ಕೋವಿಡ್ ನಿಯಮ ಉಲ್ಲಂಘಿಸಿ ಭರ್ಜರಿ ಪಾರ್ಟಿ ಆಚರಿಸಿಕೊಂಡಿದ್ದ ಶ್ರೀರಾಮುಲು ಆಪ್ತ ಎಚ್.ಎಸ್. ಶಿವನಗೌಡರನ್ನು ಜಿಲ್ಲಾ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ಪೊಲೀಸರು ಪಾರ್ಟಿ ಕುರಿತಂತೆ  ಕೋರ್ಟಿನಲ್ಲಿ ಸ್ವಯಂ ದೂರು ದಾಖಲಿಸಿದ್ದು ಇಂದು ಸೋಮವಾರ ಶಿವನಗೌಡರು ಕೋರ್ಟಿಗೆ ಹಾಜರಾಗಬಹುದು ಎನ್ನಲಾಗಿದೆ.

ಗದಗ:  ಮದುವೆಗೆ ಅನುಮತಿ ಕೊಡುವಾಗಲೂ ಇಂತಿಷ್ಟೇ ಜನ ಇರಬೇಕೆಂದು ನಿಗದಿಗೊಳಿಸಿ ಷರತ್ತುಬದ್ಧ ಅನುಮತಿ ನೀಡಲಾಗುತ್ತಿದೆ. ಕೋರೊನಾ ಸೋಂಕು ನಿಯಂತ್ರಣಕ್ಕೆ ಅದು ಅಗತ್ಯವೂ ಹೌದು. ಆದರೆ, ರಾಜಕಾರಣಿಗಳು ಅಲ್ಲಲ್ಲಿ ಪಾರ್ಟಿ-ಆಚರಣೆ  ಮಾಡಿದ ವಿಡಿಯೋಗಳು ವೈರಲ್ ಆಗುತ್ತಲೇ ಬಂದಿದ್ದವು.

ಕಳೆದ  ಶುಕ್ರವಾರ ಜುಲೈ 10ರಂದು ನಗರದ ಶ್ರೀನಿವಾಸ ಭವನದಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಆಪ್ತ ಶಿವನಗೌಡರು ಕೋವಿಡ್ ಸಂದರ್ಭದ 144 ಕಲಂ ಉಲ್ಲಂಘಿಸಿ ಭರ್ಜರಿ ಪಾರ್ಟಿ ನಡೆಸಿದ್ದರು. ಇದರ ವಿಡಿಯೋ ಟಿವಿ ಮಾದ್ಯಮ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದರಿಂದ ಮುಜುಗರಕ್ಕೆ ಒಳಗಾದ ಬಿಜೆಪಿ ಶಿವನಗೌಡರ ಮೇಲೆ ಕ್ರಮ ಕೈಗೊಂಡಿದೆ.

ರಾಜ್ಯ ಬಿಜೆಪಿಯ ಆದೇಶದಂತೆ ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ ಮಾಳಶೆಟ್ಟರ್ ಅವರು ಶಿವನಗೌಡ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಆದೇಶ ಹೊರಡಿಸಿದ್ದಾರೆ.

ಹುಟ್ಟುಹಬ್ಬ ಆಚರಣೆಗೆ ಯಾವುದೇ ಅನುಮತಿ ಪಡೆಯದೇ 144 ಕಲಂ ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ವಿಪತ್ತು ನಿರ್ವಹಣಾ ಕಾಯ್ದೆಯ  ಐಪಿಸಿ  ಕಲಂ 188ರ ಅಡಿಯಲ್ಲಿ  ಕೋರ್ಟಿಗೆ ಸ್ವಯಂ ದೂರು ದಾಖಲಿಸಿದ್ದರು. ಭಾನುವಾರ ಕೋರ್ಟ್ ರಜೆ ಇದ್ದ ಕಾರಣ ಇಂದು ಸೋಮವಾರ ಶಿವನಗೌಡರನ್ನು ವಿಚಾರಣೆಗೆ ಕರೆಯಬಹುದು ಎನ್ನಲಾಗಿದೆ.

 ಈ ವಿಚಾರಕ್ಕೆ ಸಂಬಂಧಿಸಿದಂತೆ 6 ಜನ ಹಾಗೂ ಇತರರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಗದಗ ಎಸ್.ಪಿ ಎನ್.ಯತೀಶ್ ತಿಳಿಸಿದ್ದಾರೆ. ಇತ್ತಿಚೆಗಷ್ಟೆ ಅದ್ಧುರಿ ಮೆರವಣಿಗೆಯೊಂದರಲ್ಲಿ ಭಾಗವಹಿಸಿ ಸ್ವತಃ ಆರೋಗ್ಯ ಸಚಿವರೇ ಕೋವಿಡ್ ನಿಮಯ ಉಲ್ಲಂಘನೆಯ ಆರೋಪಕ್ಕೆ ಗುರಿಯಾಗಿದ್ದರು. ಆದರೆ ಇದೀಗ ಅವರ ಆಪ್ತನಿಂದ ಕೋವಿಡ್ ನಿಯಮ ಉಲ್ಲಂಘನೆಯಾಗಿದೆ.

Leave a Reply

Your email address will not be published. Required fields are marked *

You May Also Like

ಕಲಾವಿದರಿಗೆ ಆರ್ಥಿಕ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಗದಗ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರೋನಾ ವೈರಸ್‌ನ ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸಲು ರಾಜ್ಯದ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಭಂದಿಸಿ ಲಾಕಡೌನ್ ಘೋಷಿಸಲಾಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಮತ್ತು ಕಲಾತಂಡಗಳ ಪ್ರತಿ ಫಲಾನುಭವಿಗಳಿಗೆ ತಲಾ 3,000 ರೂ.ಗಳಂತೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ.

ಜಿಪಂ ಅಧ್ಯಕ್ಷರಾಗಿ ಈರಪ್ಪ ಈಶ್ವರಪ್ಪ ನಾಡಗೌಡರ ಅವಿರೋಧ ಆಯ್ಕೆ

ರಾಜೀನಾಮೆಯಿಂದ ತೆರವಾದ ಗದಗ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಹುದ್ದೆಯ 5 ವರ್ಷದ ಬಾಕಿ ಉಳಿದ ಅವಧಿಗೆ ಶುಕ್ರವಾರ ಜರುಗಿದ ಚುನಾವಣೆಯಲ್ಲಿ ಮುಂಡರಗಿ ತಾಲ್ಲೂಕಿನ ಹಿರೇವಡ್ಡಟ್ಟಿ ಜಿ.ಪಂ ಕ್ಷೇತ್ರದ ಸದಸ್ಯರಾದ ಈರಪ್ಪ ಈಶ್ವರಪ್ಪ ನಾಡಗೌಡರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ

ದಾವಲಸಾಬ ಉರ್ಪ ಭಾಷಾಸಾಬ ಫಕ್ರುಸಾಬ ಮಲ್ಲಸಮುದ್ರ ಇವರನ್ನು ಗದಗ ಬ್ಲಾಕ್ ಅಧ್ಯಕ್ಷರನ್ನಾಗಿ ಮುಂದುವರಿಕೆ

ಗದಗ : ಕೆ.ಪಿ.ಸಿ.ಸಿ. ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕ ಗದಗ ಬ್ಲಾಕ್ ಅಧ್ಯಕ್ಷರಾದ ದಾವಲಸಾಬ ಉರ್ಪ…

ಬಿಪಿಎಲ್ ಕಾರ್ಡ್ ದಾರರು, ರೈತರಿಗೆ ಮತ್ತೊಂದು ಗುಡ್ ನ್ಯೂಸ್

ಸರ್ಕಾರದ ಬೆಂಬಲ ಬೆಲೆಯೊಂದಿಗೆ ರಾಗಿ, ಭತ್ತ ಜೋಳ ಖರೀದಿಗೆ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಅಗತ್ಯವರುವ ಕಡೆಗಳಲ್ಲಿ ಹೆಚ್ಚಿನ ಖರೀದಿ ಕೇಂದ್ರಗಳನ್ನು ತೆರದು ಈ ಬಗ್ಗೆ ಪ್ರಚಾರಗೊಳಿಸುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅನಿಲ್ ಕುಮಾರ್ ತಿಳಿಸಿದ್ದಾರೆ.