ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ. ಕೊರೊನಾ ಏರುಗತಿಯಲ್ಲಿರುವ ಸಮಯದಲ್ಲಿ ಅವರು ನಡೆಸುತ್ತಿರುವ ಪ್ರತಿಭಟನೆಯಿಂದ ರಾಜ್ಯದಲ್ಲಿ ಕೆಲವು ಸಮಸ್ಯೆಗಳು ಎದುರಾಗಿವೆ.

ಆಶಾ ಕಾರ್ಯಕರ್ತೆಯರ ಪ್ರತಿಭಟನೆಯನ್ನು ಬೆಂಬಲಿಸಿ ಕೆಪಿಸಿಸಿ ಸರಣಿ ಟ್ವೀಟ್ ಮಾಡಿದೆ. “ಆಶಾ ಕಾರ್ಯಕರ್ತೆಯರಿಗೆ ಗೌರವ ಧನವನ್ನು ಹೆಚ್ಚಿಸಲಾರದ ರಾಜ್ಯ ಸರ್ಕಾರವು ಜನರ ಆರೋಗ್ಯ ಸಾಮಗ್ರಿಗಳ ಖರೀದಿಯಲ್ಲಿ ಭ್ರಷ್ಟಾಚಾರ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು #SpeakUpForAshaWorkers ಹ್ಯಾಷ್ ಟ್ಯಾಗ್ ಅಡಿ ಟ್ವೀಟ್ ಮಾಡಿದೆ.

ಆಶಾ ಕಾರ್ಯಕರ್ತೆಯರನ್ನು ಎಗ್ಗಿಲ್ಲದೇ ದುಡಿಸಿಕೊಳ್ಳುತ್ತಿರುವ ರಾಜ್ಯ ಸರ್ಕಾರ ಅವರ ದುಡಿಮೆಗೆ ತಕ್ಕಂತೆ ವೇತನ ನೀಡದೇ ಅವರ ಸೇವೆಯನ್ನು ಅವಮಾನಿಸುತ್ತಿದೆ ಎಂದು ಕೆಪಿಸಿಸಿ ಆರೋಪಿಸಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ, ಹಗಲಿರುಳು ಕೊರೊನಾ ವಾರಿಯರ್ಸ್ ಗಳಾಗಿ ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಕಡೆಗಣಿಸಿರುವುದು ಖಂಡನೀಯ. ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಆರಂಭಿಸಿ ಮೂರು ದಿನ ಕಳೆಯಿತು. ಅವರ ಸಮಸ್ಯೆ ಆಲಿಸಲು ರಾಜ್ಯ ಸರ್ಕಾರಕ್ಕೆ ಏನು ಸಮಸ್ಯೆ? ಎಂದು ಪ್ರಶ್ನಿಸಿದೆ.

ಅಲ್ಲದೆ, ಸರ್ಕಾರ ಘೋಷಿಸಿದ ₹1,600 ಕೋಟಿ ಪ್ಯಾಕೇಜ್ ನ ಹಣ 25% ರಷ್ಟು ಜನರಿಗೂ ತಲುಪಿಲ್ಲ. ಜನರು ಸತ್ತ ಮೇಲೆ ಅವರಿಗೆ ದುಡ್ಡು ಕೊಡುತ್ತೀರಾ? ಎಂದು ಖಾರವಾಗಿ ಪ್ರಶ್ನಿಸಿದೆ.

Leave a Reply

Your email address will not be published. Required fields are marked *

You May Also Like

ಹೊಳೆಆಲೂರ: ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಹೊಳೆಆಲೂರ ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಅಕ್ಟೋಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 05 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.

ಗ್ರಾಪಂ ಚುನಾವಣೆ ನಾಳೆ ಚಿಹ್ನೆ ಹಂಚಿಕೆ : ಅಭ್ಯರ್ಥಿಗಳಿಗೆ ಚಿನ್ಹೆ ಹಂಚಿಕೆ ಕ್ರಮ ಹೇಗಿರುತ್ತೆ ಇಲ್ಲಿದೆ ಮಾಹಿತಿ

ಗ್ರಾಮ ಪಂಚಾಯತ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಉಮೇದುವಾರಿಕೆ ಹಿಂಪಡೆಯಲು ನೀಡಿದ ಸಮಯಾವಕಾಶ ಮುಗಿದ ನಂತರ ಸ್ಪರ್ಧೆ ಇರುವ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳಿಗೆ ಅವರ ಸಮ್ಮುಖದಲ್ಲಿ ಚುನಾವನಾ ಆಯೋಗದ ನಿಯಮಾನುಸಾರ ಡಿ.14 ರಂದು ಚುನಾವಣಾಧಿಕಾರಿಗಳು ಚುನಾವಣಾ ಚಿಹ್ನೆಗಳನ್ನು ಹಂಚಿಕೆ ಮಾಡುತ್ತಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ ಸುಂದರೇಶ್ ಬಾಬು ತಿಳಿಸಿದ್ದಾರೆ.

ರಂಗಭೂಮಿ ಕ್ಷೇತ್ರ: ಗದಗಿನ ಸಾವಿತ್ರಿ ಗೌಡರ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ

ಉತ್ತರಪ್ರಭ ಸುದ್ದಿಬೆಂಗಳೂರು: ಕರ್ನಾಟಕ ಸರ್ಕಾರ 2021ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. 66…

ಪ್ರಜಾ ಪ್ರಭುತ್ವ ಭದ್ರ ತಳಹದಿ ಡಾ ಬಿ ಆರ್ ಅಂಬೇಡ್ಕರವರು ರಚಿಸಿದ ಸಂವಿಧಾನ : ಸಂತೋಷ ಪಾಟೀಲ.

ಉತ್ತರ ಪ್ರಭ ಸುದ್ದಿರೋಣ : ತಾಲೂಕಾ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತದವತಿಯಿಂದ 73 ನೇ ಗಣರಾಜ್ಯೋತ್ಸವದ…