ಗದಗ : ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಜಿಲ್ಲೆಯ ಎಲ್ಲ 9 ಸ್ಥಳಿಯ ಸಂಸ್ಥೆಗಳ ವಾರ್ಡ ಮಟ್ಟದ ಟಾಸ್ಕಫೋರ್ಸ್ ಸಮಿತಿಗಳನ್ನು ಮತ್ತು ಬೂತ ಮಟ್ಟದ ಸಮಿತಿಗಳನ್ನು ರಚಿಸಿ ಜಿಲ್ಲಾಡಳಿತ ನೀಡುವ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ವಹಿಸಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು ತಿಳಿಸಿದ್ದಾರೆ.


ಸಾರ್ವಜನಿಕರಿಗೆ ಜಾಗೃತಿ ಹಾಗೂ ಸೋಂಕುನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಕ್ರಮಗಳನ್ನು ಕಾಲಕಾಲಕ್ಕೆ ಕೈಗೊಳ್ಳಲು ಈ ಸಮಿತಿಗಳು ಸಾರ್ವಜನಿಕರ ಸಹಕಾರದೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಬೂತ ಹಾಗೂ ವಾರ್ಡ ಮಟ್ಟದ ತಮ್ಮ ವ್ಯಾಪ್ತಿಯಲ್ಲಿ ಕೊವಿಡ್-19 ಸೋಂಕು ಪೂರ್ಣವಾಗಿ ನಿಯಂತ್ರಣಕ್ಕೆ ತರುವ ಜವಾಬ್ದಾರಿ ನಿರ್ವಹಿಸಬೇಕು.

ಇದಕ್ಕೆ ಪೂರಕವಾಗಿ ಕೊವಿಡ್-19 ಸೋಂಕಿನ ಒಂದು ಲಕ್ಷಣವಾದ ಉಸಿರಾಟದ ತೋಂದರೆ ಸ್ಥಳದಲ್ಲೇ ತಕ್ಷಣವೇ ಪರೀಕ್ಷಿಸಲು ಪಲ್ಸ ಅಕ್ಸಿಯೋಮೀಟರ್ ಉಪಕರಣವನ್ನು ನೀಡಲಾಗುತ್ತಿದ್ದು ಇದನ್ನು ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಸಂಬAಧಿತ ವಾರ್ಡ ಮತ್ತು ಬೂತ ಮಟ್ಟದ ಸಿಬ್ಬಂದಿಗೆ ವಿತರಿಸಿ ಅವರಿಗೆ ಅದನ್ನು ಬಳಸುವ ಬಗೆ ಮತ್ತು ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಕುರಿತು ತರಬೇತಿಯನ್ನು ನೀಡಿ ವಿತರಿಸಿ ತಕ್ಷಣದಿಂದ ಸಮಸ್ಯೆ ಇರುವ ಸಾರ್ವಜನಿಕರ ಆರೋಗ್ಯ ತಪಾಸಣೆ ಚುರುಕುಗೊಳಿಸಬೇಕು. ಎಂದು ಜಿಲ್ಲಾಧಿಕಾರಿ ಕಟ್ಟು ನಿಟ್ಟಿನ ನಿರ್ದೇಶನ ನೀಡಿದ್ದಾರೆ. ಗದಗ ಬೆಟಗೇರಿ ನಗರ ಸಭೆ ಪೌರಾಯುಕ್ತ ಮನ್ಸೂರ್ ಅಲಿ ಅವರಿಗೆ ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು ಅವರು ಸಾಂಕೇತಿಕವಾಗಿ ಪಲ್ಸ ಅಕ್ಸಿಯೋಮೀಟರ್ ಉಪಕರಣ ಹಸ್ತಾಂತರಿಸಿದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಎಸ್.ಎನ್. ಹಾಗೂ ಬಸವರಾಜ ಇದ್ದರು.

Leave a Reply

Your email address will not be published. Required fields are marked *

You May Also Like

ಗ್ರಾಮ ಪಂಚಾಯತಿಗಳಿಗೆ ನೇಮಕವಾದ ಆಡಳಿತಾಧಿಕಾರಿಗಳ ಕರ್ತವ್ಯಗಳೇನು..?

ನೇಮಕಗೊಂಡ ಆಡಳಿತಾಧಿಕಾರಿಗಳ ಕರ್ತವ್ಯಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 925 ಕ್ಕೆ ಏರಿಕೆ

ಬೆಂಗಳೂರು: ಇಂದಿನ 63 ಪ್ರಕರಣಗಳು ಸೇರಿ ರಾಜ್ಯದಲ್ಲಿ ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 925 ಕ್ಕೆ…

ಉಗ್ರರಿಗೆ ಚಿಕಿತ್ಸೆ ನೀಡಲು, ಶಸ್ತ್ರಾಸ್ತ್ರ ಪೂರೈಸುವುದಕ್ಕಾಗಿಯೇ ಈತ ಮಾಡಿದ್ದೇನು?

ಐಸಿಸ್ ನ ಉಗ್ರರಿಗೆ ವೈದ್ಯಕೀಯ ಸೇವೆ ಒದಗಿಸುವುದಕ್ಕಾಗಿ ಹಾಗೂ ಶಸ್ತ್ರಾಸ್ತ್ರ ಪೂರೈಕೆ ಮಾಡಲು ರಹಸ್ಯವಾಗಿ ಸಂವಹನ ನಡೆಸುವುದಕ್ಕಾಗಿ ಪ್ರತ್ಯೇಕ ಆಪ್ ಗಳನ್ನು ನಗರ ಮೂಲದ ನೇತ್ರ ವೈದ್ಯನೊಬ್ಬ ಅಭಿವೃದ್ಧಿ ಪಡಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯದಲ್ಲಿ ಅಬ್ಬರಿಸುತ್ತಿದೆ ಮಹಾಮಾರಿ – ಇಂದು ಮತ್ತೆ 10 ಸಾವಿರ ಗಡಿ ದಾಟಿದ ಸೋಂಕು!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತ್ತಿದೆ. ಇಂದು ಕೂಡ ರಾಜ್ಯದಲ್ಲಿ ದಾಖಲೆಯ ಸೋಂಕಿತರು ಪತ್ತೆಯಾಗಿದ್ದಾರೆ.