ಬೆಂಗಳೂರು: ನಿರೀಕ್ಷೆಗಿಂತ ಮೊದಲೇ ಪಿಯುಸಿ ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ಫೇಸ್ಬುಕ್ ಮೂಲಕ ತಿಳಿಸಿದ್ದಾರೆ.

ಫೇಸ್ಬುಕ್ ಲೈವ್ ನಲ್ಲಿ ಮಾತನಾಡಿದ ಅವರು, ಮಂಗಳವಾರ ಬೆಳಗ್ಗೆ 11:30ಕ್ಕೆ ವಿದ್ಯಾರ್ಥಿಗಳ ಮೊಬೈಲ್ ಗೆ SMS ಮೂಲಕ ರಿಸಲ್ಟ್ ತಲುಪಲಿದೆ. 12 ಗಂಟೆ ಬಳಿಕ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಇಲಾಖೆಯ ಅಧಿಕೃತ ವೆಬ್ ಸೈಟ್ ಗಳಲ್ಲೊಂದಾದ karresults.nic.in ವೆಬ್ ಸೈಟ್ ನಲ್ಲಿ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟವಾಗುತ್ತದೆ. ಇದೇ 16ರಿಂದ ಆರಂಭವಾಗಬೇಕಿದ್ದ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿಗೆ ಪ್ರಮೋಟ್ ಮಾಡಲಾಗುವುದು ಎಂದು ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಂಡರಗಿ: ಸೇತುವೆ ಕುಸಿತ ಸಂಚಾರ ವ್ಯತ್ಯಯ!

ತಾಲೂಕಿನ ಕೊರ್ಲಹಳ್ಳಿ ಬಳಿಯ ಸೇತುವೆ ಇಂದು ಬೆಳಗಿನ ಜಾವ ಕುಸಿತಗೊಂಡಿದ್ದು ಬೆಳಕಿಗೆ ಬಂದಿದೆ. ಅದೃಷ್ಟವಶಾತ್​ ಈ ಸಮಯದಲ್ಲಿ ಹೆಚ್ಚಿನ ಸಂಚಾರ ಇಲ್ಲದ ಹಿನ್ನೆಲೆಯಲ್ಲಿ ದುರ್ಘಟನೆ ಸಂಭವಿಸಿಲ್ಲ. ಆದರೆ ಘಟನೆಯಿಂದ ಬೆಳಿಗ್ಗೆ ಕಾರೊಂದು ಜಖಂಗೊಂಡಿದೆ ಎನ್ನಲಾಗಿದೆ.

ಪ್ರತ್ಯೇಕ ಕೇಂದ್ರ ಸ್ಥಾನಕ್ಕೆ ಒತ್ತಾಯಿಸಿ ಜಿಗಳೂರು ಗ್ರಾಮಸ್ಥರ ಪ್ರತಿಭಟನೆ

ರೋಣ: ಜಿಗಳೂರ ಗ್ರಾಮಕ್ಕೆ ಪ್ರತ್ಯೇಕ ಕೇಂದ್ರ ಸ್ಥಾನ ನೀಡಲು ಒತ್ತಾಯಿಸಿ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.…

ಒತ್ತುವರಿ ತೆರವು ಜಿಲ್ಲಾಧಿಕಾರಿ ಗಡುವು

ನಗರದಲ್ಲಿ ರಸ್ತೆಗಳು, ಚರಂಡಿ ಒತ್ತುವರಿ ಆಗುವುದನ್ನು ತಡೆಯಬೇಕು. ಒತ್ತುವರಿ ಮಾಡಿಕೊಂಡಿರುವವರು ಎಂತಹ ಪ್ರಭಾವಿಗಳೇ ಆದರೂ ತೆರವುಗೊಳಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸೂಚಿಸಿದರು.

ದುಡ್ಡಿದ್ದವರು ಮಾತ್ರ ಕುಡಿತಾರೆ ಅಂದ್ರು ಅಬಕಾರಿ ಸಚಿವರು

ನಮ್ಮವು ಖರ್ಚು ವೆಚ್ಚ ಇರುತ್ತದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಟ್ಯಾಕ್ಸ್ ಹೆಚ್ಚಳ ಮಾಡಲಾಗಿದೆ. ಈ ಮಾದರಿಯನ್ನು ಅನುಸರಿಸಿಯೇ ನಮ್ಮ ರಾಜ್ಯದಲ್ಲೂ ಟ್ಯಾಕ್ಸ್ ಹೆಚ್ಚಿಸಲಾಗಿದೆ ಅಂತಾರೆ ಅಬಕಾರಿ ಮಿನಿಸ್ಟರ್.