ಗದಗ: ಜಿಲ್ಲೆಯಲ್ಲಿ ಸೋಮವಾರ ದಿ.13 ರಂದು 6 ಜನರಿಗೆ ಕೊವಿಡ್-19 ಸೋಂಕು ದೃಢ ಪಟ್ಟಿದೆ.
ರೋಣ ತಾಲ್ಲೂಕಿನ ಹುಲ್ಲೂರು ಗ್ರಾಮದ ನಿವಾಸಿ 26 ವರ್ಷದ ಪುರುಷ ಪಿ-38890 ಸೋಂಕು ದೃಢಪಟ್ಟಿದ್ದು ಸೋಂಕು ತಗುಲಿರುವ ಕುರಿತು ಪತ್ತೆ ಕಾರ್ಯ ನಡೆದಿದೆ.


ಗದಗ ಜಿಮ್ಸ್ ಆಸ್ಪತ್ರೆಯ 22 ವರ್ಷದ ಮಹಿಳೆ ಪಿ-38892 ಕೆಮ್ಮು ಹಾಗೂ ಜ್ವರ ರೋಗ ಲಕ್ಷಣದಿಂದಾಗಿ ಸೋಂಕು ದೃಢವಾಗಿದೆ.
ಗದಗ ನಗರದ ಕಳಸಾಪುರ ರಸ್ತೆಯ ಬ್ಲೂಸ್ಟಾರ್ ಬಜಾರ್ ಹತ್ತಿರದ ನಿವಾಸಿ 59 ವರ್ಷದ ಮಹಿಳೆ ಪಿ-38894 ಕೆಮ್ಮು ಜ್ವರ ರೋಗ ಲಕ್ಷಣದಿಂದಾಗಿ ಸೋಂಕು ದೃಢವಾಗಿದೆ.
ಗದಗ-ಬೆಟಗೇರಿ ಭಜಂತ್ರಿ ಓಣಿ ನಿವಾಸಿ 31 ವರ್ಷದ ಪುರುಷ ಪಿ-38896 ಇವರಿಗೆ ಪಿ-35948 ಸೋಂಕಿತರ ಸಂಪರ್ಕದಿಂದಾಗಿ ದೃಢವಾಗಿದೆ.
ಗದಗ ಹುಡ್ಕೋ ಕಾಲೋನಿ ನಿವಾಸಿ 14 ವರ್ಷದ ಯುವಕ ಪಿ-38899 ಇವರಿಗೆ ಪಿ-31113 ಸೋಂಕಿತರ ಸಂಪರ್ಕದಿಂದಾಗಿ ದೃಢವಾಗಿದೆ.
ನರಗುಂದ ತಾಲ್ಲೂಕಿನ ದಂಡಾಪುರದ ನಿವಾಸಿ 24 ವರ್ಷದ ಪುರುಷ ಪಿ-38900 ಇವರಿಗೆ ಬೆಂಗಳೂರು ಪ್ರಯಾಣದಿಂದಾಗಿ ಸೋಂಕು ದೃಢವಾಗಿದೆ.
ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆರ ಮನವಿ

ಮುಖ್ಯವಾಗಿ ಜಿಲ್ಲೆಯಲ್ಲಿನ ಆಯಾ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರು ಎದುರಿಸುತ್ತಿರುವ ಸಮಸ್ಯೆಗಳ ಜೊತೆಗೆ ರಾಜ್ಯಮಟ್ಟದಲ್ಲಿನ ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಜಿಲ್ಲಾ ಸಮಿತಿಯಿಂದ ಸೋಮವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಬಸವ ತತ್ವ, ಧರ್ಮಸೂತ್ರ ಪರಿಪಾಲಿಸಿ ಭವ್ಯ ಹಿಂದು ಧರ್ಮ ಉಳಿವಿಗೆ ಸಂಕಲ್ಪ ಮಾಡಿ- ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ

ಆಲಮಟ್ಟಿ: ಪವಿತ್ರ ಬಸವ ಭೂಮಿಯ ನಾಡಿನಲ್ಲಿ ಇನ್ನೂ ಅಸ್ಪೃಶ್ಯತೆ ಪೂರ್ಣ ತೊಲಗಿಲ್ಲ. ಕಂದಾಚಾರ,ಅನಾಚಾರ,ಮೂಡನಂಬಿಕೆಗಳಂಥ ಮೌಢ್ಯಗಳು ಅಲ್ಲಲ್ಲಿ…

ಕೋವಿಡ್ ಚಿಕಿತ್ಸೆಗೆ ₹5 ಲಕ್ಷದವರೆಗೆ ಸಾಲ: ಸಾರ್ವಜನಿಕ ವಲಯದ ಬ್ಯಾಂಕುಗಳು ಘೋಷಣೆ

ಕೋವಿಡ್ ಎರಡನೇ ಅಲೆ ದೇಶಾದ್ಯಂತ ಹೆಚ್ಚು ವ್ಯಾಪಿಸಿ ಸಂದಿಗ್ಧ ಪರಿಸ್ಥಿತಿ ಉಂಟು ಮಾಡಿದ್ದು, ಇದರಿಂದ ಅಸುರಕ್ಷಿತ ಸಾಲ ನೀಡುಲು ನಿರ್ಧಾರ ಮಾಡಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕುಗಳ ಸಂಘ (ಐಬಿಎ) ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿವೆ

ತಾಯಿಯನ್ನು ಜೀವಂತವಾಗಿಯೇ ಹೂತಿದ್ದ ಪಾಪಿ ಮಗ!

ಪಾಪಿ ಮಗನೊಬ್ಬ ತನ್ನ 79 ವರ್ಷದ ತನ್ನ ತಾಯಿಯನ್ನು ಜೀವಂತವಾಗಿಯೇ ಸಮಾಧಿ ಮಾಡಿರುವ ಘಟನೆ ನಡೆದಿದೆ.