ಕೆ.ಎಸ್.ಆರ.ಟಿ.ಸಿ ನೌಕರರಿಗೆ 1 ವರ್ಷ ಸಂಬಳರಹಿತ ರಜೆ  ನೀಡಲು ಹೊರಟಿರುವುದು ಕಾರ್ಮಿಕ ವಿರೋಧಿ ನಡೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು: ಕೆ.ಎಸ್.ಆರ.ಟಿ.ಸಿ ನೌಕರರಿಗೆ ಒಂದು ವರ್ಷ ವೇತನರಹಿತ ಮತ್ತು ಭತ್ಯೆರಹಿತ ರಜೆ ನೀಡುವ ಸರ್ಕಾರದ ಯೋಚನೆ ಕಾರ್ಮಿಕ ವಿರೋಧಿ ಮತ್ತು ಅಮಾನವೀಯ ಕ್ರಮ ಎಂದು ಸರ್ಕಾರವನ್ನು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮಂಗಳವಾರ ಸಾಯಂಕಾಲ ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆ.ಎಸ್ಆರ್.ಟಿ.ಸಿ ಮೇಲ್ಪಂಕ್ತಿಯನ್ನು ಇತರ ಇಲಾಖೆಗಳು ಮತ್ತು ಖಾಸಗಿ ಕಂಪನಿಗಳು ಅನುಸರಿಸಿದರೆ ಲಕ್ಷಾಂತರ ಕಾರ್ಮಿಕರ ಪಾಡೇನು? ಎಂದಿರುವ ಅವರು, ಸರ್ಕಾರ ದಿವಾಳಿಯಾಗಿದೆಯೇ? ಎಂದೂ ಪ್ರಶ್ನಿಸಿದ್ದಾರೆ.

ಟ್ವೀಟ್ ಜೊತೆಗೆ, ಇದೇ ವಿಷಯವಾಗಿ ಜುಲೈ 10ರಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬರೆದ ಪತ್ರವನ್ನೂ ಲಗತ್ತಿಸಿದ್ದಾರೆ.

ಪತ್ರದಲ್ಲಿ, ‘ಪ್ರಯಾಣಿಕರು ಇಲ್ಲದ ಕಾರಣಕ್ಕೆ ನೌಕರರು ಕೆಲಸವಿಲ್ಲದೇ ಇದ್ದರೆ ಅವರ ಸೇವೆಯನ್ನು ಇತರ ಕೆಲಸಗಳಿಗೆ ಬಳಸಿಕೊಳ್ಳಬಹುದು. ಆದರೆ ವೇತನರಹಿತ ಮತ್ತು ಭತ್ಯೆರಹಿತ ರಜೆ ನೀಡುವುದು ಕ್ರೌರ್ಯದ ಪರಮಾವಧಿ ಆಗುತ್ತದೆ ಎಂದು ಸರ್ಕಾರವನ್ನು ಎಚ್ಚರಿಸಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ಪೊಲೀಸ್ ಇಲಾಖೆಗೆ ಸೇರಿದ ಜಾಗವನ್ನೇ ಅತಿಕ್ರಮಣ ಮಾಡಿದ ಜನರು!

ಧಾರವಾಡ : ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಜಾಗಗಳನ್ನು ವಶಕ್ಕೆ ಪಡೆಯಲು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ…

ರಾಜ್ಯದಲ್ಲಿಂದು 388 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 388 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3796 ಕ್ಕೆ ಏರಿಕೆಯಾದಂತಾಗಿದೆ.

ಶಾಸಕ ಡಾ: ವೀರಣ್ಣ ಚರಂತಿಮಠ ಇವರಿಂದ 10ಕೋಟಿ.17ಲಕ್ಷ ರೂ ಗಳ ಕಾಮಗಾರಿ ಚಾಲನೆ

ಬಾಗಲಕೋಟೆ: ಕ್ಷೇತ್ರದ ಶಾಸಕ ಡಾ:ವೀರಣ್ಣ ಚರಂತಿಮಠ ತಾಲ್ಲೂಕಿನ ಬೇವೂರು ಹಾಗೂ ಬೆನಕಟ್ಟಿ ಗ್ರಾಮಗಳಲ್ಲಿ ಸೋಮವಾರ 10 ಕೋಟಿ, 17 ಲಕ್ಷ ರೂ.ಗಳ ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿ ಗಳಿಗೆ ಚಾಲನೆ ನೀಡಿದರು.

ಸಾವರಕರ್ ಬದಲಾಗಿ ರಾಹುಲ್, ಸೋನಿಯಾಗಾಂಧಿ ಹೆಸರಿಡಬೇಕಾ?: ಸಿ.ಸಿ.ಪಾಟೀಲ್

ಗದಗ: ಸಾವರ್ಕರ್ ಹೆಸರಿಡದೇ, ರಾಹುಲ್ ಗಾಂಧಿ, ಸೋನಿಯಾಗಾಂಧಿ ಹೆಸರಿಡಬೇಕಾ? ಸಾವರ್ಕರ್ ತ್ಯಾಗ ಬಲಿದಾನ, ಕಾಲಾಪಾನಿ ಶಿಕ್ಷೆ,…