3ನೆ ಸ್ಥಾನದಲ್ಲಿರುವ ದೆಹಲಿಯಲ್ಲಿ 1,781 ಮತ್ತು 4ನೆ ಸ್ಥಾನದಲ್ಲಿರುವ ಗುಜರಾತಿನಲ್ಲಿ 871 ಕೇಸು ಶನಿವಾರ ದಾಖಲಾಗಿದ್ದರೆ, 5ನೆ ಸ್ಥಾನ ತಲುಪಿದ ರಾಜ್ಯದಲ್ಲಿ ಈ ಎರಡೂ ರಾಜ್ಯಗಳಿಗಿಂತ ಹೆಚ್ಚು ಕೇಸು (2,798) ದಾಖಲಾಗಿವೆ.

ಬೆಂಗಳೂರು: ಸೋಂಕಿತರ ಸಂಖ್ಯೆಯ ಆಧಾರದ ಪಟ್ಟಿಯಲ್ಲಿ (ಕೇಸ್-ಲೋಡ್) ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. 6ನೆ ಸ್ಥಾನದಲ್ಲಿದ್ದ ಕರ್ನಾಟಕ ಶನಿವಾರ ಉತ್ತರಪ್ರದೇಶವನ್ನು ದಾಟಿ 5ನೆ ಸ್ಥಾನಕ್ಕೆ ಏರಿದೆ.
ಆದರೆ ಇದೆಲ್ಲಕ್ಕೂ ಶಾಕಿಂಗ್ ನ್ಯೂಸ್ ಎಂದರೆ, ಈಗ ಕರ್ನಾಟಕ ಅತಿ ವೇಗವಾಗಿ ಸೋಂಕು ಹರಡಲ್ಪಡುತ್ತಿರುವ ರಾಜ್ಯವಾಗಿದೆ. ರಾಜ್ಯದ ಪ್ರತಿದಿನದ ಕೇಸುಗಳಲ್ಲಿ ಅರ್ಧದಷ್ಟು ಕೇಸುಗಳು ಬೆಂಗಳೂರಿನಿಂದಲೇ ವರದಿಯಾಗುತ್ತಿದ್ದು ಬೆಂಗಳೂರು ಈಗ ಮತ್ತೊಂದು ವಾರದ ಲಾಕ್ ಡೌನ್ ಗೆ ಒಳಗಾಗಬೇಕಾಗಿದೆ.
ಶನಿವಾರ ರಾಜ್ಯದಲ್ಲಿ 2,798 ಕೇಸುಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆಯಲ್ಲಿ (ಕೇಸ್-ಲೋಡ್) ಉತ್ತರಪ್ರದೇಶಕ್ಕಿಂತ ಹೆಚ್ಚು ಸೋಂಕಿತರನ್ನು ಹೊಂದಿದ ರಾಜ್ಯವಾಗಿದೆ. ಮೊದಲ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ 2,46,600, 2ನೆ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ 1.34, 226, 3ನೆ ಸ್ಥಾನದಲ್ಲಿರುವ ದೆಹಲಿಯಲ್ಲಿ 1,10.921, 4ನೆ ಸ್ಥಾನದಲ್ಲಿರುವ ಗುಜರಾತಿನಲ್ಲಿ 41,026 ಕೇಸುಗಳಿದ್ದರೆ ಶನಿವಾರ 5ನೆ ಸ್ಥಾನ ತಲುಪಿರುವ ರಾಜ್ಯದಲ್ಲಿ 36,216 ಸೋಂಕಿನ ಪ್ರಕರಣಗಳು ದಾಖಲಾಗಿವೆ.
3ನೆ ಸ್ಥಾನದಲ್ಲಿರುವ ದೆಹಲಿಯಲ್ಲಿ 1,781 ಮತ್ತು 4ನೆ ಸ್ಥಾನದಲ್ಲಿರುವ ಗುಜರಾತಿನಲ್ಲಿ 871 ಕೇಸು ಶನಿವಾರ ದಾಖಲಾಗಿದ್ದರೆ, 5ನೆ ಸ್ಥಾನ ತಲುಪಿದ ರಾಜ್ಯದಲ್ಲಿ ಈ ಎರಡೂ ರಾಜ್ಯಗಳಿಗಿಂತ ಹೆಚ್ಚು ಕೇಸು (2,798) ದಾಖಲಾಗಿವೆ.

ರಾಜ್ಯವಾರು ಮಾಹಿತಿ

ಸಾವಿನ ಸಂಖ್ಯೆಯಲ್ಲೂ ಹೆಚ್ಚಳ
ಕಳೆದ ವಾರದಲ್ಲಿ ಕರ್ನಾಟಕದಲ್ಲಿ ಸಾವುಗಳ ಸಂಖ್ಯೆ ಹೆಚ್ಚಿದೆ.
• ರಾಜ್ಯದ ಒಟ್ಟು ಕೋರೊನಾ ಸಾವು: 617
• ಈ 30 ದಿನದಲ್ಲಿ ಸಂಭವಿಸಿದ ಸಾವು: 367 (ಒಟ್ಟು ಸಾವಿನ ಶೇ. 60ರಷ್ಟು ಈ ತಿಂಗಳಲ್ಲೇ ಸಂಭವಿಸಿವೆ ಎಂಬುದು ಎಚ್ಚರಿಕೆಯ ಗಂಟೆ)
• ಕಳೆದ ನಾಲ್ಕು ದಿನಗಳಲ್ಲಿ ಕೋರೊನಾ ಸಾವು: ಸುಮಾರು 200
• ನಿನ್ನೆ ಶನಿವಾರ ಒಂದೇ ದಿನದಲ್ಲಿ ಸಾವು: 70
ಮೊದಲೆರಡು ಸ್ಥಾನಗಳಲ್ಲಿರುವ ಮಹಾರಾಷ್ಟ್ರ ಮತ್ತು ತಮಿಳುನಾಡುಗಳಲ್ಲಿ ಸಂಭವಿಸುತ್ತಿರುವ ಸಾವುಗಳಿಗೆ ಹೋಲಿಕೆ ಮಾಡುವಷ್ಟು ರಾಜ್ಯ ಸಮೀಪವಿದೆ.
ಕೇಸುಗಳ ದೈನಿಕ ಬೆಳವಣಿಗೆ ದರದಲ್ಲಿ ರಾಜ್ಯದ ಪ್ರಮಾಣ ಶೇ. 7.7 ಇದ್ದರೆ, ಒಟ್ಟು ರಾಷ್ಟ್ರೀಯ ದರ ಇಳಿಯುತ್ತ ಶೇ. 3.4 ತಲುಪಿದೆ. ಕೇಸುಗಳ ದೈನಿಕ ಬೆಳವಣಿಗೆ ದರದಲ್ಲಿ ಕರ್ನಾಟಕಕ್ಕಿಂತ ಮುಂದಿದ್ದ ತೆಲಂಗಾಣದಲ್ಲಿ ಈಗ ದೈನಿಕ ಕೇಸುಗಳ ಸಂಖ್ಯೆ ಇಳಿಯುತ್ತ ಬಂದು ದರ ಶೇ. 6ಕ್ಕೆ ಇಳಿದಿದೆ.
ಇದು ರಾಕ್ಯ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಬೇಕು. ದೈನಂದಿನ ಸೋಂಕು ಸಂಖ್ಯೆ ಮತ್ತು ಸಾವಿನ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ.
(ಮಾಹಿತಿ: ಅಮಿತಾಬ್ ಸಿನ್ಹಾ ಲೇಖನ, ಇಂಡಿಯನ್ ಎಕ್ಸ್ ಪ್ರೆಸ್)

Leave a Reply

Your email address will not be published. Required fields are marked *

You May Also Like

ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಕೋವಿನ್ ಪೋರ್ಟಲ್ ಲಭ್ಯ

ಕೋವಿನ್ ಪೋರ್ಟಲ್ ಹಿಂದಿ ಸೇರಿದಂತೆ 10 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ನಮಸ್ತೆ ಟ್ರಂಪ್ ಕಾರ್ಯಕ್ರಮದಿಂದಲೇ ಕೊರೊನಾ ಹಬ್ಬಿದ್ದು – ಕಾಂಗ್ರೆಸ್

ನಮಸ್ತೆ ಟ್ರಂಪ್ ಕಾರ್ಯಕ್ರಮದಿಂದಲೇ ರಾಜ್ಯದಲ್ಲಿ ಕೊರೊನಾ ಹಬ್ಬಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಮದುಮಗ ಹಾರ ಹಾಕಿದ್ ಕೂಡಲೇ ಖುಷಿಯಾದ ಮದುಮಗಳು ಮಾಡಿದ್ದೇನು?

ಉತ್ತರ ಪ್ರದೇಶ: ಪ್ರತಿಯೊಬ್ಬರಿಗೂ ಮದುವೆ ಬಗ್ಗೆ ಅವರದ್ದೆ ಕನಸಿರುತ್ತೆ. ಆಸೆ-ಆಕಾಂಕ್ಷೆಗಳಿರುತ್ತೆ. ಆದರೆ ಇಲ್ಲೊಬ್ಬ ಯುವತಿ ಮದುಮಗ ತನ್ನ ಕೊರಳಿಗೆ ಹಾರ ಹಾಕಿದ ತಕ್ಷಣ ತನ್ನ ಪ್ರತಿಕ್ರಿಯೇ ಹೇಗಿರಬೇಕೆಂದು ವಿಭಿನ್ನ ಕಲ್ಪನೆಯೊಂದನ್ನು ಕಟ್ಟಿಕೊಂಡಿದ್ದಳು. ಈ ಕಾರಣಕ್ಕಾಗಿ ಏನೋ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ

ಲಕ್ಷ್ಮೇಶ್ವರ :ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ ನಡೆಯುತ್ತಿದ್ದು ಅಕ್ಕಿಯ ಲೋಡಿನ ಗಾಡಿಯನ್ನು…