ಬರುವ  ಮಂಗಳವಾರ ಸಾಯಂಕಾಲ 5.30ರವರೆಗೂ ಅರ್ಜಿದಾರರ (ಸಚಿನ್ ಪೈಲಟ್ ಬಣದ ಶಾಸಕರು) ಮೇಲೆ ಯಾವುದೇ ಕ್ರಮ ಕೈಗೊಳ್ಳದಂತೆ ರಾಜಸ್ತಾನ ಹೈಕೋರ್ಟ್ ವಿಭಾಗೀಯ ಪೀಠ ವಿಧಾನಸಭೆಯ ಸ್ಪೀಕರ್ ಗೆ ಸೂಚಿಸಿದೆ.

ತಮಗೆ ರಾಜಸ್ತಾನ ವಿಧಾನಸಭೆಯ ಸ್ಪೀಕರ್ ನೀಡಿದ ಅನರ್ಹತೆ ನೋಟಿಸ್ ಪ್ರಶ್ನಿಸಿ ಸಚಿನ್ ಪೈಲಟ್ ಬಣದ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಮಧ್ಯಾಹ್ನ ನಡೆಸಿದ ರಾಜಸ್ತಾನ ಹೈಕೋರ್ಟಿನ ವಿಭಾಗೀಯ ಪೀಠ, ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಸ್ಪೀಕರ್ ಮಂಗಳವಾರ ಸಾಯಂಕಾಲ 5.30 ರವೆರೆಗೂ ಯಾವುದೇ ನಿರ್ಣಯ ತೆಗೆದುಕೊಳ್ಳಬಾರದು ಎಂದು ಸೂಚಿಸಿದ್ದು, ಈ ಅರ್ಜಿಯ ವಿಚಾರಣೆಯನ್ನು ಸೋಮವಾರ 10ಕ್ಕೆ ಮತ್ತೆ ಕೈಗೆತ್ತಿ ಕೊಳ್ಳುವುದಾಗಿ ತಿಳಿಸಿದೆ.

ಸಚಿನ್ ಪೈಲಟ್ ಬಣದ ಶಾಸಕರು ಶಾಸಕಾಂಗ ಪಕ್ಷದ ಎರಡು ಸಭೆಗಳಿಗೆ ಗೈರಾದ ನಂತರ ಅನರ್ಹತೆಯ ನೋಟಿಸ್  ಹೊರಡಿಸಲಾಗಿತ್ತು. ಪೈಲಟ್ ಬಣದ ಇಬ್ಬರು ಶಾಸಕರು ಬಿಜೆಪಿಯೊಂದಿಗೆ ಸೇರಿ ಸರ್ಕಾರ ಉರುಳಿಸುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆಂದು ಅವರನ್ನು ಕಾಂಗ್ರೆಸ್ ಪಕ್ಷದಿಂದ ಶುಕ್ರವಾರ ಉಚ್ಛಾಟಿಸಲಾಗಿದೆ.

ಕೇಂದ್ರ ಸಚಿವರೊಬ್ಬರು ಕಾಂಗ್ರೆಸ್ ಎಂಎಲ್ಎಗಳಿಗೆ ಹಣದ ಆಮಿಷ ಒಡ್ಡಿದರು ಎನ್ನಲಾದ ಆಡಿಯೋ ಒಂದು ವೈರಲ್ ಆಗಿದ್ದು. ಈ ಕುರಿತು  ಎಫ್.ಐ.ಆರ್ ಕೂಡ ದಾಖಲಾಗಿದೆ.

ಒಟ್ಟಿನಲ್ಲಿ ಶಾಸಕರ ಖರೀದಿ, ರೆಸಾರ್ಟು, ಕೋರ್ಟು, ಪೊಲೀಸ್ ಸ್ಟೇಶನ್- ಇತ್ಯಾದಿ ಸಂಕೀರ್ಣತೆಯಲ್ಲಿ ರಾಜಸ್ತಾನ ರಾಜಕೀಯ ಈಗ ರಾಡಿಯೆದ್ದಿದೆ. ರಾಡಿಯಲ್ಲಿಯೇ ಮಿಂದು ಗೆಲ್ಲುವವರಾರು?

Leave a Reply

Your email address will not be published. Required fields are marked *

You May Also Like

ನಿಮ್ಮ ಜಿಲ್ಲೆ ಯಾವ ಝೋನ್ ನಲ್ಲಿದೆ ಅಂತ ತಿಳಿದುಕೊಳ್ಳಿ

ಮೇ.3ರ ನಂತರ ರಾಜ್ಯದ 6 ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳನ್ನು ಗ್ರೀನ್ ಹಾಗೂ ಯಲ್ಲೋ ಝೋನ್ ಗಳಾಗಿ ವಿಂಗಡಿಸಲಾಗಿದೆ. ರೆಡ್ ಮತ್ತು ಯಲ್ಲೋ ಝೋನ್ ಗಳಲ್ಲಿ ಮೇ.3ರ ನಂತರ ಲಾಕ್ ಡೌನ್ ಸ್ವಲ್ಪ ಸಡಿಲಗೊಳ್ಳುವ ಸಾದ್ಯತೆ ಇದೆ. ಯಾವ ಜಿಲ್ಲೆ ಯಾವ ಝೋನ್ ನಲ್ಲಿದೆ ಎನ್ನುವ ಮಾಹಿತಿ ಇಲ್ಲಿದೆ..

ಕೋವಿಡ್ ಜ್ವರದಿಂದ ಬಳಲುತ್ತಿರುವ ಮಕ್ಕಳು!

ವಾಷಿಂಗ್ಟನ್‍: ಕೊರೊನಾ ವೈರಸ್‍ ಸಂಬಂಧಿತ ಜ್ವರದಿಂದ ಮಕ್ಕಳು ಬಳಲುತ್ತಿರುವ ಪ್ರಕರಣಗಳು ಅಮೆರಿಕದ ಕನಿಷ್ಠ 17 ರಾಜ್ಯಗಳಿಂದ…

ರಾಜ್ಯದಲ್ಲಿ ಪೊಲೀಸರ ಬೆನ್ನು ಬಿದ್ದ ಕೊರೊನಾ!

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಮುಂದುವರೆಯುತ್ತಿದೆ. ಪೊಲೀಸರೂ ಇದಕ್ಕೆ ಹೊರತಲ್ಲ.

ಶುಂಠಿ ವ್ಯಾಪಾರಿಯಿಂದ ಮುಂಡರಗಿ ಪೊಲೀಸ್ ಸ್ಟೇಶನ್ ಗೆ ಸೋಂಕಿನ ಸಂಕಟ..!

ಮುಂಡರಗಿ: ಕೊಡಗು ಜಿಲ್ಲೆಯ ಶುಂಠಿ ವ್ಯಾಪಾರಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಆದ್ರೆ ಆತನ ಟ್ರಾವೆಲ್ ಹಿಸ್ಟರಿ…