ಕೋರೊನಾ ಬಿಕ್ಕಟ್ಟಿನ ಕಾರಣಕ್ಕೆ ಕ್ರಿಕೆಟ್ ಮಲಗಿದೆ. ತಿಂಗಳುಗಳ ನಂತರ ಇಂದು ಬಿಸಿಸಿಐ ಮಹತ್ವದ ಸಭೆ ನಡೆಸುತ್ತಿದ್ದು, ದೇಶದಲ್ಲಿ ಮತ್ತೆ ಕ್ರಿಕೆಟ್ ಜ್ವರ ಶುರುವಾಗಬಹುದೇ ಎಂದು ಕಾಯಲಾಗುತ್ತಿದೆ.

ಮುಂಬೈ: ಇಂದು ಶುಕ್ರವಾರ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಸಭೆ ನಡೆಸುತ್ತಿದ್ದು ಕ್ರಿಕೆಟ್ ಮರು ಆರಂಭ ಸೇರಿದಂತೆ 11 ವಿಷಯಗಳ ಮೇಲೆ ಚರ್ಚೆ ನಡೆಯಲಿದ್ದು, ಬಹು ನಿರೀಕ್ಷಿತ ಐಪಿಎಲ್ ಮತ್ತೆ ಜೀವ ಪಡೆಯಬಹುದೇ ಎಂದು ಕ್ರಿಕೆಟ್ ಪ್ರಿಯರು ಕಾಯುತ್ತಿದ್ದಾರೆ.

ಬೋರ್ಡ್ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಮತ್ತು ಇತರ 7 ಅಧಿಕಾರಿಗಳಿರುವ ಇರುವ ಅಪೆಕ್ಸ್ ಕೌನ್ಸಿಲ್ ಇಂದು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದೆ.

ಇಂದಿನ ಸಭೆಯ ಅಜೆಂಡಾ ಹೀಗಿದೆ:

· 2020ರ ಐಪಿಎಲ್ ಲೀಗ್

· ರಣಜಿ ಮುಂತಾದ ದೇಶೀಯ ಕ್ರಿಕೆಟ್ ಆಯೋಜನೆ

· ಭಾರತ ತಂಡದ ಇಂಗ್ಲೆಂಡ್ ಪ್ರವಾಸ

· ಟಿ-20 ವಿಶ್ವಕಪ್ ಟೂರ್ನಾಮೆಂಟಿಗೆ ಸರ್ಕಾರದಿಂದ ತೆರಿಗೆ ವಿನಾಯಿತಿ.

ಸದ್ಯಕ್ಕೆ ಕ್ರಿಕೆಟ್ ಪ್ರಿಯರ ಚಿತ್ತ ಮಾತ್ರ ಐಪಿಎಲ್ ಲೀಗ್ ಕಡೆ ಇರುವುದರಿಂದ ಈ ಸಭೆಗೆ ಮಹತ್ವ ಬಂದಿದೆ. ಈಗ ಇಂಗ್ಲೆಂಡಿನಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವೆ ಕೋರೋನಾ ನಿಯಮಗಳನ್ನು ಪಾಲಿಸಿ ಮೊದಲ ಟೆಸ್ಟ ಅನ್ನು ಯಶಸ್ವಿಯಾಗಿ ಮುಗಿಸಿದ್ದು, 2ನೆ ಟೆಸ್ಟ್ ಕೂಡ ಆರಂಭವಾಗಿದೆ. ಹೀಗಾಗಿ ದೇಶದಲ್ಲೂ ಕೋರೊನಾ ನಿಯಂತ್ರಣ ನಿಯಮ ಪಾಲಿಸಿ ಕ್ರಿಕೆಟ್ ಮರು ಆರಂಭ ಮಾಡಬಹುದು ಎನ್ನುವ ಮಾತುಗಳಿವೆ.

Leave a Reply

Your email address will not be published. Required fields are marked *

You May Also Like

ಕಳ್ಳರ ಕಣ್ಣು ಈಗ ಆಡಿನ ಮ್ಯಾಲೆ…!!! ಸ್ಕಾಪಿ೯ಯೋದಲ್ಲಿ ಬಂದು ಆಡು ಕದ್ದ ಖದೀಮರು ?

ನಿಡಗುಂದಿ: ಕಳ್ಳತನದ ಹಾವಳಿ ಹಾಡುಹಗಲೇ ಶುರುವಾಗಿವೆ. ಜಿಲ್ಲೆಯಲ್ಲಿಗ ಮಕ್ಕಳ ಕಳ್ಳತನದ ಗುಲ್ಲು ಒಂದಡೆ ಆತಂಕ ಸೃಷ್ಟಿಸಿದರೆ…

ಕ್ರಿಕೆಟ್ ನಲ್ಲಿ ಧೋನಿ ಸ್ಥಾನದಲ್ಲಿ ಧೋನಿ ಮಾತ್ರ ಇದ್ದಾರೆ…ಬೇರೆ ಯಾರೂ ಇಲ್ಲ ಎಂದ ರಾಹುಲ್!

ನಾಲ್ಕು ಬಾರಿ ಚಾಂಪಿಯನ್ ಆಗಿರುವ ಮುಂಬಯಿ ಇಂಡಿಯನ್ಸ್ ತಂಡದ ವಿರುದ್ಧ ಎರಡು ಸೂಪರ್ ಓವರ್ ಆಡಿ ಭರ್ಜರಿಯಾಗಿ ಗೆದ್ದು ಬೀಗಿರುವ ಖುಷಿಯಲ್ಲಿರುವ ಪ್ರೀತಿಯ ಹುಡುಗರು, ಈಗ ಆತ್ಮವಿಶ್ವಾಸದಲ್ಲಿದ್ದಾರೆ.

ಸಾಲು ಮರದ ತಿಮ್ಮಕ್ಕನನ್ನು ನೆನೆದ ಬಜ್ಜಿ

ಭಾರತ ಕ್ರಿಕೆಟ್ ತಂಡದ ಆಟಗಾರ ಹರ್ಭಜನ್ ಸಿಂಗ್, ರಾಜ್ಯದ ಹೆಮ್ಮೆಯ ತಾಯಿಯನ್ನು ನೆನೆದು ಟ್ವೀಟ್ ಮಾಡಿದ್ದಾರೆ.ಸಾಲುಮರದ ತಿಮ್ಮಕ್ಕ ಅವರನ್ನು ಭಜ್ಜಿ ನೆನೆದು ಟ್ವೀಟ್ ಮಾಡಿದ್ದಾರೆ.

ಭರ್ಜರಿ ಫಾರ್ಮ್ ಗೆ ಮರಳಿದ ತಂಡದ ಸ್ಟಾರ್ ಆಟಗಾರರಿಗೆ ಗಿಫ್ಟ್ ನೀಡಿದ ಪ್ರೀತಿ ಜಿಂಟಾ!

ದುಬೈ : ಪ್ರಾರಂಭದಲ್ಲಿ ಸೋಲಿನಿಂದ ಕಂಗೆಟ್ಟಿದ್ದ ಪಂಜಾಬ್ ತಂಡ ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಭರ್ಜರಿ ಫಾರ್ಮ್ ಗೆ ಮರಳಿದೆ. ಅಲ್ಲದೇ, ಕಳೆದ ಮೂರು ಪಂದ್ಯಗಳನ್ನು ಗೆದ್ದು ಬೀಗಿದೆ. ಹೀಗಾಗಿ ತಂಡದ ಮಾಲಕರಾದ ಪ್ರೀತಿ ಜಿಂಟಾ ಅವರು ತಂಡದ ನಾಯಕ ಹಾಗೂ ಗೇಲ್ ಗೆ ಉಡುಗೊರೆ ನೀಡಿದ್ದಾರೆ.