ಸದ್ಯ ಸಿಎಂ ಯಡಿಯೂರಪ್ಪ ಸೋಂಕು ಹೆಚ್ಚುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡೀಯೋ ಸಂವಾದ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿಗಳ ಅಭಿಪ್ರಾಯ ಆಧರಿಸಿ ಬೆಂಗಳೂರಿನಂತೆ ಇನ್ನು ಕೆಲವು ಜಿಲ್ಲೆಗಳಲ್ಲಿ ವಾರದ ಮಟ್ಟಿಗಿನ ಲಾಕ್ ಡೌನ್ ಜಾರಿ ಮಾಡಬಹುದು ಎನ್ನಲಾಗಿದೆ.

ಗದಗ: ಮುಖ್ಯಮಂತ್ರಿ ಯಡಿಯೂರಪ್ಪ ಸೋಂಕು ತೀವ್ರವಾಗಿ ಏರಿಕೆ ಕಾಣುತ್ತಿರುವ 10 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ  ಇಂದು 11 ಗಂಟೆಗೆ ವಿಡಿಯೋ ಸಂವಾದ ಆರಂಭಿಸಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,  ಕಲಬುರಗಿ, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ರಾಯಚೂರು ಮತ್ತು ಗದಗ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಈ ಸಂವಾದದಲ್ಲಿ ಭಾಗಿಯಾಗಿದ್ದಾರೆ.

ಜಿಲ್ಲಾಧಿಕಾರಿಗಳ ಅಭಿಪ್ರಾಯ ಪಡೆದ ನಂತರ, ಆಯಾ ಜಿಲ್ಲೆಗಳಲ್ಲಿ 7 ದಿನದ ಲಾಕ್ ಡೌನ್ ಅಗತ್ಯವಿದೆಯೇ ಎಂಬುದನ್ನು ಮುಖ್ಯಮಂತ್ರಿ ನಿರ್ಧರಿಸಲಿದ್ದಾರೆ.

ಕಳೆದ 10 ದಿನಗಳಿಂದ ಸೋಂಕು ಪ್ರಕರಣಗಳಲ್ಲಿ ದಿಢೀರ್ ಏರಿಕೆ ಕಂಡಿರುವ ಗದಗ ಜಿಲ್ಲೆ ಈಗ ಸೋಂಕು ಏರುತ್ತಿರುವ 10 ಜಿಲ್ಲೆಗಳ ಪಟ್ಟಿಯಲ್ಲಿದೆ. ಬೆಂಗಳೂರಿನಂತೆ ಉಳಿದ 8 ಜಿಲ್ಲೆಗಳಲ್ಲೂ ಒಂದು ವಾರ ಕಾಲದ ಲಾಕ್ ಡೌನ್ ವಿಧಿಸುವ ಆಲೋಚನೆ ಸರ್ಕಾರಕ್ಕಿದೆ ಎನ್ನಲಾಗಿದೆ.

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡುವಾಗ ಸಚಿವ ಅಶೋಕ್ ಈ ವಿಷಯವನ್ನು ಪ್ರಸ್ತಾಪ ಮಾಡಿದ್ದಾರೆ. ಗದಗ ಜಿಲ್ಲೆಯೂ 7 ದಿನಗಳ ಲಾಕ್ ಡೌನ್ ಗೆ ಒಳಪಡಲಿದೆಯೇ ಎಂಬುದು ಸಂಜೆ ಹೊತ್ತಿಗೆ ತಿಳಿಯಲಿದೆ.

Leave a Reply

Your email address will not be published. Required fields are marked *

You May Also Like

ರಾಯಚೂರು ಜಿಲ್ಲಾ ನ್ಯಾಯಾದೀಶನ ಅಮಾನತ್ತಿಗೆ ಒತ್ತಾಯ

ವರದಿ: ವಿಠಲ ಕೆಳೂತ್ ಮಸ್ಕಿ: ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.‌ಬಿ. ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ…

ಶಿಕ್ಷಕರ ಅಗತ್ಯ ಸೇವೆ ಈಗ ಆನಲೈನ್ ವ್ಯಾಪ್ತಿಯಲ್ಲಿ: ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಸೂಚಿ ಲೇಪಿಸಿದ ಶಿಕ್ಷಣ ಸಚಿವರು,ಅಧಿಕಾರಿಗಳು

ಉತ್ತರಪ್ರಭ ಸುದ್ದಿಆಲಮಟ್ಟಿ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಶಿಕ್ಷಕರ ಅಗತ್ಯ 17 ಸೇವೆಗಳನ್ನು ಆನ್…

ವಿದ್ಯುತ್ ಅವಗಡ, ಕಬ್ಬಿನ ಹೊಲಕ್ಕೆ ಬೆಂಕಿ

ಉತ್ತರಪ್ರಭ ಸುದ್ದಿಲಕ್ಷ್ಮೇಶ್ವರ: ನಾಲ್ಕು ತಿಂಗಳಾದ್ಯಂತ ಹಗಲು ರಾತ್ರಿ ಎನ್ನದೆ ಕಷ್ಟ ಪಟ್ಟ ಬೆಳೆದ ಕಬ್ಬು ಬೆಳೆಗೆ…

ಬಳ್ಳಾರಿ ಜಿಲ್ಲೆಯಲ್ಲಿಂದು 26 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಮತ್ತೆ 26 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 555ಕ್ಕೆ ಏರಿಕೆಯಾಗಿದೆ.