ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ. ಕೊರೊನಾ ಏರುಗತಿಯಲ್ಲಿರುವ ಸಮಯದಲ್ಲಿ ಅವರು ನಡೆಸುತ್ತಿರುವ ಪ್ರತಿಭಟನೆಯಿಂದ ರಾಜ್ಯದಲ್ಲಿ ಕೆಲವು ಸಮಸ್ಯೆಗಳು ಎದುರಾಗಿವೆ.

ಆಶಾ ಕಾರ್ಯಕರ್ತೆಯರ ಪ್ರತಿಭಟನೆಯನ್ನು ಬೆಂಬಲಿಸಿ ಕೆಪಿಸಿಸಿ ಸರಣಿ ಟ್ವೀಟ್ ಮಾಡಿದೆ. “ಆಶಾ ಕಾರ್ಯಕರ್ತೆಯರಿಗೆ ಗೌರವ ಧನವನ್ನು ಹೆಚ್ಚಿಸಲಾರದ ರಾಜ್ಯ ಸರ್ಕಾರವು ಜನರ ಆರೋಗ್ಯ ಸಾಮಗ್ರಿಗಳ ಖರೀದಿಯಲ್ಲಿ ಭ್ರಷ್ಟಾಚಾರ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು #SpeakUpForAshaWorkers ಹ್ಯಾಷ್ ಟ್ಯಾಗ್ ಅಡಿ ಟ್ವೀಟ್ ಮಾಡಿದೆ.

ಆಶಾ ಕಾರ್ಯಕರ್ತೆಯರನ್ನು ಎಗ್ಗಿಲ್ಲದೇ ದುಡಿಸಿಕೊಳ್ಳುತ್ತಿರುವ ರಾಜ್ಯ ಸರ್ಕಾರ ಅವರ ದುಡಿಮೆಗೆ ತಕ್ಕಂತೆ ವೇತನ ನೀಡದೇ ಅವರ ಸೇವೆಯನ್ನು ಅವಮಾನಿಸುತ್ತಿದೆ ಎಂದು ಕೆಪಿಸಿಸಿ ಆರೋಪಿಸಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ, ಹಗಲಿರುಳು ಕೊರೊನಾ ವಾರಿಯರ್ಸ್ ಗಳಾಗಿ ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಕಡೆಗಣಿಸಿರುವುದು ಖಂಡನೀಯ. ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಆರಂಭಿಸಿ ಮೂರು ದಿನ ಕಳೆಯಿತು. ಅವರ ಸಮಸ್ಯೆ ಆಲಿಸಲು ರಾಜ್ಯ ಸರ್ಕಾರಕ್ಕೆ ಏನು ಸಮಸ್ಯೆ? ಎಂದು ಪ್ರಶ್ನಿಸಿದೆ.

ಅಲ್ಲದೆ, ಸರ್ಕಾರ ಘೋಷಿಸಿದ ₹1,600 ಕೋಟಿ ಪ್ಯಾಕೇಜ್ ನ ಹಣ 25% ರಷ್ಟು ಜನರಿಗೂ ತಲುಪಿಲ್ಲ. ಜನರು ಸತ್ತ ಮೇಲೆ ಅವರಿಗೆ ದುಡ್ಡು ಕೊಡುತ್ತೀರಾ? ಎಂದು ಖಾರವಾಗಿ ಪ್ರಶ್ನಿಸಿದೆ.

Leave a Reply

Your email address will not be published. Required fields are marked *

You May Also Like

ಒಂದು ತಿಂಗಳಿನಿಂದ ಕೊರೊನಾ ಚಿಕಿತ್ಸೆ : 6 ಬಾರಿಯ ಟೆಸ್ಟ್ ನಲ್ಲಿಯೂ ವರದಿ ಪಾಸಿಟಿವ್!

ಮಂಗಳೂರು: ಇಲ್ಲೊಬ್ಬ ವ್ಯಕ್ತಿ ಕೊರೊನಾ ಸೋಂಕು ತಗುಲಿ ತಿಂಗಳಾದರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಬರೋಬ್ಬರಿ…

ಇಟಲಿ ದಾಟಿ ಮುಂದೆ ಹೋದ ಭಾರತ!!

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ…

6 ರಿಂದ 8ನೇ ತರಗತಿ ಶಾಲಾರಂಭದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ ನೋಡಿ

ಕೋವಿಡ್ ನಂತರ ರಾಜ್ಯದಲ್ಲಿ ಫೆ.22 ರಿಂದ 6 ರಿಂದ 8ನೇ ತರಗತಿಯ ಪೂರ್ಣಾವಧಿ ಶಾಲೆ ಪ್ರಾರಂಭ ಮತ್ತು ವಿದ್ಯಾಗಮ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಮುಳಗುಂದ ಅಬ್ಬಿ ಕೆರೆಗೆ ಜಿಲ್ಲಾಧಿಕಾರಿ ಭೇಟಿ: ಸಾರ್ವಜನಿಕರ ಸಯೋಗದಲ್ಲಿ ಕೆರೆ ಅಭಿವೃದ್ದಿಗೆ ಸಲಹೆ.

ಪಟ್ಟಣಕ್ಕೆ ಶನಿವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ಮಳೆಯಿಂದ ಭರ್ತಿಯಾಗಿರುವ ಅಬ್ಬಿ ಕೆರೆ ವೀಕ್ಷಣೆ ಮಾಡಿದರು. ನಂತರ ಸ್ಥಳಿಯ ಮುಖಂಡರೊಂದಿಗೆ ಚರ್ಚಿಸಿದ ಅವರು ಜಿಲ್ಲೆಯಲ್ಲಿ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಕೆರೆಗಳನ್ನು ಜನಪ್ರತಿನಿಧಿಗಳು, ಸಾರ್ವಜನಿಕರು ಕೆರೆ ಅಭಿವೃದ್ದಿ ಸಮಿತಿ ರಚಿಸಿಕೊಂಡು ಕೆರೆಗಳ ಅಭಿವೃದ್ದಿಗೆ ಮುಂದಾಗಬೇಕು. ಕೆರೆಗಳ ಸಂರಕ್ಷಣೆಯಿಂದ ಅಂತರ್ಜಲ ವೃದ್ದಿಸುವುದರ ಜತೆಗೆ ರೈತರಿಗೂ ನೀರಿನ ಬವಣೆ ನೀಗಲಿದೆ. ಈಗಾಗಲೇ ಮಳೆಯಿಂದ ಕೆರೆಗಳು ಭರ್ತಿಯಾಗಿದ್ದು ಕೆರೆ ದಡದಲ್ಲಿ ಅರಣ್ಯ ಇಲಾಖೆಯ ಸಹಯೋಗದಲ್ಲಿ ಸಸಿ ನೆಡಬೇಕು ಎಂದು ಸಲಹೆ ನೀಡಿದರು.