ಸದ್ಯ ಬಿಹಾರ್ ಬಿಜೆಪಿಯ ಸಂಘಟನಾತ್ಮಕ ಕಾರ್ಯದರ್ಶಿ ಸೇರಿ 25 ನಾಯಕರಿಗೆ ಪಾಸಿಟಿವ್ ದೃಢಪಟ್ಟಿದೆ.

ಪಾಟ್ನಾ: ಬಿಜೆಪಿಯ ಪಾಟ್ನಾ ಕೇಂದ್ರ ಕಚೇರಿಯಲ್ಲಿ ಆತಂಕ ಶುರುವಾಗಿದೆ. ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗೇಂದ್ರನಾಥ್, ಪ್ರಧಾನ ಕಾರ್ಯದರ್ಶಿ ದೇವೇಶ್ಕುಮಾರ್ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ರಾಧಾಮೋಹನ್ ಶರ್ಮಾ ಸೇರಿ 25 ರಾಜ್ಯ ನಾಯಕರಿಗೆ ಇಂದು ಪಾಸಿಟಿವ್ ದೃಢಪಟ್ಟಿದೆ.

ಈ ಮೊದಲು 75 ಬಿಜೆಪಿ ನಾಯಕರಿಗೆ  ಸೋಂಕು ತಗುಲಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಈ ಕುರಿತು ಸ್ಪಷ್ಟನೆ ನೀಡಿರುವ ಪಕ್ಷದ ವಕ್ತಾರ ರಜ್ನಿ ರಾಜನ್ ಪಟೇಲ್, 75 ಜನರಿಗೆ ಪರೀಕ್ಷೆ ಮಾಡಲಾಗಿದ್ದು, 25 ಜನರಿಗೆ ಪಾಸಿಟಿವ್ ಬಂದಿದೆ ಎಂದಿದ್ದಾರೆ.

ಬಿಹಾರಿನಲ್ಲಿ ಸೋಂಕಿನ ತೀವ್ರತೆ ಹೆಚ್ಚಿದ್ದು, ನಾಳೆಯಿಂದ ಜುಲೈ 31ರವರೆಗೆ ಗ್ರಾಮೀಣ ಭಾಗ ಹೊರತುಪಡಿಸಿ ಇಡೀ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗಿದೆ.

ಇ-ರ‌್ಯಾಲಿ   ಪರಿಣಾಮ

ಜೂನ್ 9ರಂದು ಅಮಿತ್ ಶಾ ದೆಹಲಿಯಿಂದ ನಡೆಸಿದ ಇ-ರ್ಯಾಲಿ ನಂತರ ಹಲವಾರು ರಾಷ್ಟ್ರೀಯ ನಾಯಕರು ಇಂತಹ ವರ್ಚುವಲ್ ರ್ಯಾಲಿ ನಡೆಸಿದರು. ಪಾಟ್ನಾ ಬಿಜೆಪಿ ಕಚೇರಿಯಲ್ಲಿ ನೂರಾರು ಬಿಜೆಪಿ ನಾಯಕರು ಸೇರಿ ಇಂತಹ ಇ-ಸಭೆಗಳಲ್ಲಿ ಪಾಲ್ಗೊಳ್ಳುತ್ತಾ ಬಂದಿದ್ದಾರೆ. ಹಲವು ಸಭೆಗಳಲ್ಲಿ ಒಬ್ಬ ಪಾಸಿಟಿವ್ ಕಾರ್ಯಕರ್ತನೂ ಪಾಲ್ಗೊಂಡ ಪರಿಣಾಮ 25 ನಾಯಕರಿಗೆ ಸೋಂಕು ತಗುಲಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ

ಕೊರೋನಾ ಸೊಂಕಿಗೆ ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿದ್ದು, ರಾಜ್ಯ-ದೇಶ-ರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಅಪ್ಡೇಟ್ ಮಾಹಿತಿ..

ಈಗಿನಿಂದಲೇ ಹೊಸ ಗೆಟಪ್ ನಲ್ಲಿ ಬರಲು ತಯಾರಾಗುತ್ತಿದ್ದಾರೆ ಸುದೀಪ್!

ಲಾಕ್ ಡೌನ್ ಅವಧಿಯಲ್ಲಿ ಫ್ಯಾಂಟಮ್ ಕೆಲಸದಲ್ಲಿ ಸುದೀಪ್ ತೊಡಗಿಸಿಕೊಂಡಿದ್ದಾರೆ. ತಮ್ಮ ಮುಂದಿನ ಕಮರ್ಷಿಯಲ್ ಆಕ್ಷನ್ ಮೂವಿಗಾಗಿ ಹೊಸ ಗೆಟಪ್ ಪಡೆದಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಸೋಂಕು!

ಹಾವೇರಿ: ರಾಜ್ಯದಲ್ಲಿ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜರುಗಲಿವೆ. ಆದರೆ, ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಯಲ್ಲಿ ಕೊರೊನಾ…

ಮದುವೆಯಾಗುವುದಾಗಿ ನಂಬಿಸಿ ಮೋಸ – ವಿವಾಹಿತೆ ಆತ್ಮಹತ್ಯೆಗೆ ಶರಣು!

ಮಂಡ್ಯ : ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬ ಮೋಸ ಮಾಡಿದ್ದರ ಹಿನ್ನೆಲೆಯಲ್ಲಿ ನೊಂದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.