ಸೋಂಕಿತರ ಸಂಖ್ಯೆ (ಕೇಸ್ ಲೋಡ್) ಆಧಾರದ ಪಟ್ಟಿಯಲ್ಲಿ ಕರ್ನಾಟಕ ಈಗ ಗುಜರಾತ್ ದಾಟಿ 4ನೆ ಸ್ಥಾನಕ್ಕೆ ಏರಿದೆ. ಗುಣಮುಖರ ಸಂಖ್ಯೆಗಿಂತ (ರಿಕವರಿ) ಸಕ್ರಿಯ ಪ್ರಕರಣಗಳ (ಆಕ್ಟಿವ್ ಕೇಸ್) ಸಂಖ್ಯೆ ಹೆಚ್ಚಿರುವ ಆರು ರಾಜ್ಯಗಳಲ್ಲಿ ಕರ್ನಾಟಕವೂ ಒಂದು.

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 2,496 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 44.077ಕ್ಕೆ ತಲುಪಿದೆ. ಈ ಮೂಲಕ  ಹೆಚ್ಚು ಸೋಂಕಿತ ರಾಜ್ಯಗಳ ಪಟ್ಟಿಯಲ್ಲಿ ರಾಜ್ಯವು ಗುಜರಾತ್ ದಾಟಿ ನಾಲ್ಕನೆ ಸ್ಥಾನಕ್ಕೆ ತಲುಪಿದೆ.

ಟೆಸ್ಟ್ ಸಂಖ್ಯೆ ಹೆಚ್ಚಿಸಿದ್ದರಿಂದ ಸಹಜವಾಗಿಯೇ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಇದು ನಿಜವೇ. ಆದರೆ, ರಾಜ್ಯದ ರಿಕವರಿ ರೇಟ್ (ಗುಣಮುಖರ ಸಂಖ್ಯೆ) ಕಡಿಮೆ ಮಟ್ಟದಲ್ಲಿದೆ. ದೇಶದಲ್ಲಿ ಟಾಪ್-3 ಸೋಂಕು ಹೆಚ್ಚಿರುವ ರಾಜ್ಯಗಳು ಸೇರಿ 22 ರಾಜ್ಯಗಳಲ್ಲಿ ಗುಣಮುಖರ ಸಂಖ್ಯೆ ಸಕ್ರಿಯ ಕೇಸ್ಗಳಿಗಿಂತ ಹೆಚ್ಚಿದೆ. ಕೇವಲ ಆರು ರಾಜ್ಯಗಳಲ್ಲಿ ಮಾತ್ರ ಗುಣಮುಖರಿಗಿಂತ ಸಕ್ರಿಯ ಕೇಸ್ ಹೆಚ್ಚಿದ್ದು ಅದರಲ್ಲಿ ರಾಜ್ಯವೂ ಒಂದಾಗಿದೆ. ಈ ಕುರಿತಂತೆ ಆರೋಗ್ಯ ಅಥವಾ ವೈದ್ಯಕೀಯ ಶಿಕ್ಷಣ ಸಚಿವರು ಮಾತೇ ಆಡದಿರುವುದು ವಿಚಿತ್ರವಾಗಿದೆ.

ರಾಜ್ಯದಲ್ಲಿ ಮಂಗಳವಾರದ ಅಂತ್ಯದ ಹೊತ್ತಿಗೆ 17,390 ಗುಣಮುಖರಿದ್ದರೆ, 25,389 ಸಕ್ರಿಯ ಕೇಸ್ಗಳಿವೆ. ಈ ತಿಂಗಳ ಮೊದಲ ಎರಡು ವಾರಗಳಲ್ಲಿ 29 ಸಾವಿರ ಕೇಸ್ ದಾಖಲಾಗಿವೆ. ಸೋಂಕಿನ ಬೆಳವಣಿಗೆ ದರ ಶೇ. 7.36 ಇದ್ದು ದೇಶದಲ್ಲೇ ಇದು ಹೆಚ್ಚಿನ ದರವಾಗಿದೆ.

       ಒಂದು ಅನುಕೂಲವಿದೆ

ಟೆಸ್ಟ್ ಸಂಖ್ಯೆ ಜಾಸ್ತಿ ಮಾಡಿರುವುದರಿಂದ ಸೋಂಕಿತರು ಬೇಗನೆ ಪತ್ತೆಯಾಗಿ ಐಸೊಲೇಷನ್ಗೆ ಒಳಗಾಗುವುದರಿಂದ ಸೋಂಕಿನ ಹರಡುವಿಕೆ ನಿಯಂತ್ರಣಕ್ಕೆ ಬರುತ್ತದೆ. ಎರಡು ವಾರಗಳ ಹಿಂದೆ ದೆಹಲಿ ಕೂಡ ರಾಜ್ಯದಂತೆ ದಿನವೂ ಸಾಕಷ್ಟು ಸೋಂಕಿತ ಪ್ರಕರಣಗಳನ್ನು ಕಾಣುತ್ತಿತ್ತು. ನಂತರ ಈಗ ಅಲ್ಲಿ ಸೋಂಕು ಪ್ರಕರಣ ಕಡಿಮೆಯಾಗಿವೆ. ಸಕ್ರಿಯ ಕೇಸ್ಗಳಿಗಿಂತ ಗುಣಮುಖರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ರಾಜ್ಯದಲ್ಲೂ ಇನ್ನೆರಡು ವಾರಗಳ ನಂತರ ಸೋಂಕಿನ ಪ್ರಕರಣ ಕಡಿಮೆ ಆಗಬಹುದು ಎಂದು ನಿರೀಕ್ಷಿಸಬಹುದು.

Leave a Reply

Your email address will not be published. Required fields are marked *

You May Also Like

ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿ: ನಮ್ಮೂರ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಆರ್ಥಿಕ ಸಹಾಯದಿಂದ ಸ್ಥಳಿಯ ಪಪಂ ಹಾಗೂ ಶ್ರೀ ಬಾಲಲೀಲಾ ಮಹಾಂತ ಶಿವಯೋಗಿ ಕೆರೆ ಅಭಿವೃದ್ದಿ ಸಮಿತಿ ಸಹಭಾಗಿತ್ವದಲ್ಲಿ ಪಟ್ಟಣಶೆಟ್ಟಿ ಕೆರೆ ಆವರಣದಲ್ಲಿ 246ನೇ ನಮ್ಮೂರ ಕೆರೆ ಹೂಳೆತ್ತುವ ಕಾರ್ಯಕ್ರಮವನ್ನ ಗ್ರಾಮಾಭಿವೃದ್ದಿ ಯೋಜನೆಯ ಹೈದರಬಾದ ಕರ್ನಾಟಕದ ಪ್ರಾದೇಶಿಕ ನಿರ್ದೇಶಕ ಪುರುಷೋತ್ತಮ್ ಅವರು ಚಾಲನೆ ನೀಡಿದರು.

ವಿದ್ಯುತ್ ಸ್ಪರ್ಷ: ಯುವಕ ಸಾವು

ವಿದ್ಯುತ್ ಸ್ಪರ್ಷದಿಂದ ಯುವಕ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದಿದೆ. ಕದಡಿ ಗ್ರಾಮದ ಬಸನಗೌಡ ರಾಮನಗೌಡ ಸಣಗೌಡ್ರ (25) ಸಾವನ್ನಪ್ಪಿದ ದುರ್ದೈವಿ.

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2021-22ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ…

ಉಗ್ರರಿಂದ ಬಿಜೆಪಿ ನಾಯಕ ವಾಸೀಂ ಹತ್ಯೆ: ತಂದೆ, ಸಹೋದರನೂ ಬಲಿ

ಶ್ರೀನಗರ: ಬುಧವಾರ ರಾತ್ರಿ 9ಕ್ಕೆ ಜಮ್ಮು-ಕಾಶ್ಮೀರದ ಬಿಜೆಪಿ ನಾಯಕ ಶೇಖ್ ವಾಸೀಂ ಬಾರಿ, ಆತನ ತಂದೆ…