ಸದ್ಯ ಸಿಎಂ ಯಡಿಯೂರಪ್ಪ ಸೋಂಕು ಹೆಚ್ಚುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡೀಯೋ ಸಂವಾದ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿಗಳ ಅಭಿಪ್ರಾಯ ಆಧರಿಸಿ ಬೆಂಗಳೂರಿನಂತೆ ಇನ್ನು ಕೆಲವು ಜಿಲ್ಲೆಗಳಲ್ಲಿ ವಾರದ ಮಟ್ಟಿಗಿನ ಲಾಕ್ ಡೌನ್ ಜಾರಿ ಮಾಡಬಹುದು ಎನ್ನಲಾಗಿದೆ.

ಗದಗ: ಮುಖ್ಯಮಂತ್ರಿ ಯಡಿಯೂರಪ್ಪ ಸೋಂಕು ತೀವ್ರವಾಗಿ ಏರಿಕೆ ಕಾಣುತ್ತಿರುವ 10 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ  ಇಂದು 11 ಗಂಟೆಗೆ ವಿಡಿಯೋ ಸಂವಾದ ಆರಂಭಿಸಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,  ಕಲಬುರಗಿ, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ರಾಯಚೂರು ಮತ್ತು ಗದಗ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಈ ಸಂವಾದದಲ್ಲಿ ಭಾಗಿಯಾಗಿದ್ದಾರೆ.

ಜಿಲ್ಲಾಧಿಕಾರಿಗಳ ಅಭಿಪ್ರಾಯ ಪಡೆದ ನಂತರ, ಆಯಾ ಜಿಲ್ಲೆಗಳಲ್ಲಿ 7 ದಿನದ ಲಾಕ್ ಡೌನ್ ಅಗತ್ಯವಿದೆಯೇ ಎಂಬುದನ್ನು ಮುಖ್ಯಮಂತ್ರಿ ನಿರ್ಧರಿಸಲಿದ್ದಾರೆ.

ಕಳೆದ 10 ದಿನಗಳಿಂದ ಸೋಂಕು ಪ್ರಕರಣಗಳಲ್ಲಿ ದಿಢೀರ್ ಏರಿಕೆ ಕಂಡಿರುವ ಗದಗ ಜಿಲ್ಲೆ ಈಗ ಸೋಂಕು ಏರುತ್ತಿರುವ 10 ಜಿಲ್ಲೆಗಳ ಪಟ್ಟಿಯಲ್ಲಿದೆ. ಬೆಂಗಳೂರಿನಂತೆ ಉಳಿದ 8 ಜಿಲ್ಲೆಗಳಲ್ಲೂ ಒಂದು ವಾರ ಕಾಲದ ಲಾಕ್ ಡೌನ್ ವಿಧಿಸುವ ಆಲೋಚನೆ ಸರ್ಕಾರಕ್ಕಿದೆ ಎನ್ನಲಾಗಿದೆ.

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡುವಾಗ ಸಚಿವ ಅಶೋಕ್ ಈ ವಿಷಯವನ್ನು ಪ್ರಸ್ತಾಪ ಮಾಡಿದ್ದಾರೆ. ಗದಗ ಜಿಲ್ಲೆಯೂ 7 ದಿನಗಳ ಲಾಕ್ ಡೌನ್ ಗೆ ಒಳಪಡಲಿದೆಯೇ ಎಂಬುದು ಸಂಜೆ ಹೊತ್ತಿಗೆ ತಿಳಿಯಲಿದೆ.

Leave a Reply

Your email address will not be published. Required fields are marked *

You May Also Like

ನರೇಗಲ್, ಹೊಳೆಯಾಲೂರು ಹೋಬಳಿ: ರೈತರಿಂದ ತಾಡಪತ್ರಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯಿಂದ ನರೇಗಲ್ ಹಾಗೂ ಹೊಳೆಆಲೂರ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ರಿಯಾಯಿತಿ ದರದಲ್ಲಿ ಲಾಟರಿ ಮುಖಾಂತರ ತಾಡಪತ್ರಿಗಳನ್ನು ವಿತರಿಸಲು ಅರ್ಜಿ ಕರೆಯಲಾಗಿದೆ.

ಫೇಸ್ ಬುಕ್ ಗೆಳೆಯನೊಂದಿಗೆ ಓಡಿ ಹೋದ ರಾಜಕೀಯ ಮುಖಂಡನ ಪತ್ನಿ!

ಲಕ್ನೋ : ರಾಜಕೀಯ ಮುಖಂಡರೊಬ್ಬರ ಪತ್ನಿ ಫೇಸ್‍ ಬುಕ್ ಗೆಳೆಯನ ಜೊತೆ ಓಡಿ ಹೋಗಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹ ನಗರದ ಕೊತವಾಲಿಯಲ್ಲಿ ನಡೆದಿದೆ.

ಗದಗ ಜಿಲ್ಲೆಯಲ್ಲಿ ಎಸ್ಎಸ್ಎಸ್ಎಲ್ಸಿ ಫಲಿತಾಂಶ ಇಳಿಕೆಗೆ ಶಿಕ್ಷಕರ ಅಪೂರ್ಣತೆಯೆ ಕಾರಣವಂತೆ!

ಶಿರಹಟ್ಟಿ: ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ವರ್ಷದಿಂದ ವರ್ಷಕ್ಕೆ ಇಳಿಕೆ ಕ್ರಮದಲ್ಲಿ ಸಾಗುತ್ತಿದ್ದು, ಇದಕ್ಕೆ ಶಿಕ್ಷಕರ ಅಪೂರ್ಣತೆಯೇ…

ಎರಡನೇ ಹಂತದ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಣೆ ಯಾವಾಗ?: ಸಿಎಂ ಹೇಳಿದ್ದೇನು?

ಬೆಂಗಳೂರು: ಈಗಾಗಲೇ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಎರಡನೇ ಹಂತದ ಪರಿಹಾರ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮೊದಲ ಹಂತದ ಪ್ಯಾಕೇಜ್ ಕುರಿತು ಸಾಕಷ್ಟು ಮನವಿಗಳು ಹಾಗೂ ಬೇಡಿಕೆಗಳು ವ್ಯಕ್ತವಾದ ಹಿನ್ನೆಲೆ ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎರಡನೇ ಹಂತದ ಪ್ಯಾಕೇಜನ್ನು ಸಿಎಂ ಘೋಷಣೆ ಮಾಡಲಿದ್ದಾರೆ.