ಐಎಂಎ (ಇಂಡಿಯನ್ ಮೆಡಿಕಲ್ ಅಸೋಸಿಯೇಷನ್) ಕರ್ನಾಟಕ ಚಾಪ್ಟರ್ ಮಾಜಿ ಅಧ್ಯಕ್ಷ ಡಾ. ರವೀಂದ್ರ ಅವರು ಶುಕ್ರವಾರ ಈ ವಿಡಿಯೋ ಬಿಡುಗಡೆ ಮಾಡಿದ್ದು, ಕಳೆದ ಸೋಮವಾರ ಪರೀಕ್ಷೆಗೆಂದು ಗಂಟಲು ದ್ರವ ಕಳಿಸಿದ್ದರು. ನಾಲ್ಕು ದಿನದ ನಂತರವೂ ಫಲಿತಾಂಶ ಬಾರದ್ದರ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಅವರು, ವೈದ್ಯಲೋಕದ ನಿಕಟ ಸಂಪರ್ಕವಿರುವ ನಾನೇ ಹಲವು ಸಲ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಈ ವಿಷಯ ತಿಳಿಸಿದರೂ ಫಲಿತಾಂಶ ಲಭ್ಯವಾಗಲಿಲ್ಲ. ಇನ್ನು ಜನಸಾಮಾನ್ಯರ ಪಾಡೇನು ಎಂದು ಪ್ರಶ್ನಿಸಿದ್ದಾರೆ.

ಆದಷ್ಟು ಬೇಗ ಟೆಸ್ಟ ಫಲಿತಾಂಶ ನೀಡದೇ ಇದ್ದರೆ, ಆ ವ್ಯಕ್ತಿ ಆ ಅವಧಿಯಲ್ಲಿ ನೂರಾರು ಜನರನ್ನು ಸಂಪರ್ಕಿಸಿದ ಅಂತ ಇಟ್ಟುಕೊಳ್ಳಿ. ನಂತರ ಆತನ ವರದಿ ಪಾಸಿಟಿವ್ ಬಂದರೆ ಏನು ಗತಿ ಎಂದು ಸರ್ಕಾರಕ್ಕೆ ಪ್ರಶ್ನಿಸಿರುವ ಡಾ. ರವೀಂದ್ರ, ಸರ್ಕಾರ ಕೂಡಲೇ ತುರ್ತಾಗಿ ಫಲಿತಾಂಶ ನೀಡುವ ವ್ಯವಸ್ಥೆ ಮಾಡಬೇಕು ಎಂದಿದ್ದಾರೆ.

ಖಾಸಗಿ ಆಸ್ಪತ್ರೆ, ಲ್ಯಾಬ್ಗಳಿಗೆ ಟೆಸ್ಟ ಮಾಡಲು ಅವಕಾಶ ನೀಡಬೇಕು, ಆದರೆ ಸರ್ಕಾರವೇ ಜನರ ಟೆಸ್ಟಿಂಗ್ ಫೀಸ್ ತುಂಬಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೋವಿಡ್ ಕರ್ತವ್ಯ ನಿರತ ವೈದ್ಯರೊಬ್ಬರು ಮೃತಪಟ್ಟಾಗ ಅವರ ಕುಟುಂಬಕ್ಕೆ  ಪರಿಹಾರ ಕೊಡಲು ಸಾಧ್ಯವಿಲ್ಲ ಎಂದ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಪಂಕಜಕುಮಾರ್ ಪಾಂಡೆಯವರನ್ನು ಹಿಗ್ಗಾಮುಗ್ಗಾ ಟೀಕಿಸಿದ್ದಾರೆ ರವೀಂದ್ರ.

ಪಿಪಿಇ ಕಿಟ್ ಖರೀದಿಯಲ್ಲೂ ಹಣ ಮಾಡುವ ರಾಜಕಾರಣಿಗಳು, ಅಧಿಕಾರಿಗಳು ಮನುಷ್ಯರೇ ಅಲ್ಲ, ಕಚಡಾ ತಿಂದು ಬದುಕುವವರು ಎಂದು ಹರಿ ಹಾಯ್ದಿದ್ದಾರೆ.

ಶಿಕ್ಷಣ, ಆರೋಗ್ಯದ ಮೇಲೆ ಕಡಿಮೆ ತೆರಿಗೆ ವಿಧಿಸುವ ಬದಲು ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಕೇಂದ್ರ ಸರ್ಕಾರವನ್ನೂ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆದ ವಿಡಿಯೋ ನೋಡಿ, ಕೇಳಿ.

ಕೊರೊನಾ ಟೆಸ್ಟ್ ಬಗ್ಗೆ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆದ ಡಾ.ರವೀಂದ್ರ ಅವರ ವಿಡಿಯೋ
Leave a Reply

Your email address will not be published. Required fields are marked *

You May Also Like

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಜ.28 ರಂದು ಮಸ್ಕಿಯಲ್ಲಿ ಪ್ರತಿಭಟನೆ.

ವರದಿ: ವಿಠಲ ಕೆಳೂತ್ ಮಸ್ಕಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರಕ್ಕೆ ಅಪಮಾನ…

ಚಂದನ ಶಾಲೆಯ ಪುಟಾಣಿಗಳ ಕೊರೋನಾ ಜಾಗೃತಿ

ಶಾಲೆಯ ಅಂಗಳದಲ್ಲಿ ಪುಟ್ಟ ಕಂದಮ್ಮಗಳು ಕೊರೋನಾ ಬಗ್ಗೆ ನೀಡಿದ ಜಾಗೃತಿ ಸಂದೇಶ ಅದ್ಭುತವಾದದ್ದು. ಇಂತಹ ಪ್ರಯತ್ನಕ್ಕೆ ಮುಂದಾದ ಚಂದನ್ ಶಾಲೆಯ ಪ್ರಯತ್ನ ಕೂಡ ಸಾಮಾಜಿಕ ಕಾಳಜಿ ತೋರಿಸುವಂತಹದ್ದು.

ವಿಧಾನ ಸಭೆಯಲ್ಲಿ ಚರ್ಚಿಸಬೇಕಿದ್ದ ನೈತಿಕತೆ, ಚರ್ಚೆ ಆಗಲೇ ಇಲ್ಲ

ಮಾನವ ತನ್ನ ಜೀವನದಲ್ಲಿ ಕೆಲವು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕಾಗುತ್ತದೆ. ಮೌಲ್ಯ ಇಲ್ಲದ ಜೀವನ, ಜೀವನವೇ ಅಲ್ಲ. ನಂಬಿಕೆ. ವಿಶ್ವಾಸ,ತತ್ವ,ಸಿದ್ಧಾಂತ’ ನೈತಿಕತೆ, ಇವು ಮಾನವೀಯ ಮೌಲ್ಯಗಳು. ಇವುಗಳಲ್ಲಿ ಶ್ರೇಷ್ಠವಾದದ್ದು ನೈತಿಕತೆ.

ದೇಸೀ ಹುಡಗಿಯ ನಿರ್ಗಮನಕೆ ಭಾವಪೂರ್ಣ ಶ್ರದ್ಧಾಂಜಲಿ

ಪ್ರಸ್ತುತದಲ್ಲಿ ಜೀವಿಸುತ್ತಿರುವ ನಾವು ಅತ್ಯಾಧುನಿಕ ತಂತ್ರಜ್ಞಾನವನ್ನು ಅನುಭವಿಸುತ್ತಿರುವ ಅದೃಷ್ಟವಂತರು. ಆ ಕಾರಣದಿಂದಲೆ ಗೂಗಲ್ ಗೆ ಹೋಗಿ ‘ದೇಶಾಂಶ ಹುಡುಗಿ’ ಎಂದು ಟೈಪ್ ಮಾಡಿದರೆ ಸಾಕು, ಅನೇಕ ವೆಬ್ ಸೈಟ್ ಗಳು ಓಪನ್ ಆಗುತ್ತವೆ. ಕಣಜ ಡಾಟ್ ಇನ್, ನಾನುಗೌರಿ ಡಾಟ್ ಕಾಮ್, ಬುಕ್ ಬ್ರಹ್ಮ ಡಾಟ್ ಕಾಮ್, ಯಾವುದೇ ಇರಬಹುದು, ಎಲ್ಲದರಲ್ಲೂ ಈ ಹಿರಿಯ ಜೀವಿಯ ಸಾಹಿತ್ಯ, ಸಾಧನೆ ಅಪ್ ಲೋಡ್ ಆಗಿದೆ. ಬೆಳೆದು ನಿಂತ ಈ ಪೈರು ನೀಡಿದ ಫಸಲು ಅಪಾರ, ಅನನ್ಯ, ಅದ್ಭುತ.