ಎರಡನೆ ಶಾಸಕಾಂಗೀಯ ಪಕ್ಷದ ಸಭೆಗೂ ಗೈರು ಹಾಜರಾದ ಸಚಿನ್ ಪೈಲಟ್ ಅವರನ್ನು ಡಿಸಿಎಂ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗಳಿಂದ ಕೈಬಿಡಲಾಗಿದೆ.

ಜೈಪುರ: ಮೂರು ದಿನಗಳಿಂದ ಸಾರ್ವಜನಿಕವಾಗಿ ನಡೆಯುತ್ತಿರುವ  ರಾಜಸ್ತಾನ ರಾಜಕೀಯದ ಹಗ್ಗ-ಜಗ್ಗಾಟ ಈಗ ಕ್ಲೈಮಾಕ್ಸ್ ಹಂತದತ್ತ ಚಲಿಸುತ್ತಿದೆ. ಪಕ್ಷ ಸಾರ್ವಜನಿಕವಾಗಿಯೇ ಆಹ್ವಾನ ನೀಡಿದರೂ ಇಂದು ಮಂಗಳವಾರ ನಡೆದ ಎರಡನೆ ಶಾಸಕಾಂಗ ಪಕ್ಷದ ಸಭೆಗೂ ಗೈರು ಆಗುವ ಮೂಲಕ ಸಚಿನ್ ಪೈಲಟ್ ಬಿಜೆಪಿಯ ಅಂಗಳಕ್ಕೆ ಕಾಲಿಡುವ ಮುನ್ಸೂಚನೆ ನೀಡಿದ್ದಾರೆ.

ನಿನ್ನೆವರೆಗೆ 109 ಸದಸ್ಯರ ಬೆಂಬಲವಿದೆ ಎನ್ನುತ್ತಿದ್ದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬಣದಲ್ಲೀಗ ಸಂಖ್ಯೆ ಕುಗ್ಗುತ್ತ ನಡೆದಿದೆ. ಪೈಲಟ್ ಬಣ ವಿಡಿಯೋ ಮತ್ತು ಪತ್ರಿಕಾ ಹೇಳಿಕೆ ಮೂಲಕ ತಾವು 30 ಸದಸ್ಯರಿದ್ದಾರೆ ಎಂದು ಪ್ರತಿಪಾದಿಸುತ್ತಿದೆ.

107 ಸದಸ್ಯರ ಬಲ ಹೊಂದಿದ್ದ ಆಡಳಿರೂಢ ಕಾಂಗ್ರೆಸ್ ಸಂಖ್ಯೆ ಈಗ 90ಕ್ಕೆ ಇಳಿದಿದ್ದು, ಇತರ ಪಕ್ಷಗಳ ಸದಸ್ಯರು ಸೇರಿ 100 ಬಲ ಹೊಂದಿದೆ. ಸರಳ ಬಹುಮತಕ್ಕೆ 101 ಸದಸ್ಯರು ಬೇಕು.

Leave a Reply

Your email address will not be published. Required fields are marked *

You May Also Like

ಮೋದಿ ವಿರುದ್ಧ ಗುಡುಗಿರುವ ಮಾಜಿ ಪ್ರಧಾನಿ!

ನವದೆಹಲಿ : ಚೀನಾ ಸಂಘರ್ಷದ ಕುರಿತು ಮಾತನಾಡಿರುವ ಪ್ರಧಾನಿ ತಾವು ಆಡುವ ಮಾತುಗಳ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ತಮ್ಮ ಸ್ಥಾನದ ಸಮರ್ಥನೆ ಮಾಡಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..?

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..? ಪರೀಕ್ಷೆ ನಡೆಯುವ 1 ಗಂಟೆ 30 ನಿಮಿಷ ಮೊದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು.

ವಲಸಿಗರ ರೈಲ್ವೇ ಪ್ರಯಾಣ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ: ಸೋನಿಯಾಗಾಂಧಿ

ಲಾಕ್ ಡೌನ್ ಹಿನ್ನೆಲೆಯಲ್ಲಿ ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದ ವಲಸಿಗರ ರೈಲ್ವೆ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ಅಂತರಾಜ್ಯ ಪ್ರಯಾಣಿಕರಿಗೆ ಸರ್ಕಾರದ ಮಾರ್ಗಸೂಚಿ

ಬೆಂಗಳೂರು: ಅಂತರಾಜ್ಯದಿಂದ ಬರುವ ಪ್ರಯಾಣಿಕರಿಗೆ ಸರ್ಕಾರ ಕೆಲವು ಸೂಚನೆಗಳನ್ನು ನೀಡಿದೆ. ಸರ್ಕಾರ ನೀಡಿದ ಸೂಚನೆಗಳು ಈ…