ಗದಗ: ಗದಗ ಜಿಲ್ಲೆಯಲ್ಲಿ ಮಂಗಳವಾರ ದಿ. 14 ರಂದು 9 ಜನರಿಗೆ ಕೊವಿಡ್-19 ಸೋಂಕು ದೃಢ ಪಟ್ಟಿದೆ.

ಗಜೇಂದ್ರಗಡದ ಕುಷ್ಟಗಿ ರಸ್ತೆಯ ಸಿದ್ದತ ಬಡಾವಣೆ ನಿವಾಸಿ 25 ವರ್ಷದ ಪುರುಷ ಪಿ-41663 ಕೆಮ್ಮು, ಜ್ವರ ಲಕ್ಷಣಗಳಿಂದಾಗಿ ಸೋಂಕು ದೃಢಪಟ್ಟಿದೆ.

ಅಂತರ ಜಿಲ್ಲಾ ಪ್ರಯಾಣದ ಹಿನ್ನಲೆಯಲ್ಲಿ ಹಾವೇರಿ ಜಿಲ್ಲೆಯ ಕನವಳ್ಳಿ ಗ್ರಾಮದ ನಿವಾಸಿ 48 ವರ್ಷದ ಮಹಿಳೆ ಪಿ-41664 ಇವರಿಗೆ ಸೋಂಕು ದೃಢಪಟ್ಟಿದೆ.

ಪಿ-35070 ಸೋಂಕಿತರ ಸಂಪರ್ಕದಿಂದಾಗಿ ಗದಗ-ಬೆಟಗೇರಿ ದಾಸರ ಓಣಿ ನಿವಾಸಿ 34 ವರ್ಷದ ಮಹಿಳೆ ಪಿ-41665 ಇವರಿಗೆ ಸೋಂಕು ದೃಢಪಟ್ಟಿದೆ.

ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದ ನಿವಾಸಿ 65 ವರ್ಷದ ಮಹಿಳೆ ಪಿ-41666 ಕೆಮ್ಮು ಹಾಗೂ ಜ್ವರ ಲಕ್ಷಣಗಳಿಂದಾಗಿ ಸೋಂಕು ದೃಢಪಟ್ಟಿದೆ.

ಗದಗ-ಬೆಟಗೇರಿ ನಗರದ ದಾಸರ ಓಣಿ ನಿವಾಸಿ 63 ವರ್ಷದ ಪುರುಷ ಪಿ-41667 ಇವರಿಗೆ ಸೋಂಕು ದೃಢಪಟ್ಟಿದೆ.

ಧಾರವಾಡ ಜಿಲ್ಲೆಯ ಸತ್ತೂರ ಪ್ರದೇಶದ ನಿವಾಸಿ 70 ವರ್ಷ ಪುರುಷ ಪಿ-41668 ಇವರಿಗೆ ಉಸಿರಾಟದ ತೊಂದರೆಯಿಂದ ಸೋಂಕು ದೃಢಪಟ್ಟಿದೆ.

ಗದಗ-ಬೆಟಗೇರಿ ನಗರದ ಅಂಬೇಡ್ಕರ ನಗರದ ನಿವಾಸಿ 38 ವರ್ಷದ ಮಹಿಳೆ ಪಿ-41696 ಕೆಮ್ಮು, ಜ್ವರದ ಲಕ್ಷಣಗಳಿಂದಾಗಿ ಸೋಂಕು ದೃಢಪಟ್ಟಿದೆ.

ಗದಗ ನಗರದ ಅಬ್ಬಿಗೇರಿ ಕಂಪೌಂಡ ನಿವಾಸಿ 55 ವರ್ಷದ ಮಹಿಳೆ ಪಿ-41715 ಸೋಂಕು ದೃಢಪಟ್ಟಿದ್ದು ಸೋಂಕಿನ ಪತ್ತೆ ಕಾರ್ಯ ನಡೆದಿದೆ.

ಗದಗ-ಬೆಟಗೇರಿ ನಗರದ ವಾರ್ಡ ನಂ 32 ಲೊಕೋಪಯೋಗಿ ಇಲಾಖೆ ಕಚೇರಿ ಹಿಂದುಗಡೆಯ ದಾಸರ ಓಣಿ ನಿವಾಸಿ 57 ವರ್ಷದ ಪುರುಷ ಪಿ-41732 ಇವರಿಗೆ ಸೋಂಕು ದೃಢಪಟ್ಟಿದೆ.

ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಇಲಿಗಳೂ ಸಾರಾಯಿ ಕುಡಿಯುತ್ತವೆ.

ಆ ಟ್ಯೂಬ್ ನಲ್ಲಿ ಇದ್ದ ಸಾರಾಯಿಯನ್ನು ಮುದ್ದೆ ಮಾಲು ಕೊಠಡಿಯಲ್ಲಿ ಇದ್ದ ಇಲಿಗಳು ಕುಡಿದಿವೆ ಅಂತ ಹೇಳಿದ. ಆ ಕೊಠಡಿಯಲ್ಲಿ ಇಲಿ ಇದ್ದದ್ದು ನಿಜ ಆದರೆ ಇಲಿ ಸಾರಾಯಿ ಕುಡಿದಿದ್ದು ಯಾರು ಗಮನಿಸಿಲ್ಲ. ಆದರೂ ಇಲಿ ಸಾರಾಯಿ ಕುಡಿದಿದ್ದು, ನಿಜ..!

ಪ.ಜಾ-ಪ.ಪಂ ಕುಂದುಕೊರತೆ ಸಭೆ

ನಗರದ ಡಿ.ಸಿ.ಮಿಲ್ ತಳಗೇರಿ ಓಣಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ ಆಯೋಜಿಸಲಾಯಿತು.

ರಾಜ್ಯದಲ್ಲಿ ಇಂದು 22 ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಕೋವಿಡ್ ಸೋಂಕಿನ ಅಂಕಿ ಅಂಶಗಳಲ್ಲಿ ಮಾರ್ಚ್ ನಲ್ಲಿ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ, ಇಂದು ಹದಿಮೂರನೇ ಸ್ಥಾನದಲ್ಲಿದೆ ಶೇ.5.97 ನ ರಾಷ್ಟ್ರೀಯ ಸರಾಸರಿಗೆ ಹೋಲಿಸಿದಲ್ಲಿ‌ ರಾಜ್ಯದ ‌ಸರಾಸರಿ ಶೇ.3.13 ಇದೆ.