ಐಎಂಎ (ಇಂಡಿಯನ್ ಮೆಡಿಕಲ್ ಅಸೋಸಿಯೇಷನ್) ಕರ್ನಾಟಕ ಚಾಪ್ಟರ್ ಮಾಜಿ ಅಧ್ಯಕ್ಷ ಡಾ. ರವೀಂದ್ರ ಅವರು ಶುಕ್ರವಾರ ಈ ವಿಡಿಯೋ ಬಿಡುಗಡೆ ಮಾಡಿದ್ದು, ಕಳೆದ ಸೋಮವಾರ ಪರೀಕ್ಷೆಗೆಂದು ಗಂಟಲು ದ್ರವ ಕಳಿಸಿದ್ದರು. ನಾಲ್ಕು ದಿನದ ನಂತರವೂ ಫಲಿತಾಂಶ ಬಾರದ್ದರ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಅವರು, ವೈದ್ಯಲೋಕದ ನಿಕಟ ಸಂಪರ್ಕವಿರುವ ನಾನೇ ಹಲವು ಸಲ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಈ ವಿಷಯ ತಿಳಿಸಿದರೂ ಫಲಿತಾಂಶ ಲಭ್ಯವಾಗಲಿಲ್ಲ. ಇನ್ನು ಜನಸಾಮಾನ್ಯರ ಪಾಡೇನು ಎಂದು ಪ್ರಶ್ನಿಸಿದ್ದಾರೆ.

ಆದಷ್ಟು ಬೇಗ ಟೆಸ್ಟ ಫಲಿತಾಂಶ ನೀಡದೇ ಇದ್ದರೆ, ಆ ವ್ಯಕ್ತಿ ಆ ಅವಧಿಯಲ್ಲಿ ನೂರಾರು ಜನರನ್ನು ಸಂಪರ್ಕಿಸಿದ ಅಂತ ಇಟ್ಟುಕೊಳ್ಳಿ. ನಂತರ ಆತನ ವರದಿ ಪಾಸಿಟಿವ್ ಬಂದರೆ ಏನು ಗತಿ ಎಂದು ಸರ್ಕಾರಕ್ಕೆ ಪ್ರಶ್ನಿಸಿರುವ ಡಾ. ರವೀಂದ್ರ, ಸರ್ಕಾರ ಕೂಡಲೇ ತುರ್ತಾಗಿ ಫಲಿತಾಂಶ ನೀಡುವ ವ್ಯವಸ್ಥೆ ಮಾಡಬೇಕು ಎಂದಿದ್ದಾರೆ.

ಖಾಸಗಿ ಆಸ್ಪತ್ರೆ, ಲ್ಯಾಬ್ಗಳಿಗೆ ಟೆಸ್ಟ ಮಾಡಲು ಅವಕಾಶ ನೀಡಬೇಕು, ಆದರೆ ಸರ್ಕಾರವೇ ಜನರ ಟೆಸ್ಟಿಂಗ್ ಫೀಸ್ ತುಂಬಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೋವಿಡ್ ಕರ್ತವ್ಯ ನಿರತ ವೈದ್ಯರೊಬ್ಬರು ಮೃತಪಟ್ಟಾಗ ಅವರ ಕುಟುಂಬಕ್ಕೆ  ಪರಿಹಾರ ಕೊಡಲು ಸಾಧ್ಯವಿಲ್ಲ ಎಂದ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಪಂಕಜಕುಮಾರ್ ಪಾಂಡೆಯವರನ್ನು ಹಿಗ್ಗಾಮುಗ್ಗಾ ಟೀಕಿಸಿದ್ದಾರೆ ರವೀಂದ್ರ.

ಪಿಪಿಇ ಕಿಟ್ ಖರೀದಿಯಲ್ಲೂ ಹಣ ಮಾಡುವ ರಾಜಕಾರಣಿಗಳು, ಅಧಿಕಾರಿಗಳು ಮನುಷ್ಯರೇ ಅಲ್ಲ, ಕಚಡಾ ತಿಂದು ಬದುಕುವವರು ಎಂದು ಹರಿ ಹಾಯ್ದಿದ್ದಾರೆ.

ಶಿಕ್ಷಣ, ಆರೋಗ್ಯದ ಮೇಲೆ ಕಡಿಮೆ ತೆರಿಗೆ ವಿಧಿಸುವ ಬದಲು ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಕೇಂದ್ರ ಸರ್ಕಾರವನ್ನೂ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆದ ವಿಡಿಯೋ ನೋಡಿ, ಕೇಳಿ.

ಕೊರೊನಾ ಟೆಸ್ಟ್ ಬಗ್ಗೆ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆದ ಡಾ.ರವೀಂದ್ರ ಅವರ ವಿಡಿಯೋ
Leave a Reply

Your email address will not be published. Required fields are marked *

You May Also Like

ಲಿಂ, ತೋಂಟದ ಸಿದ್ದಲಿಂಗ ಶ್ರೀ ಆದರ್ಶಗಳ ಮೇರು ಪರ್ವತ – ಡಾ.ಸಿದ್ದರಾಮ ಸ್ವಾಮೀಜಿ ಅಭಿಮತ

ಸಚಿತ್ರ ವರದಿ : ಗುಲಾಬಚಂದ ಜಾಧವ ಗದಗ : ಕ್ರಿಯಾಶೀಲತೆಯ ಮಾತೃ ಹೃದಯಿ ಲಿಂಗೈಕ್ಯ ಡಾ.ತೋಂಟದ…

ಡೆಂಜರ್ ಝೋನ್ ನಲ್ಲಿ ಭಯಾನಕ ಘಟನೆ: ಕಿಟ್ ಗಾಗಿ ಮಗ್ಗರಿಸಿ ಬಿದ್ದ ಮಹಿಳೆಯರು

ಆಹಾರ ಕಿಟ್ ಪಡೆಯಲು ಹೋದ ಮಹಿಳೆಯರು ಮಗ್ಗರಿಸಿ ಬಿದ್ದಿದ್ದಾರೆ. ನಿಜಕ್ಕೂ ಇದು ಭಯಾನಕ ಘಟನೆ. ಕೊರೋನಾ ಕರಾಳ ಛಾಯೆಯ ಲಕ್ಷಣವೇ ಸರಿ.

ಹಡಗಿಗೆ ದೀಪಾಲಂಕಾರ: ಕೋವಿಡ್19 ವಾರಿಯರ್ಸ್ಗೆ ಗೌರವ

ಹಡಗುಗಳನ್ನು ದೀಪಗಳಿಂದ ಅಲಂಕರಿಸುವ ಮೂಲಕ ಕೊರೋನಾ ವಾರಿಯರ್ಸ್ ಗೆ ವಿಶಿಷ್ಟ ರೀತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಕರೊನಾ ಅಲೆಯ ಮಧ್ಯೆ ರಾಜಕೀಯ ಅಲೆಯ ಅಬ್ಬರ

ದೊಡ್ಡವರಿಂದ ಹಿಡಿದು ಚಿಕ್ಕ ಮಕ್ಕಳ ವರೆಗೂ ಎಚ್ಚರಿಕೆ ಗಂಟೆಯನ್ನು ಬಾರಿಸಿರುವ ಕರೊನಾ ಎರಡನೆಯ ಅಲೆಯು ಸ್ವಲ್ಪಮಟ್ಟಿಗೆ ನಿಯಂತ್ರಣಕ್ಕೆ ಬರುತ್ತಿದೆಯಾದರೂ ಫಂಗಸ್‌ನ (ಶಿಲೀಂಧ್ರ) ಕಾಟ ಮಾತ್ರ ಮುಂದುವರಿಯುತ್ತಲೇ ಇದೆ. ಸದ್ಯ ಲಭ್ಯವಿರುವ ಲಿಪೊಸೊಮಲ್ ಆಂಪೊಟೆರಿಸಿನ್ ಬಿ ಔಷಧವನ್ನು ಕಪ್ಪು ಶಿಲೀಂಧ್ರ ಸೋಂಕಿಗೆ ಒಳಗಾದವರಿಗೆ ನೀಡಲಾಗುತ್ತಿದೆ.