ಸ್ಪೀಕರ್ ಕಳಿಸಿದ್ದ ಅನರ್ಹತೆ ಕುರಿತಾದ ನೋಟಿಸ್ ನಿಂದ ಆತಂಕಕ್ಕೆ ಬಿದ್ದಿದ್ದ ಸಚಿನ್ ಪೈಲಟ್ ಬಣದ 19 ಶಾಸಕರಿಗೆ ಹೈಕೋರ್ಟಿನಿಂದ ಕೊಂಚ ರಿಲೀಫ್ ಸಿಕ್ಕಂತಾಗಿದೆ.

ಜೈಪುರ: ಸ್ಪೀಕರ್ ನೋಟಿಸ್ ಮತ್ತು ಪಕ್ಷಾಂತರ ನಿಷೇಧ ಕಾಯಿದೆಯನ್ನು ಪ್ರಶ್ನಿಸಿ ದಾವೆ ಸಲ್ಲಿಸಲು ತಮಗೆ ಸಮಯಾವಕಾಶ ನೀಡಿ ಎಂದು ಸಚಿನ್ ಪೈಲಟ್ ಬಣದ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ ನಡೆಸಿದ ರಾಜಸ್ತಾನ ಹೈಕೋರ್ಟ್, ಹೊಸ ದಾವೆ ಸಲ್ಲಿಸಲು ಕಾಲಾವಕಾಶ ನೀಡಿದೆ.

ಇದರಿಂದ ಸದ್ಯಕ್ಕೆ ಅನರ್ಹತೆಯ ದೊಣ್ಣೆಯಿಂದ ಪೈಲಟ್ ಬಣದ ಶಾಸಕರು ತಪ್ಪಿಸಿಕೊಂಡಿದ್ದಾರೆ.

ಶಾಸಕರ ಅನರ್ಹತೆ ಕುರಿತಂತೆ ನೋಟಿಸ್ ಹೊರಡಿಸಿದ್ದ ಸ್ಪೀಕರ್, ನೋಟಿಸ್ಗೆ ಕೂಡಲೇ ಉತ್ತರಿಸುವಂತೆ 19 ಶಾಸಕರಿಗೆ ಸೂಚಿಸಿದ್ದರು. ನೋಟಿಸ್ಗಳನ್ನು ಶಾಸಕರ ಮನೆಯ ಗೋಡೆಗಳಿಗೆ ಅಂಟಿಸಲಾಗಿತ್ತು.

ಸ್ಪೀಕರ್ ಕ್ರಮ ಪ್ರಶ್ನಿಸಿ ದಾವೆ ಸಲ್ಲಿಸಲು ಸಮಯಾವಕಾಶ ನೀಡಿ ಎಂದು ಪೈಲಟ್ ಬಣದ ಶಾಸಕರು ಮುಂಜಾನೆ ಹೈಕೋರ್ಟ್ ಮೊರೆ ಹೋಗಿದ್ದರು.

Leave a Reply

Your email address will not be published. Required fields are marked *

You May Also Like

ಗದಗ-ಬೆಟಗೇರಿ ನಗರಸಭೆ ಚುನಾವಣೆ: ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ

ಉತ್ತರಪ್ರಭಗದಗ: ಗದಗ-ಬೆಟಗೇರಿ ನಗರಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ 35 ವಾರ್ಡಗಳ ಪೈಕಿ 26 ವಾರ್ಡಗಳಿಗೆ  ಅಭ್ಯರ್ಥಿಗಳ…

ಹಿರಿಯ ಸಾಹಿತಿ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ನಿಧನ

ಬೆಂಗಳೂರ: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ)…

ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಕೇಂದ್ರ ಸರ್ಕಾರದ ಅನುಮತಿ : ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಪ್ಲಾಸ್ಮಾಥೆರಪಿ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ಕೇಂದ್ರ…

ಕೊರೊನಾ ತಂದ ಸಂಕಷ್ಟ – ಉದ್ಯೋಗಸ್ಥರಲ್ಲಿ ಮನೆ ಮಾಡುತ್ತಿದೆ ಒತ್ತಡ!

ನವದೆಹಲಿ : ಕೊರೊನಾ ಹಾವಳಿಯಿಂದ ಇಡೀ ಜಗತ್ತೇ ಇಂದು ಆತಂಕದಲ್ಲಿ ಕಾಲ ಕಳೆಯುತ್ತಿದೆ. ಇದು ಉದ್ಯೋಗದ ಮೇಲೆಯೂ ಪರಿಣಾಮ ಬೀರಿದೆ. ಇದರಿಂದಾಗಿ ಉದ್ಯೋಗಿಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ಅಧ್ಯಯನವೊಂದು ತಿಳಿಸಿದೆ.