ಸಚಿವ ಸಿ.ಟಿ.ರವಿ ಎರಡು ದಿನದಿಂದ ತಮ್ಮ ಕೋರೊನಾ ಪರೀಕ್ಷೆಯ ಕುರಿತು ಟ್ವೀಟ್ ಮಾಡಿದ್ದೇ ಮಾಡಿದ್ದು. ಅವರ ಅನುಭವ ನೋಡಿದರೆ ಟೆಸ್ಟ ಫಲಿತಾಂಶ ‘ಪಾಸಿಟಿವ್, ನೆಗೆಟಿವ್’ ಎಂಬ ಎರಡು ಚೀಟಿಯಲ್ಲಿ ಒಂದನ್ನು ಎತ್ತಿಕೊಳ್ಳುವ ಆಟದಂತಿದೆ. ಇದು ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿಯೂ ಆಗಿದೆ.

ಬೆಂಗಳೂರು: ಪುಣ್ಯಕ್ಕೆ ನಾಲ್ಕನೆ ಟೆಸ್ಟ ಮೊರೆ ಹೋಗಿಲ್ಲ ಸಚಿವ ಸಿ.ಟಿ ರವಿಯವರು. ಮೂರಕ್ಕೇ ಸಾಕು ಎಂದಿದ್ದಾರೆ.

ಮೊದಲ ಟೆಸ್ಟ ಪಾಸಿಟಿವ್ ಬಂತಂತೆ. ತಮ್ಮ ಸರ್ಕಾರ ನಡೆಸುತ್ತಿರುವ ಟೆಸ್ಟಿಂಗ್ ಮೇಲೇಯೇ ವಿಶ್ವಾಸವಿಲ್ಲದ ಸಚಿವರು, ಮತ್ತೊಮ್ಮೆ ಗಂಟಲು ದ್ರವವನ್ನು ಹೆಕ್ಕಿಸಿಕೊಂಡು ಎರಡನೇ ಟೆಸ್ಟ್ ಮಾಡಿಸಿಕೊಂಡರಂತೆ. ಅದು ನೆಗೆಟಿವ್ ಬಂತಂತೆ. ಅಷ್ಟೊತ್ತಿಗೆ ಸಚಿವರಿಗೆ ಇದು ಆಟದ ತರಹ ಕಂಡಿತೇನೋ? ಮೂರನೇ ಟೆಸ್ಟ್ ಮಾಡಿಸಿಕೊಂಡರು. ಫಲಿತಾಂಶಕ್ಕೆ ಕಾಯುತ್ತ ‘ಥರ್ಢ್ ಅಂಪೈರ್ ರಿಸಲ್ಟ ಗೆ ಕಾಯುತ್ತಿರುವೆ’ ಎಂದು ಹುಡುಗಾಟಿಕೆಯ ಮಾತಿನಲ್ಲಿ ಟ್ವೀಟ್ ಮಾಡಿದರು.

ಮೂರನೆ ಫಲಿತಾಂಶ ಇವತ್ತು ಪಾಸಿಟಿವ್ ಬಂದಾಗ. ‘ಥರ್ಡ್ ಅಂಪೈರ್ ಫಲಿತಾಂಶ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ’ ಎಂದು ಟ್ವೀಟ್ ಮಾಡಿಕೊಂಡಿದ್ದಾರೆ.

ಸಿ.ಟಿ. ರವಿಯವರ ಒಟ್ಟೂ ಈ ಟೆಸ್ಟಿಂಗ್ ಪ್ರಹಸನ ರಾಜ್ಯದಲ್ಲಿ ಸರ್ಕಾರ ಟೆಸ್ಟಿಂಗ್ ಬಗ್ಗೆ ಎಷ್ಟು ಗಂಭೀರವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಸಚಿವರಿಗೆ ಮಾತ್ರ ‘ಬೆಸ್ಟ ಆಫ್ ಥ್ರೀ’ ಆಪ್ಷನ್ ಇದೆಯೋ, ಜನಸಾಮಾನ್ಯರಿಗೂ ಇದೆಯೋ ಎಂಬುದನ್ನು ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಸ್ಪಷ್ಟಪಡಿಸಲಿ.

ಒಟ್ಟಿನಲ್ಲಿ ಮೂರು ಟ್ವೀಟ್ ಗಳ ಮೂಲಕ ಟೆಸ್ಟಿಂಗ್ ಎಂಬುದು ಚೀಟಿ ಎತ್ತುವ ಆಟ ಎಂಬಂತೆ ಸಿ.ಟಿ. ರವಿ ಚಿತ್ರಿಸಿದ್ದಾರೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು ಯಾವ ಊರಲ್ಲಿ ಎಷ್ಟು ಪಾಸಿಟಿವ್!

ಜಿಲ್ಲೆಯಲ್ಲಿ ಸೋಮವಾರ ದಿ. 20 ರಂದು 30 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, ವಿವರ ಇಂತಿದೆ.ಜಿಡಿಜಿ-498 ಮಲ್ಲಸಮುದ್ರ ನಿವಾಸಿ (46,ಪುರುಷ) ಹಾಗೂ ಜಿಡಿಜಿ-585 ಹುಲಕೋಟಿ

ಆಮರಣ ಉಪವಾಸ ಸತ್ಯಾಗ್ರಹ 3ನೇ ದಿನದತ್ತ : ಧರಣಿ ನಿರತರ ಆರೋಗ್ಯ ತಪಾಸಣೆ

ಉತ್ತರಪ್ರಭಆಲಮಟ್ಟಿ: ಶಾಸ್ತ್ರಿ ಜಲಾಶಯ ವ್ಯಾಪ್ತಿಯಲ್ಲಿನ ಜಿಲ್ಲೆಯ ಎಲ್ಲ ಕಾಲುವೆಗಳಿಗೆ ನೀರು ಹರಿಸಿ ಕೆರೆಗಳನ್ನು ತುಂಬಬೇಕು ಎಂದು…

ಧಾರ್ಮಿಕ ಕೇಂದ್ರಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ!

ನವದೆಹಲಿ : ಕೇಂದ್ರ ಸರ್ಕಾರದ ಸೂಚನೆಯಂತೆ ಜೂ. 8ರಿಂದ ಎಲ್ಲ ಧಾರ್ಮಿಕ ಕೇಂದ್ರಗಳು ಮರಳಿ ಓಪನ್…

ಅಳ್ನಾವರದಲ್ಲಿ ಬಂಜಾರ ಕೂಲಿಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಆರೋಪಿಗಳನ್ನು ಬಂಧಿಸದ ಪೋಲಿಸರ ನಡೆಗೆ ರಾಜ್ಯಾದ್ಯಂತ ತಿವ್ರ ಆಕ್ರೋಶ

ಅಳ್ನಾವರ: ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಅರವಟಿಗೆ ಗ್ರಾಮದಲ್ಲಿ ಬೇರೆ ಬೇರೆ ತಾಂಡಾಗಳಿಂದ ತಮ್ಮ ಉಪಜೀವನಕ್ಕಾಗಿ…