ಈ ಐತಿಹಾಸಿಕ ದೇವಸ್ಥಾನದ ಆಡಳಿತದ ಮೇಲೆ ಹಿಡಿತ ಸಾಧಿಸಲು ಟ್ರಸ್ಟ್ ಒಂದನ್ನು ಸ್ಥಾಪಿಸುವಂತೆ ಕೇರಳ ಹೈಕೋರ್ಟ್ ಕೇರಳ ಸರ್ಕಾರಕ್ಕೆ ನೀಡಿದ್ದ ಆದೇಶ ರದ್ದು.

ನವದೆಹಲಿ: ಕೇರಳದ ಅನಂತ ಪದ್ಮನಾಭ ದೇವಾಲಯದ ಆಡಳಿತ  ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ತಿರುವಾಂಕೂರಿನ ರಾಜ ಮನೆತನದ ಹಕ್ಕನ್ನು ಸುಪ್ರೀಂಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ.

2011ರಲ್ಲಿ ಕೇರಳ ಹೈಕೋರ್ಟ್ ಟ್ರಸ್ಟ್ ಒಂದನ್ನು ರಚಿಸುವಂತೆ ಕೇರಳ ಸರ್ಕಾರಕ್ಕೆ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.

ಕೇರಳ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜಮನೆತನದವರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

ಎಲ್ಲೆಡೆ ರಾಜಪ್ರಭುತ್ವಗಳ ಅಧಿಕಾರಕ್ಕೆ ಕತ್ತರಿ ಹಾಕಿ ಅಲ್ಲಿ ಪ್ರಜಾಪ್ರಭುತ್ವದ ಅಡಿಯ ಟ್ರಸ್ಟ್ ನಿರ್ಮಾಣಕ್ಕೆ ಆದ್ಯತೆ ನೀಡುತ್ತಿರುವಾಗ ಸುಪ್ರೀಂಕೋರ್ಟ್ ಅನಂತಪದ್ಮನಾಭ ದೇವಸ್ಥಾನದ ಆಡಳಿತದ ಹಕ್ಕು ರಾಜಮನೆತನದವರಲ್ಲೇ ಉಳಿಯುವಂತೆ ಮಾಡಿದ್ದು ಜನಸಾಮಾನ್ಯರಲ್ಲಿ ಆಶ್ಚರ್ಯ ಮೂಡಿಸಿದೆ.

Leave a Reply

Your email address will not be published. Required fields are marked *

You May Also Like

ಬಿಹಾರ ಹಾಳು ಮಾಡಿದ್ದು, ಯುಪಿಎ ಹಾಗೂ ಮೈತ್ರಿ – ಮೋದಿ!

ಬಿಹಾರ : ಯುಪಿಎ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬಿಹಾರದಲ್ಲಿ ನಿತೀಶ್ ಕುಮಾರ್ ಸಿಎಂ ಆಗಿದ್ದರು. ಆದರೆ, ಅವರ ಪ್ರತಿಯೊಂದು ನಿರ್ಧಾರಗಳಿಗೆ ಕಾಂಗ್ರೆಸ್ ಅಡ್ಡಗಾಲು ಹಾಕಿತು. ಹೀಗಾಗಿ ರಾಜ್ಯ ಅಭಿವೃದ್ಧಿಯಿಂದ ಹಿಂದೆ ಉಳಿಯಬೇಕಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಶೇಂಗಾ ಚಿಕ್ಕಿಗೀಗ ಜಿಐ ಮಾನ್ಯತೆ

ಶೇಂಗಾ ಚಿಕ್ಕಿ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಶೇಂಗಾ ಚಿಕ್ಕಿ ರುಚಿಯ ಜೊತೆಗೆ ಪೌಷ್ಟಿಕವೂ ಹೌದು. ಅಂತಹ ಶೇಂಗಾ ಚಿಕ್ಕಿಗೀಗ ಜಿಐ ಮಾನ್ಯತೆ ದೊರೆತಿದೆ. ಏನಿದು ಐಜಿ ಮಾನ್ಯತೆ ಎಂದರೆ…??

ನುಗ್ಗೆಕಾಯಿ ಕದಿಯುವ ವೇಳೆ ಸಿಕ್ಕಿಬಿದ್ದ ಪೊಲೀಸರು

ಖದೀಮರನ್ನು ಹಿಡಿದು ಶಿಕ್ಷೆಗೆ ಗುರಿಯಾಗಿಸಿ ಸರಿ ದಾರಿಗೆ ತರಬೇಕಾದ ಕರ್ತವ್ಯ ಪೊಲೀಸರದ್ದು. ಆದರೆ, ಕೆಲ ಪೊಲೀಸರೇ ಕಳ್ಳತನಕ್ಕೆ ಇಳಿದಾಗ ಅದಕ್ಕಿಂತ ನಾಚಿಕಿಗೇಡಿನ ಸಂಗತಿ ಬೇರೊಂದಿಲ್ಲ.

ಬಿಜೆಪಿ ಕಾರ್ಯಕರ್ತರು, ಪೊಲೀಸರ ನಡುವೆ ಸಂಘರ್ಷ!

ಕೋಲ್ಕತಾ : ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಗುರುವಾರ ಹಿಂಸಾತ್ಮಕ ಘಷರ್ಣೆ ನಡೆದಿರುವ ಘಟನೆ ಪಶ್ಚಿಮ ಬಂಗಳಾದಲ್ಲಿ ನಡೆದಿದೆ.