ವಾಣಿಜ್ಯ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ-ಎಂಬಿಎ ಮಾಡಿರುವ ರೋಶ್ನಿ ಈಗ ಎಚ್.ಸಿ.ಎಲ್. ಟೆಕ್ನಾಲಜೀಸ್ ಕಂಪನಿಯ ಅಧ್ಯಕ್ಷೆ ಆಗಿದ್ದಾರೆ.

ನವದೆಹಲಿ:  ಶಿವ್ ನಾಡಾರ್ ತೆರವು ಮಾಡಿದ ಸ್ಥಾನಕ್ಕೆ ಅವರ ಮಗಳು ರೋಶ್ನಿ ನಾಡಾರ್ ಮಲ್ಹೋತ್ರಾ ಅವರನ್ನು ನೇಮಕ ಮಾಡಲಾಗಿದೆ.

ತಂದೆ ಕಂಪನಿಗೆ ಮಗಳು ಮುಖ್ಯಸ್ಥೆ ಆಗುವುದೇನೂ ದೊಡ್ಡ ಮಾತಲ್ಲ ಅನ್ನಬಹುದು. ಅದೂ ಸತ್ಯವೇ, ಶಿವ್ ನಾಡಾರ್ ಪುತ್ರಿ ಆಗಿರದಿದ್ದರೆ 38 ವರ್ಷಕ್ಕೆ ಈ ಸ್ಥಾನ ಸಿಗುತ್ತಿರಲಿಲ್ಲವೇನೋ?

ಹಾಗಂತ ರೋಶ್ನಿಯ ವೈಯಕ್ತಿಕ ಸಾಧನೆ, ವ್ಯಕ್ತಿತ್ವವನ್ನು ಕಡೆಗಣಿಸಲು ಸಾಧ್ಯವಿಲ್ಲ. ಸಾಫ್ಟ್ ವೇರ್ ದೈತ್ಯ ಎಚ್.ಸಿ.ಎಲ್ ಕಂಪನಿಯಲ್ಲಿ ಹಲವು ಹಂತಗಳಲ್ಲಿ ಕೆಲಸ ಮಾಡಿ ತನ್ನ ಸಾಮರ್ಥ್ಯವನ್ನು ಸಾಬೀತು ಮಾಡಿದ್ದಾಳೆ. ಕಂಪನಿಯಲ್ಲಿ ಈಗ ಸಾಕಷ್ಟು ಶೇರುಗಳನ್ನು ಪಡೆದಿರುವ ಆಕೆ ಭಾರತದ ಅತಿ ಶ್ರೀಮಂತ ಮಹಿಳೆ ಎನಿಸಿದ್ದಾರೆ.

ದೆಹಲಿಯಲ್ಲಿ ಓದಿ ಬೆಳೆದ ರೋಶ್ನಿ ಅಮೆರಿಕದ ಇಲಿಯಾನ್ಸಿನ ನಾರ್ಥ್-ವೆಸ್ಟರ್ನ್ ವಿವಿಯಿಂದ ಪದವಿ ಮತ್ತು ಎಂಬಿಎ ಪದವಿ ಗಳಿಸಿದ್ದಾರೆ.

2013ರಲ್ಲೇ ಅವರನ್ನು ಎಚ್.ಸಿ.ಎಲ್ ಬೋರ್ಡ್ ನಲ್ಲಿ ಹೆಚ್ಚುವರಿ ಡೈರೆಕ್ಟರ್ ಆಗಿ ಸೇರಿಸಿಕೊಳ್ಳಲಾಗಿತ್ತು. ನಂತರ ಕಂಪನಿಯ ಸಿಇಒ ಆದರು. ಈಗ ಅಧ್ಯಕ್ಷೆ ಪದವಿಗೇರಿದ್ದಾರೆ.  ಎಚ್.ಸಿ.ಎಲ್ ಟೆಕ್ನಾಲಜಿ  ದೇಶದಲ್ಲಿ ಸಾಫ್ಟ್ ವೇರ್ ರಫ್ತಿನಲ್ಲಿ ಮೂರನೆ ಸ್ಥಾನದಲ್ಲಿದೆ.

Leave a Reply

Your email address will not be published. Required fields are marked *

You May Also Like

ಈಗಿನಿಂದಲೇ ಹೊಸ ಗೆಟಪ್ ನಲ್ಲಿ ಬರಲು ತಯಾರಾಗುತ್ತಿದ್ದಾರೆ ಸುದೀಪ್!

ಲಾಕ್ ಡೌನ್ ಅವಧಿಯಲ್ಲಿ ಫ್ಯಾಂಟಮ್ ಕೆಲಸದಲ್ಲಿ ಸುದೀಪ್ ತೊಡಗಿಸಿಕೊಂಡಿದ್ದಾರೆ. ತಮ್ಮ ಮುಂದಿನ ಕಮರ್ಷಿಯಲ್ ಆಕ್ಷನ್ ಮೂವಿಗಾಗಿ ಹೊಸ ಗೆಟಪ್ ಪಡೆದಿದ್ದಾರೆ.

ಗದಗ ಜಿಲ್ಲೆಯಲ್ಲಿ 2 ಸಾವಿರ ತೋಟ ನಿರ್ಮಾಣ ಗುರಿ: ಜಿ.ಪಂ ಅಧ್ಯಕ್ಷ ರಾಜೂಗೌಡ

ಗದಗ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 2 ಸಾವಿರ ಹೊಸ ತೋಟಗಳನ್ನು ನಿರ್ಮಿಸಲು ತೋಟಗಾರಿಕೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜೂಗೌಡ ಕೆಂಚನಗೌಡ್ರ ಸೂಚಿಸಿದರು.

ಕೇಂದ್ರ ಸರ್ಕಾರದ ನಡೆ ಸ್ವಾಗತಿಸಿದ ಪಿ.ಚಿದಂಬರಂ!

ಕೇಂದ್ರ ಸರ್ಕಾರ ತೆಗೆದುಕೊಂಡಿರು ನಿರ್ಧಾರವನ್ನು ಮಾಜಿ ವಿತ್ತ ಸಚಿವ ಚಿದಂಬರಂ ಬೆಂಬಲಿಸಿದ್ದಾರೆ. ಇಲ್ಲಿಯವರೆಗೂ ಕೇಂದ್ರ ಸರ್ಕಾರದ ಪ್ರತಿ ನಡೆಯನ್ನು ಟೀಕಿಸುತ್ತಿದ್ದ ಚಿದಂಬರಂ ಮೊದಲ ಬಾರಿಗೆ ಬೆಂಬಲಿಸಿದ್ದಾರೆ.

ಕೊರೋನಾ ಸೋಂಕಿತರ ಸಂಖ್ಯೆ ಬಹಿರಂಗಕ್ಕೂ ಮೀನಾಮೇಷವೇ..?

ಲಾಕ್ ಡೌನ್ ಸಡಿಲಿಕೆಯಿಂದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸೋಂಕಿತರ ಸಂಖ್ಯೆಯಿಂದಾಗಿ ಕೇಂದ್ರ ಸರ್ಕಾರ ಅಂಕಿಸಂಖ್ಯೆಯನ್ನು ಬಹಿರಂಗ ಪಡಿಸಲು ಮೀನಾಮೇಷ ಎಣಿಸುತ್ತಿದೆಯೇ? ಎಂಬ ಪ್ರಶ್ನೆ ಉದ್ಭವವಾಗಿದೆ.