ಸ್ಪೀಕರ್ ಕಳಿಸಿದ್ದ ಅನರ್ಹತೆ ಕುರಿತಾದ ನೋಟಿಸ್ ನಿಂದ ಆತಂಕಕ್ಕೆ ಬಿದ್ದಿದ್ದ ಸಚಿನ್ ಪೈಲಟ್ ಬಣದ 19 ಶಾಸಕರಿಗೆ ಹೈಕೋರ್ಟಿನಿಂದ ಕೊಂಚ ರಿಲೀಫ್ ಸಿಕ್ಕಂತಾಗಿದೆ.

ಜೈಪುರ: ಸ್ಪೀಕರ್ ನೋಟಿಸ್ ಮತ್ತು ಪಕ್ಷಾಂತರ ನಿಷೇಧ ಕಾಯಿದೆಯನ್ನು ಪ್ರಶ್ನಿಸಿ ದಾವೆ ಸಲ್ಲಿಸಲು ತಮಗೆ ಸಮಯಾವಕಾಶ ನೀಡಿ ಎಂದು ಸಚಿನ್ ಪೈಲಟ್ ಬಣದ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ ನಡೆಸಿದ ರಾಜಸ್ತಾನ ಹೈಕೋರ್ಟ್, ಹೊಸ ದಾವೆ ಸಲ್ಲಿಸಲು ಕಾಲಾವಕಾಶ ನೀಡಿದೆ.

ಇದರಿಂದ ಸದ್ಯಕ್ಕೆ ಅನರ್ಹತೆಯ ದೊಣ್ಣೆಯಿಂದ ಪೈಲಟ್ ಬಣದ ಶಾಸಕರು ತಪ್ಪಿಸಿಕೊಂಡಿದ್ದಾರೆ.

ಶಾಸಕರ ಅನರ್ಹತೆ ಕುರಿತಂತೆ ನೋಟಿಸ್ ಹೊರಡಿಸಿದ್ದ ಸ್ಪೀಕರ್, ನೋಟಿಸ್ಗೆ ಕೂಡಲೇ ಉತ್ತರಿಸುವಂತೆ 19 ಶಾಸಕರಿಗೆ ಸೂಚಿಸಿದ್ದರು. ನೋಟಿಸ್ಗಳನ್ನು ಶಾಸಕರ ಮನೆಯ ಗೋಡೆಗಳಿಗೆ ಅಂಟಿಸಲಾಗಿತ್ತು.

ಸ್ಪೀಕರ್ ಕ್ರಮ ಪ್ರಶ್ನಿಸಿ ದಾವೆ ಸಲ್ಲಿಸಲು ಸಮಯಾವಕಾಶ ನೀಡಿ ಎಂದು ಪೈಲಟ್ ಬಣದ ಶಾಸಕರು ಮುಂಜಾನೆ ಹೈಕೋರ್ಟ್ ಮೊರೆ ಹೋಗಿದ್ದರು.

Leave a Reply

Your email address will not be published. Required fields are marked *

You May Also Like

ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಬಂದಿಲ್ಲ!

ಬೆಂಗಳೂರು : ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಬಂದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ…

ನಟ ಸಲ್ಮಾನ್ ಖಾನ್ ಈ ರೀತಿ ಮಾಡಿದ್ದು ಸತ್ಯವೇ? ಸರಿಯೇ?

ಮುಂಬಯಿ : ಕೊರೊನಾದ ಅಬ್ಬರದ ನಡುವೆ ಬಾಲಿವುಡ್ ನ ಒಂದೊಂದೆ ಮುಖಗಳು ಅನಾವರಣಕ್ಕೆ ಬರುತ್ತಿವೆ. ಯುವ ನಟ ಸುಶಾಂತ್‌ ಸಿಂಗ್‌ ರಜಪೂತ್‌ ನಿಧನದ ನಂತರ ಅನೇಕ ಸತ್ಯಗಳು ಹೊರ ಬರುತ್ತಿವೆ. ಪಕ್ಷಪಾತ, ಗುಂಪುಗಾರಿಕೆ, ಕೀಳು ರಾಜಕೀಯದ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

ನೀಟ್ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಇಲ್ಲ ಸ್ಥಾನ!

ನವದೆಹಲಿ : ವೈದ್ಯಕೀಯ ಪ್ರವೇಶ ಪರೀಕ್ಷೆ, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ನೀಟ್‌ ನಲ್ಲಿ 720ಕ್ಕೆ 720 ಅಂಕಗಳನ್ನು ಗಳಿಸಿದ ಒಡಿಶಾದ ಸೋಯೆಬ್ ಅಫ್ತಾಬ್ ಅವರೊಂದಿಗೆ ದೆಹಲಿಯ ಆಕಾಂಕ್ಷ ಸಿಂಗ್ ಸಹ ಅಷ್ಟೇ ಅಂಕ ಗಳಿಸಿದ್ದರೂ ಟಾಪರ್ ಸ್ಥಾನದಿಂದ ಹಿಂದೆ ಸರಿದಿದ್ದಾರೆ.

ಸಿದ್ದರಾಮಯ್ಯ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲಾಗಿದೆ: ಮಾಜಿ ಸಿಎಂ ಎಚ್ಡಿಕೆ

ಸಿದ್ದರಾಮಯ್ಯ ಊಸುರವಳ್ಳಿ ಇದ್ದಂತೆ. ಅಧಿಕಾರದ ಲಾಲಸೆಯಿಂದಲೇ ಅವರು ಕಾಂಗ್ರೆಸ್ ಗೆ ಜಿಗಿದಿದ್ದಾರೆ. ಜೆಡಿಎಸ್ ಅವಕಾಶವಾದಿ ಪಕ್ಷ ಎಂದು ಹೇಳುವ ಮೂಲಕ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.