ಕೆ.ಎಸ್.ಆರ.ಟಿ.ಸಿ ನೌಕರರಿಗೆ 1 ವರ್ಷ ಸಂಬಳರಹಿತ ರಜೆ  ನೀಡಲು ಹೊರಟಿರುವುದು ಕಾರ್ಮಿಕ ವಿರೋಧಿ ನಡೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು: ಕೆ.ಎಸ್.ಆರ.ಟಿ.ಸಿ ನೌಕರರಿಗೆ ಒಂದು ವರ್ಷ ವೇತನರಹಿತ ಮತ್ತು ಭತ್ಯೆರಹಿತ ರಜೆ ನೀಡುವ ಸರ್ಕಾರದ ಯೋಚನೆ ಕಾರ್ಮಿಕ ವಿರೋಧಿ ಮತ್ತು ಅಮಾನವೀಯ ಕ್ರಮ ಎಂದು ಸರ್ಕಾರವನ್ನು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮಂಗಳವಾರ ಸಾಯಂಕಾಲ ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆ.ಎಸ್ಆರ್.ಟಿ.ಸಿ ಮೇಲ್ಪಂಕ್ತಿಯನ್ನು ಇತರ ಇಲಾಖೆಗಳು ಮತ್ತು ಖಾಸಗಿ ಕಂಪನಿಗಳು ಅನುಸರಿಸಿದರೆ ಲಕ್ಷಾಂತರ ಕಾರ್ಮಿಕರ ಪಾಡೇನು? ಎಂದಿರುವ ಅವರು, ಸರ್ಕಾರ ದಿವಾಳಿಯಾಗಿದೆಯೇ? ಎಂದೂ ಪ್ರಶ್ನಿಸಿದ್ದಾರೆ.

ಟ್ವೀಟ್ ಜೊತೆಗೆ, ಇದೇ ವಿಷಯವಾಗಿ ಜುಲೈ 10ರಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬರೆದ ಪತ್ರವನ್ನೂ ಲಗತ್ತಿಸಿದ್ದಾರೆ.

ಪತ್ರದಲ್ಲಿ, ‘ಪ್ರಯಾಣಿಕರು ಇಲ್ಲದ ಕಾರಣಕ್ಕೆ ನೌಕರರು ಕೆಲಸವಿಲ್ಲದೇ ಇದ್ದರೆ ಅವರ ಸೇವೆಯನ್ನು ಇತರ ಕೆಲಸಗಳಿಗೆ ಬಳಸಿಕೊಳ್ಳಬಹುದು. ಆದರೆ ವೇತನರಹಿತ ಮತ್ತು ಭತ್ಯೆರಹಿತ ರಜೆ ನೀಡುವುದು ಕ್ರೌರ್ಯದ ಪರಮಾವಧಿ ಆಗುತ್ತದೆ ಎಂದು ಸರ್ಕಾರವನ್ನು ಎಚ್ಚರಿಸಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ಮನೆಯವರ ಕಿರುಕುಳಕ್ಕೆ ನೊಂದ ಸೊಸೆ ಮಾಡಿದ್ದೇನು?

ಮಂಡ್ಯ : ಮನೆಯವರ ನಿರಂತರ ದೌರ್ಜನ್ಯಕ್ಕೆ ಬೇಸತ್ತ ಸೊಸೆಯೊಬ್ಬರು ಪತಿ, ಮಾವ ಹಾಗೂ ಅತ್ತೆಯನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.

ಅವಿಕಾ ಜೊತೆ ರೊಮ್ಯಾನ್ಸ್ ಮಾಡಲಿರುವ ಆದಿ

ಯುವ ನಟ ಆದಿ ಸಾಯಿಕುಮಾರ್ ಅವರು ಮುಂಬರುವ ದೊಡ್ಡ ಬಜೆಟ್ ಚಿತ್ರ ‘ಅಮರನ್’ ಚಿತ್ರಕ್ಕಾಗಿ ಸಜ್ಜಾಗಿದ್ದಾರೆ.

ಗದಗ ಜಿಲ್ಲೆಯ 9 ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಭಂಧ ತೆರವು

ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 9 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು. ಇದೀಗ 9 ಪ್ರದೇಶಗಳ ನಿರ್ಭಂಧವನ್ನು ಜಿಲ್ಲಾಡಳಿತ ತೆರವುಗೊಳಿಸಲಾಗಿದೆ.

ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಅಗತ್ಯ ಪ್ರೋ. P. S. ಅಣ್ಣಿಗೇರಿ

ನರಗುಂದ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಸಲು ಶ್ರೀ ಸಿದ್ದೇಶ್ವರ ಪ್ರಥಮ ದರ್ಜೆ ಕಾಲೇಜು ನರಗುಂದ ಕಾಲೇಜಿನಲ್ಲಿ…