263 ಕೋಟಿ ರೂ. ವೆಚ್ಚದಲ್ಲಿ ನದಿ ಮೇಲೆ ನಿರ್ಮಿಸಿದ್ದ ಈ ಸೇತುವೆ  ಜೂನ್ 16ರಂದು ಉದ್ಘಾಟನೆಯಾಗಿತ್ತು. ಬುಧವಾರ ಧಡಾರನೆ ಕುಸಿದು ನದಿಯೊಳಕ್ಕೆ ಬಿದ್ದಿದೆ!

ಗೋಪಾಲ್ ಗಂಜ್(ಬಿಹಾರ್):  ಬಿಹಾರಿನ ಗೋಪಾಲ್ ಗಂಜ್ ಜಿಲ್ಲೆಯಲ್ಲಿ ಗಾಂಧಕ್ ನದಿ ಮೇಲೆ ನಿರ್ಮಿಸಲಾಗಿದ್ದ ಸೇತುವೆ ಬುಧವಾರ ಕುಸಿದಿದೆ.

263 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಈ ಸೇತುವೆಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಜೂನ್ 16ರಂದು ಉದ್ಘಾಟನೆ ಮಾಡಿದ್ದರು. ಉದ್ಘಾಟನೆಯಾಗಿ 29 ದಿನಕ್ಕೇ ಕುಸಿದಿದ್ದು, ವಿರೋಧ ಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

ಸೇತುವೆ ನಿರ್ಮಿಸಿದ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡಿದ್ದು ಸರ್ಕಾರಿ ಅಧಿಕಾರಿಗಳು ಅವರಿಗೆ ಬೆಂಗಾವಲಾಗಿ ನಿಂತಿದ್ದಾರೆ ಎಂದು ಸ್ಥಳೀಯ ಜನತೆ ದೂರಿದ್ದಾರೆ.

ಬಿಹಾರಿನಲ್ಲಿ ಈಗ ಸತತವಾಗಿ ಮಳೆ ಸುರಿಯುತ್ತಿದ್ದು, ನದಿ ನೀರಿನ ಮಟ್ಟ ಏರಿ ಸೇತುವೆ ಮೇಲೆ ಬಂದಾಗ, ಅಷ್ಟೂ ಭಾರ ತಡೆದುಕೊಳ್ಳಲಾಗದ ಸೇತುವೆ ಕುಸಿದಿದೆ. ಈ ಸೇತುವೆ ಕುಸಿತದಿಂದ ಉತ್ತರ ಬಿಹಾರಿನ ನೂರಾರು ಪಟ್ಟಣ, ಗ್ರಾಮಗಳ ನಡುವಿನ ಸಂಪರ್ಕ ತಪ್ಪಿ ಹೋಗಿದೆ.

ಮಾಜಿ ಉಪ ಮುಖ್ಯಮಂತ್ರಿ, ಆರ್.ಎಲ್.ಡಿ ನಾಯಕ ತೇಜಸ್ವಿ ಯಾದವ್, ‘263 ಕೋಟಿ ರೂ. ಖರ್ಚು ಮಾಡಿ, 8 ವರ್ಷ ಕಾಲ ಕಾಮಗಾರಿ ನಡೆಸಿ ನಿರ್ಮಿಸಿದ ಸೇತುವೆ 29 ದಿನದಲ್ಲಿ ನದಿ ಪಾಲಾಗಿದೆ. ಭ್ರಷ್ಟಾಚಾರ್ ಭೀಷ್ಮ ಪಿತಾಮಹ ಸಿಎಂ ನಿತೀಶ್ ಕುಮಾರ್ ಈ ಬಗ್ಗೆ ಒಂದೂ ಮಾತು ಆಡುತ್ತಿಲ್ಲ. ಬಿಹಾರದಲ್ಲಿ ಲೂಟಿ ನಡೆಯುತ್ತಿದೆ’ ಎಂದು ಟೀಕಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಭಾರತೀಯ ಟೆಕ್ಕಿಗಳಿಗೆ ಪೌರತ್ವ: ಮಹತ್ವದ ಆದೇಶಗಳಿಗೆ ಬೈಡನ್ ಸಹಿ

ವಾಷಿಂಗ್ಟನ್: ಅಮೆರಿrಕಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರಿಸಿದ ಬೆನ್ನಲ್ಲೇ 15 ಮಹತ್ವದ ಆದೇಶಗಳಿಗೆ ಬೈಡೆನ್ ಸಹಿ ಮಾಡಿದ್ದಾರೆ.…

ಮಹಾರಾಷ್ಟ್ರದಲ್ಲಿ ಕರ್ಫ್ಯೂ ಜಾರಿ

ಮಹಾರಾಷ್ಟ್ರದಲ್ಲಿ ಕೋವಿಡ್ ಎರಡನೇ ಅಲೆ ಆರಂಭವಾಗಿದ್ದು, ಇದೀಗ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.

ತಾನು ಪ್ರೀತಿಸಿದವನೊಂದಿಗೆ ಮದುವೆ ಆಗುತ್ತೇನೆಂದು ಫ್ಲೆಕ್ಸ್ ಏರಿದ ಅಪ್ರಾಪ್ತ ಬಾಲಕಿ!

ಭೋಪಾಲ್ : ತಾಯಿಯ ಇಚ್ಛೆಗೆ ವಿರುದ್ಧವಾಗಿ ನಾನು ಅದೇ ಹುಡುಗನನ್ನು ವಿವಾಹವಾಗುತ್ತೇನೆ ಎಂದು ಅಪ್ರಾಪ್ತೆ ಫ್ಲೆಕ್ಸ್ ಏರಿರುವ ಘಟನೆ ನಡೆದಿದೆ.

ದೇಶ ಉದ್ಧೇಶಿಸಿ ಮಾತನಾಡಲಿರುವ ಮೋದಿ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶ ಉದ್ದೇಶಿಸಿ ಮಾತನಾಡಲಿದ್ದಾರೆ.