ಗದಗ: ಜಿಲ್ಲೆಯಲ್ಲಿ ಸೋಮವಾರ ದಿ.13 ರಂದು 6 ಜನರಿಗೆ ಕೊವಿಡ್-19 ಸೋಂಕು ದೃಢ ಪಟ್ಟಿದೆ.
ರೋಣ ತಾಲ್ಲೂಕಿನ ಹುಲ್ಲೂರು ಗ್ರಾಮದ ನಿವಾಸಿ 26 ವರ್ಷದ ಪುರುಷ ಪಿ-38890 ಸೋಂಕು ದೃಢಪಟ್ಟಿದ್ದು ಸೋಂಕು ತಗುಲಿರುವ ಕುರಿತು ಪತ್ತೆ ಕಾರ್ಯ ನಡೆದಿದೆ.


ಗದಗ ಜಿಮ್ಸ್ ಆಸ್ಪತ್ರೆಯ 22 ವರ್ಷದ ಮಹಿಳೆ ಪಿ-38892 ಕೆಮ್ಮು ಹಾಗೂ ಜ್ವರ ರೋಗ ಲಕ್ಷಣದಿಂದಾಗಿ ಸೋಂಕು ದೃಢವಾಗಿದೆ.
ಗದಗ ನಗರದ ಕಳಸಾಪುರ ರಸ್ತೆಯ ಬ್ಲೂಸ್ಟಾರ್ ಬಜಾರ್ ಹತ್ತಿರದ ನಿವಾಸಿ 59 ವರ್ಷದ ಮಹಿಳೆ ಪಿ-38894 ಕೆಮ್ಮು ಜ್ವರ ರೋಗ ಲಕ್ಷಣದಿಂದಾಗಿ ಸೋಂಕು ದೃಢವಾಗಿದೆ.
ಗದಗ-ಬೆಟಗೇರಿ ಭಜಂತ್ರಿ ಓಣಿ ನಿವಾಸಿ 31 ವರ್ಷದ ಪುರುಷ ಪಿ-38896 ಇವರಿಗೆ ಪಿ-35948 ಸೋಂಕಿತರ ಸಂಪರ್ಕದಿಂದಾಗಿ ದೃಢವಾಗಿದೆ.
ಗದಗ ಹುಡ್ಕೋ ಕಾಲೋನಿ ನಿವಾಸಿ 14 ವರ್ಷದ ಯುವಕ ಪಿ-38899 ಇವರಿಗೆ ಪಿ-31113 ಸೋಂಕಿತರ ಸಂಪರ್ಕದಿಂದಾಗಿ ದೃಢವಾಗಿದೆ.
ನರಗುಂದ ತಾಲ್ಲೂಕಿನ ದಂಡಾಪುರದ ನಿವಾಸಿ 24 ವರ್ಷದ ಪುರುಷ ಪಿ-38900 ಇವರಿಗೆ ಬೆಂಗಳೂರು ಪ್ರಯಾಣದಿಂದಾಗಿ ಸೋಂಕು ದೃಢವಾಗಿದೆ.
ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ಇಂದು ದ್ವಿತಿಯ ಪಿಯು ಪರೀಕ್ಷೆ ಬರೆದ ವಿದ್ಯಾರ್ಥಿಗಳೆಷ್ಟು..?

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಇಂದು ಯಶಸ್ವಿಯಾಗಿ ನಡೆದಿದೆ. 5,95,997…

ವಾರಾಂತ್ಯದ ಕಫ್ರ‍್ಯೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಗದಗ : ರಾಜ್ಯಾದ್ಯಂತ ಸೋಂಕು ನಿಯಂತ್ರಣಕ್ಕಾಗಿ ರ‍್ಕಾರ ಜಾರಿಗೊಳಿಸಿರುವ ಮರ‍್ಗಸೂಚಿಗಳನ್ನು ಜಿಲ್ಲೆಯ ಕಂದಾಯ, ಪೊಲೀಸ್ ಹಾಗೂ…

ಸರ್ಕಾರದ ಅಸಡ್ಡೆ – ಯಾದಗಿರಿಯಲ್ಲಿ ಹೆಚ್ಚಿದ ಆತಂಕ!

ಯಾದಗಿರಿ: ಮಹಾರಾಷ್ಟ್ರದ ಕೊರೊನಾದಿಂದಾಗಿ ಜಿಲ್ಲೆಯ ಜನರು ಕಂಗೆಟ್ಟು ಹೋಗಿದ್ದಾರೆ. ಸದ್ಯ ಮತ್ತೊಂದು ತಲೆನೋವು ಶುರುವಾಗಿದೆ. ವರದಿ…

ಗದಗ ಜಿಲ್ಲೆಯ ವೀರಶೈವ ಲಿಂಗಾಯತ ಪಂಚಮಸಾಲಿ ಯುವ ಘಟಕದ ಜಿಲ್ಲಾದ್ಯಕ್ಷ ಹಾಗೂ ತಾಲೂಕ ಅಧ್ಯಕ್ಷರ ಆಯ್ಕೆ ಮಾಡಲಾಯಿತು.

ಉತ್ತರಪ್ರಭ ಸುದ್ದಿ ಗದಗ: ಪ್ರವಾಸಿ ಮಂದಿರದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಜಿಲ್ಲಾಧ್ಯಕ್ಷರಾದ ಶ್ರೀ.ಈರಣ್ಣ ಕರಿಬಿಷ್ಠಿ ಯವರ…