ಗದಗ: ಜಿಲ್ಲೆಯಲ್ಲಿ ಸೋಮವಾರ ದಿ.13 ರಂದು 6 ಜನರಿಗೆ ಕೊವಿಡ್-19 ಸೋಂಕು ದೃಢ ಪಟ್ಟಿದೆ.
ರೋಣ ತಾಲ್ಲೂಕಿನ ಹುಲ್ಲೂರು ಗ್ರಾಮದ ನಿವಾಸಿ 26 ವರ್ಷದ ಪುರುಷ ಪಿ-38890 ಸೋಂಕು ದೃಢಪಟ್ಟಿದ್ದು ಸೋಂಕು ತಗುಲಿರುವ ಕುರಿತು ಪತ್ತೆ ಕಾರ್ಯ ನಡೆದಿದೆ.


ಗದಗ ಜಿಮ್ಸ್ ಆಸ್ಪತ್ರೆಯ 22 ವರ್ಷದ ಮಹಿಳೆ ಪಿ-38892 ಕೆಮ್ಮು ಹಾಗೂ ಜ್ವರ ರೋಗ ಲಕ್ಷಣದಿಂದಾಗಿ ಸೋಂಕು ದೃಢವಾಗಿದೆ.
ಗದಗ ನಗರದ ಕಳಸಾಪುರ ರಸ್ತೆಯ ಬ್ಲೂಸ್ಟಾರ್ ಬಜಾರ್ ಹತ್ತಿರದ ನಿವಾಸಿ 59 ವರ್ಷದ ಮಹಿಳೆ ಪಿ-38894 ಕೆಮ್ಮು ಜ್ವರ ರೋಗ ಲಕ್ಷಣದಿಂದಾಗಿ ಸೋಂಕು ದೃಢವಾಗಿದೆ.
ಗದಗ-ಬೆಟಗೇರಿ ಭಜಂತ್ರಿ ಓಣಿ ನಿವಾಸಿ 31 ವರ್ಷದ ಪುರುಷ ಪಿ-38896 ಇವರಿಗೆ ಪಿ-35948 ಸೋಂಕಿತರ ಸಂಪರ್ಕದಿಂದಾಗಿ ದೃಢವಾಗಿದೆ.
ಗದಗ ಹುಡ್ಕೋ ಕಾಲೋನಿ ನಿವಾಸಿ 14 ವರ್ಷದ ಯುವಕ ಪಿ-38899 ಇವರಿಗೆ ಪಿ-31113 ಸೋಂಕಿತರ ಸಂಪರ್ಕದಿಂದಾಗಿ ದೃಢವಾಗಿದೆ.
ನರಗುಂದ ತಾಲ್ಲೂಕಿನ ದಂಡಾಪುರದ ನಿವಾಸಿ 24 ವರ್ಷದ ಪುರುಷ ಪಿ-38900 ಇವರಿಗೆ ಬೆಂಗಳೂರು ಪ್ರಯಾಣದಿಂದಾಗಿ ಸೋಂಕು ದೃಢವಾಗಿದೆ.
ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಆಧಾರಿತ ಪಾಡ್ ಗೆ ಸುಧಾಕರ್ ಚಾಲನೆ

ವೆವ್ರ ಸಂಸ್ಥೆ ಮತ್ತು ಪೋರ್ಚುಗೀಸ್ ನ ಇನೋವೇವ್ ಗ್ರೂಪ್ ಸಹಯೋಗದಲ್ಲಿ ಆರಂಭಿಸಿರುವ ಹೆಲ್ತ್ ಕೇರ್ ಪಾಡ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಚಾಲನೆ ನೀಡಿದರು. ನಗರದಲ್ಲಿ ಆನ್ ಲೈನ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ವೆವ್ರ ಪಾಡ್ ಸೌಲಭ್ಯವನ್ನು ಉದ್ಘಾಟಿಸಿದರು.

ಗದಗ ಜಿಲ್ಲೆಯಲ್ಲಿ ಐದು ದಿನ ಸಂಪೂರ್ಣ ಲಾಕ್ ಡೌನ್: ಏನಿರುತ್ತೆ..? ಏನಿರಲ್ಲಾ…?

ಗದಗ: ಈಗಾಗಲೇ ಕೋರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು, ಕೋವಿಡ್ ನಿಯಂತ್ರಣದ ದೃಷ್ಟಿಯಿಂದ ಗದಗ ಜಿಲ್ಲೆಯನ್ನು ಸಂಪೂರ್ಣ ಲಾಕ್ ಡೌನ್ ಗೆ ನಿರ್ಧಾರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು. ಅವರು ಗದಗನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೇ.27 ರ ಬೆಳಿಗ್ಗೆ 10 ಗಂಟೆಯಿಂದ ಜೂನ್ 1 ನೇ ತಾರೀಖಿನ ಬೆಳಿಗ್ಗೆ 6 ಗಂಟೆಯವರೆಗೆ ಕಠಿಣ ಲಾಕ್ ಡೌನ್ ವಿಧಿಸಲಾಗಿದೆ.

ವೀರಪ್ಪನ್ ಸಹಚರ ಸಾವು!

ಚಾಮರಾಜನಗರ ಜಿಲ್ಲೆಯ ಗಡಿಭಾಗದ ಪಾಲಾರ್ ಸಮೀಪದ ಸೋರೆಕಾಯಿಮಡುವು ಬಳಿ ನೆಲಬಾಂಬ್ ಸ್ಪೋಟಿಸಿ 22 ಜನರ ಸಾವಿಗೆ ಕಾರಣರಾಗಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರ ಬಿಲವೇಂದ್ರನ್ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು, ಆಸ್ಪತ್ರೆಗೆ ದಾಖಲು

ಬೆಂಗಳೂರು:  ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಶಾಸಕ, ಕಂದಾಯ ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು ತಗುಲಿದೆ.…