕಾಂಗ್ರೆಸ್ ಮುಖಂಡನಿಗೆ ಥಳಿತ

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಉತ್ತರ ಪ್ರದೇಶದ ಜಲೌನ್ ಜಿಲ್ಲಾಧ್ಯಕ್ಷ ಅನುಜ್ ಮಿಶ್ರಾ ಎಂಬ ವ್ಯಕ್ತಿಯ ಮೇಲೆಯೇ ಹಲ್ಲೆ ನಡೆದಿದೆ.

ಸಂಗೀತಾಳಿಗೆ ಬೇಕಿದೆ ಸಹಾಯ: ಪಿಯಸಿಯಲ್ಲಿ ಶೇ.90 ಅಂಕ; ಬೆಂಬಿಡದ ಬಡತನದಿಂದ ಶಿಕ್ಷಣ ನಿಲ್ಲಿಸಲು ಮುಂದಾದ ವಿದ್ಯಾರ್ಥಿನಿ..!

ಪಿಯುಸಿ ಪರೀಕ್ಷೆಯಲ್ಲಿ ಶೇ.90 ಅಂಕ ಪಡೆದ ಪ್ರತಿಭಾವಂತೆಯ ಕಥೆ ಇದು. ಪಿಯುಸಿಯಲ್ಲಿನ ಹೆಚ್ಚು ಅಂಕದ ಉತ್ಸಾಹದಲ್ಲಿದ್ದ ವಿದ್ಯಾರ್ಥಿನಿಗೆ ಕುಟುಂಬದ ಆರ್ಥಿಕ ಸ್ಥಿತಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುವ ಹಂತಕ್ಕೆ ತಂದಿದೆ. ಹೀಗಾಗಿ ಬದುಕಿನಲ್ಲಿ ಓದಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹತ್ತು ಹಲವು ಕನಸು ಕಟ್ಟಿಕೊಂಡಿದ್ದ ವಿದ್ಯಾರ್ಥಿನಿ ಸಂಗೀತಾಳಿಗೆ ಓದು ಮುಂದುವರೆಸುವುದು ಕಷ್ಟವಾಗಿದೆ.