ವಿಶ್ವದ ಜನಸಂಖ್ಯೆಯಲ್ಲಿ ಆರನೆ ಒಂದರಷ್ಟನ್ನು ಭಾರತ ಹೊಂದಿದೆ. ನಮ್ಮ ಜವಾಬ್ದಾರಿಯ ಅರಿವು ನಮಗಿದೆ ಎಂದು ಪದ್ರಧಾನಿ ಮೋದಿ ಹೇಳಿದರು.

ನವದೆಹಲಿ: ‘ಭೂಕಂಪವಿರಲಿ, ಚಂಡಮಾರುತವಿರಲಿ ಅಥವಾ ಎಬೋಲಾ ಬಿಕ್ಕಟ್ಟಿರಲಿ, ಭಾರತವು ವೇಗವಾಗಿ ಸ್ಪಂದಿಸಿದೆ. ಕೋವಿಡ್ ಬಿಕ್ಕಟ್ಟಿನ ಈ ಸಂದರ್ಭದಲ್ಲಿ 150 ದೇಶಗಳಿಗೆ ನೆರವಾಗಿದೆ’ ಎಂದು ಪ್ರಧಾನಿ ಮೋದಿ ಹೇಳಿದರು.

ಅವರು ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಕೌನ್ಸಿಲ್ ಸಭೆಯನ್ನು ಉದ್ದೇಶಿಸಿ ವಿಡಿಯೋ ಸಂವಾದದ ಮೂಲಕ ಶುಕ್ರವಾರ ರಾತ್ರಿ 8.30ಕ್ಕೆ ಭಾಷಣ ಮಾಡಿದರು.
ವಿಶ್ವಸಂಸ್ಥೆಯು ಎರಡನೆ ಮಹಾಯುದ್ಧದ ನಂತರದ ಸಂಕಷ್ಟದಲ್ಲಿ ಹುಟ್ಟಿಕೊಂಡಿತು. ಈಗ ಕೋವಿಡ್ ಬಿಕ್ಕಟ್ಟಿದೆ. ಇದು ವಿಶ್ವಸಂಸ್ಥೆಯ ಮರುಹುಟ್ಟು ಮತ್ತು ಸುಧಾರಣೆಗೆ ಹಾದಿಯಾಗಬೇಕು. ಈ ಅವಕಾಶವನ್ನು ನಾವು ತಪ್ಪಿಸಿಕೊಳ್ಳಬಾರದು’ ಎಂದು ಅವರು ಹೇಳಿದರು.

‘ವಿಶ್ವದ ಜನಸಂಖ್ಯೆಯಲ್ಲಿ ಭಾರತವು 1/6 ಪ್ರಮಾಣ ಹೊಂದಿದೆ. ನಮ್ಮ ಜವಾಬ್ದಾರಿಯ ಅರಿವು ನಮಗಿದೆ. ಭಾರತ ತನ್ನ ಅಭಿವೃದ್ಧಿಯ ಗುರಿಗಳಲ್ಲಿ ಯಶಸ್ವಿಯಾದರೆ ಅದು ಜಾಗತಿಕ ಅಭಿವೃದ್ಧಿಗೂ ಕಾರಣವಾಗುತ್ತದೆ’ ಎಂದು ಪ್ರಧಾನಿ ತಿಳಿಸಿದರು.

ವಿಶ್ವಸಂಸ್ಥೆಯ ಸ್ಥಾಪನೆಯಲ್ಲಿ ಭಾರತ ಪ್ರಮುಖ ಪಾತ್ರ ವಹಿಸಿತ್ತು. ಹಾಗೆಯೇ ವಿಶ್ವಸಂಸ್ಥೆಯಾರ್ಥಿಕ ಮತ್ತು ಸಾಮಾಜಿಕ ಕೌನ್ಸಿಲ್ ಬೆಳವಣಿಗೆಯಲ್ಲೂ ಭಾರತದ ಪಾತ್ರವಿತ್ತು. ಈ ಕೌನ್ಸಿಲ್ ನ ಪ್ರಥಮ ಅಧ್ಯಕ್ಷರು ಭಾರತೀಯನೇ ಆಗಿದ್ದರು ಎಂದು ಪ್ರಧಾನಿ ಸ್ಮರಿಸಿದರು.

Leave a Reply

Your email address will not be published. Required fields are marked *

You May Also Like

ರೈತರ ಮೇಲೆ ಕಾನೂನು ಕ್ರಮದ ಬೆದರಿಕೆಗೆ ಕುಮಾರಸ್ವಾಮಿ ವಿರೋಧ

ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಶಾಶ್ವತ ಚಿರನಿದ್ರೆಗೆ ಜಾರಿದ ಚಿರು..!

ತಮಿಳುನಾಡು ಅಂದ ತಕ್ಷಣವೇ ಕಾವೇರಿ ನದಿ ವಹಿವಾಟೆ ನಮ್ಮ ಕಣ್ಣೆದುರು ಬರುತ್ತದೆ. ಕಾವೇರಿ ಸಮಸ್ಯೆ ತೀವ್ರ ಇದ್ದ 1980ರ ದಶಕದಲ್ಲಿ ಈ ಹುಡುಗ ಹುಟ್ಟುತ್ತಾನೆ. ಬೆಂಗಳೂರಿನಲ್ಲೆ ಬೆಳೆಯುವ ಈ ಹುಡುಗನ ಸಿನಿಮಾ ಹುಚ್ಚಿಗೆ ಅವರ ಮಾವ ನೀರು ಎರೆಯುತ್ತಾರೆ.

ಚೀನಾ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳದ ಹೊರತು ಭಾರತ ಜಗ್ಗುವುದಿಲ್ಲ..

ಲಡಾಖ್‌ನಲ್ಲಿ ಉಭಯ ರಾಷ್ಟ್ರಗಳ ನಡುವೆ ಗಡಿ ಸಮಸ್ಯೆ ಸೃಷ್ಟಿಯಾದ ಬಳಿಕ ಸೇನೆ ನಿಯೋಜಿಸಲಾಗಿದ್ದು, ಇದೀಗ ಗಡಿಯಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ತಮ್ಮ ಸೇನೆಯನ್ನು ವಾಪಸ್ ಕರೆಸಿಕೊಳ್ಳದ ಹೊರತು ಭಾರತ ಸೇನಾಪಡೆಯನ್ನು ಹಿಂದಕ್ಕೆ ಕರೆಯಿಸಿಕೊಳ್ಳುವುದಿಲ್ಲ ಎಂದು ಸೇನೆ ತಿಳಿಸಿದೆ.

ಕೇರಳದಲ್ಲಿ ಕೊರೊನಾ ಪ್ರಮಾಣ ಇಳಿಕೆ: ಪಿಣರಾಯಿ ವಿಜಯನ್

ಇಂದು ಕೇರಳದಲ್ಲಿ ಹೊಸದಾಗಿ ಕೊರೊನಾದ 40 ಪ್ರಕರಣಗಳು ದಾಖಲಾಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದರು.