ಸದ್ಯ ಸಿಎಂ ಯಡಿಯೂರಪ್ಪ ಸೋಂಕು ಹೆಚ್ಚುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡೀಯೋ ಸಂವಾದ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿಗಳ ಅಭಿಪ್ರಾಯ ಆಧರಿಸಿ ಬೆಂಗಳೂರಿನಂತೆ ಇನ್ನು ಕೆಲವು ಜಿಲ್ಲೆಗಳಲ್ಲಿ ವಾರದ ಮಟ್ಟಿಗಿನ ಲಾಕ್ ಡೌನ್ ಜಾರಿ ಮಾಡಬಹುದು ಎನ್ನಲಾಗಿದೆ.

ಗದಗ: ಮುಖ್ಯಮಂತ್ರಿ ಯಡಿಯೂರಪ್ಪ ಸೋಂಕು ತೀವ್ರವಾಗಿ ಏರಿಕೆ ಕಾಣುತ್ತಿರುವ 10 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ  ಇಂದು 11 ಗಂಟೆಗೆ ವಿಡಿಯೋ ಸಂವಾದ ಆರಂಭಿಸಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,  ಕಲಬುರಗಿ, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ರಾಯಚೂರು ಮತ್ತು ಗದಗ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಈ ಸಂವಾದದಲ್ಲಿ ಭಾಗಿಯಾಗಿದ್ದಾರೆ.

ಜಿಲ್ಲಾಧಿಕಾರಿಗಳ ಅಭಿಪ್ರಾಯ ಪಡೆದ ನಂತರ, ಆಯಾ ಜಿಲ್ಲೆಗಳಲ್ಲಿ 7 ದಿನದ ಲಾಕ್ ಡೌನ್ ಅಗತ್ಯವಿದೆಯೇ ಎಂಬುದನ್ನು ಮುಖ್ಯಮಂತ್ರಿ ನಿರ್ಧರಿಸಲಿದ್ದಾರೆ.

ಕಳೆದ 10 ದಿನಗಳಿಂದ ಸೋಂಕು ಪ್ರಕರಣಗಳಲ್ಲಿ ದಿಢೀರ್ ಏರಿಕೆ ಕಂಡಿರುವ ಗದಗ ಜಿಲ್ಲೆ ಈಗ ಸೋಂಕು ಏರುತ್ತಿರುವ 10 ಜಿಲ್ಲೆಗಳ ಪಟ್ಟಿಯಲ್ಲಿದೆ. ಬೆಂಗಳೂರಿನಂತೆ ಉಳಿದ 8 ಜಿಲ್ಲೆಗಳಲ್ಲೂ ಒಂದು ವಾರ ಕಾಲದ ಲಾಕ್ ಡೌನ್ ವಿಧಿಸುವ ಆಲೋಚನೆ ಸರ್ಕಾರಕ್ಕಿದೆ ಎನ್ನಲಾಗಿದೆ.

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡುವಾಗ ಸಚಿವ ಅಶೋಕ್ ಈ ವಿಷಯವನ್ನು ಪ್ರಸ್ತಾಪ ಮಾಡಿದ್ದಾರೆ. ಗದಗ ಜಿಲ್ಲೆಯೂ 7 ದಿನಗಳ ಲಾಕ್ ಡೌನ್ ಗೆ ಒಳಪಡಲಿದೆಯೇ ಎಂಬುದು ಸಂಜೆ ಹೊತ್ತಿಗೆ ತಿಳಿಯಲಿದೆ.

Leave a Reply

Your email address will not be published. Required fields are marked *

You May Also Like

ಚಿನ್ನ, ಬೆಳ್ಳಿ ಮತ್ತಷ್ಟು ಇಳಿಕೆ

ಎರಡು ದಿನಗಳಿಂದ ಚಿನ್ನ ದರ ಇಳಿಕೆಯತ್ತ ಮುಖ ಮಾಡಿದೆ. ಹಾಗೆಯೇ ಎರಡು ದಿನಗಳಿಂದ ಸ್ಥಿರವಾಗಿದ್ದ ಬೆಳ್ಳಿ ದರ ಕೂಡಾ ಇಂದು ಇಳಿಕೆ ಕಂಡಿದೆ.

ಕೊರೊನಾ ಪಾಸಿಟಿವ್ – ಜೆಡಿಎಸ್ ನಾಯಕನ ಹೈಡ್ರಾಮಾ!

ಮಂಡ್ಯ : ಜೆಡಿಎಸ್ ಮುಖಂಡರೊಬ್ಬರಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು, ಆಸ್ಪತ್ರೆಗೆ ಹೋಗಲು ಕಿರಿಕ್ ಮಾಡಿರುವ ಘಟನೆ…

ವೇಶ್ಯಾವಾಟಿಕೆ ಸಂತ್ರಸ್ತೆಯರನ್ನು ಪಾಲಕರಿಗೆ ಹಸ್ತಾಂತರಿಸಿ ಪೊಲೀಸರು!

ಹೈಟೆಕ್ ವೇಶ್ಯಾವಾಟಿಕೆ ಮೇಲೆ ದಾಳಿ ಮಾಡಿದ್ದ ಸಂದರ್ಭದಲ್ಲಿ ರಕ್ಷಣೆಗೆ ಒಳಗಾಗಿದ್ದ ಇಬ್ಬರು ಯುವತಿಯರನ್ನು ಪೊಲೀಸರು ಕುಟುಂಬದ ಸದಸ್ಯರಿಗೆ ಹಸ್ತಾಂತರ ಮಾಡುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.

ಕಂಡಕ್ಟರ್, ಡ್ರೈವರ್ ಗಳನ್ನು ಟಾರ್ಗೇಟ್ ಮಾಡಿದ್ರಾ ಡಿಪೋ ಮ್ಯಾನೇಜರ್..?

ಇದೀಗ ಡಿಪೋ ಮ್ಯಾನೇಜರ್ ಬಸಪ್ಪ ಪೂಜಾರ್ ಅವರ ವರ್ತನೆ ಮತ್ತೊಂದು ಯಡವಟ್ಟಿಗೆ ಕಾರಣವಾಗಿದೆ. ನಿನ್ನೆ ಘಟನೆ ನಂತರ ಇದೀಗ ಸಿಬ್ಬಂಧಿಗಳನ್ನು ಡಿಪೋ ಮ್ಯಾನೇಜರ್ ಟಾರ್ಗೆಟ್ ಮಾಡಿದ್ದಾರೆಯೇ? ಎನ್ನುವ ಪ್ರಶ್ನೆ ಉದ್ಭವವಾಗಿದೆ.