ಬೆಂಗಳೂರು: ಕಿಚ್ಚ ಸುದೀಪ್ ಸಾಮಾಜಿಕ ಕಳಕಳಿಯ ಮಾನವೀಯತೆಯ ಹರಿಕಾರರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಭಿಮಾನಿಗಳ ಮನೆ ಗೆಲ್ಲುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಆಟೋ ಚಾಲಕನ ಸಹೋದರಿಯ ಮದುವೆ ಖರ್ಚು ಮಾಡಿ ಎಲ್ಲರ ಮನ ಗೆದ್ದಿದ್ದರು. ಸದ್ಯ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದಾರೆ.

ನಟ ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಾಲ್ಕು ಶಾಲೆಗಳನ್ನು ದತ್ತು ಪಡೆಯಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮೂರು ಹಾಗೂ ಹಿರಿಯೂರು ತಾಲೂಕಿನ ಒಂದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಲಾಗಿದೆ.

ಪಿ. ಒಬವನಹಳ್ಳಿ, ಚಳ್ಳಕೆರೆ ಶಾಲೆ, ಪರುಶರಾಂಪುರ ಶಾಲೆ ಮತ್ತು ಚಿತ್ರದುರ್ಗದ ಶಾಲೆಯನ್ನು ದತ್ತು ಪಡೆದು ಶಾಲೆಯ ಸಂಪೂರ್ಣ ಅಭಿವೃದ್ಧಿ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈ ಶಾಲೆಗಳಿಗೆ ಬೇಕಾದ ಅಗತ್ಯ ಸೌಕರ್ಯಗಳನ್ನು ನೀಡುವುದಕ್ಕೆ ಟ್ರಸ್ಟ್ ಮುಂದಾಗಿದೆ.

ಕಟ್ಟಡ ದುರಸ್ತಿ, ಶೌಚಾಲಯ ವ್ಯವಸ್ಥೆ, ಪೀಠೋಪಕರಣ, ಶಾಲೆಗಳಿಗೆ ಕಂಪ್ಯೂಟರ್ ನೀಡುವುದು ಸೇರಿದಂತೆ ಅನೇಕ ಯೋಜನೆಗಳನ್ನು ಟ್ರಸ್ಟ್ ಹಮ್ಮಿಕೊಂಡಿದೆ. ಅಲ್ಲದೇ ಗುಣಮಟ್ಟದ ಶಿಕ್ಷಣ ಸೇರಿದ್ದಂತೆ ಮಕ್ಕಳನ್ನು ಸರ್ಕಾರಿ ಶಾಲೆಯತ್ತ ಕರೆತರುವ ಪ್ರಯತ್ನವನ್ನು ಈ ಮೂಲಕ ಮಾಡಲಾಗುತ್ತಿದೆ. ಸುದೀಪ್ ಅವರ ಸಾಮಾಜಿಕ ಕಾರ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ

Leave a Reply

Your email address will not be published. Required fields are marked *

You May Also Like

ನಿರೂಪಕಿ ಅನುಶ್ರೀ ವಿರುದ್ಧ ಸಿಸಿಬಿ ಫುಲ್ ಗರಂ

ಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ನಿರೂಪಕಿ ಅನುಶ್ರೀ ವಿರುದ್ಧ ಸಿಸಿಬಿ ಅಧಿಕಾರಿಗಳು ಗರಂ ಆಗಿದ್ದಾರೆ.

ಪಿಗ್ಗಿ ಬರ್ತಡೇ: ಕವಿಯಾದ ಗಂಡ

ಬಾಲಿವುಡ್ ಬೆಡಗಿ ಪ್ರಿಯಾಂಕ್ ಚೋಪ್ರಾ ಅವರ ಹುಟ್ಟು ಹಬ್ಬಕ್ಕೆ ಅವರ ಪತಿ ಕವಿಯಾಗಿದ್ದಾರೆ.ಜುಲೈ 18ರಂದು ನಟಿ ಪ್ರಿಯಾಂಕಾ ಚೋಪ್ರಾ ಅವರು ತಮ್ಮ 38ನೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ

ಹುಡುಗನಾಗಿ ಬದಲಾದ ಖ್ಯಾತ ನಟಿಯ ಸಿಕ್ಸ್ ಪ್ಯಾಕ್ ಫೋಟೋ ಶೇರ್.

ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಎಲಿಯಟ್, ಬಾಲ್ಯದಲ್ಲಿ ತನ್ನ ದೇಹದಲ್ಲಿನ ಬದಲಾವಣೆ ಗಮನಿಸಿದಾಗ ತುಂಬ ಹಿಂಸೆ ಆಗುತ್ತಿತ್ತು. ಹುಡುಗನ ಹಾಗೆ ವರ್ತಿಸುತ್ತಿದ್ದೆ. ಹಾಲಿವುಡ್ ನಲ್ಲಿ ಖ್ಯಾತಿ ಗಳಿಸುತ್ತಿದ್ದಂತೆ ವೈಯಕ್ತಿಕ ಜೀವನದಲ್ಲಿ ತುಂಬಾ ಅಪ್ ಸೆಟ್ ಆಗುತ್ತಿದ್ದೆ ಎಂದಿದ್ದಾರೆ.

ನಾಪತ್ತೆಯಾಗಿದ್ದ ನಟಿ ರಮ್ಯ ಮತ್ತೆ ಪ್ರತ್ಯಕ್ಷ

ಚಂದನವನದ ಪದ್ಮಾವತಿ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಕಾಣಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಕ್ವೀನ್ ದರ್ಶನಕ್ಕಾಗಿ ಎಷ್ಟೋ ಅಭಿಮಾನಿಗಳು ಕಾಯುತ್ತಿದ್ದರು.