ಗದಗ : ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಜಿಲ್ಲೆಯ ಎಲ್ಲ 9 ಸ್ಥಳಿಯ ಸಂಸ್ಥೆಗಳ ವಾರ್ಡ ಮಟ್ಟದ ಟಾಸ್ಕಫೋರ್ಸ್ ಸಮಿತಿಗಳನ್ನು ಮತ್ತು ಬೂತ ಮಟ್ಟದ ಸಮಿತಿಗಳನ್ನು ರಚಿಸಿ ಜಿಲ್ಲಾಡಳಿತ ನೀಡುವ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ವಹಿಸಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು ತಿಳಿಸಿದ್ದಾರೆ.


ಸಾರ್ವಜನಿಕರಿಗೆ ಜಾಗೃತಿ ಹಾಗೂ ಸೋಂಕುನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಕ್ರಮಗಳನ್ನು ಕಾಲಕಾಲಕ್ಕೆ ಕೈಗೊಳ್ಳಲು ಈ ಸಮಿತಿಗಳು ಸಾರ್ವಜನಿಕರ ಸಹಕಾರದೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಬೂತ ಹಾಗೂ ವಾರ್ಡ ಮಟ್ಟದ ತಮ್ಮ ವ್ಯಾಪ್ತಿಯಲ್ಲಿ ಕೊವಿಡ್-19 ಸೋಂಕು ಪೂರ್ಣವಾಗಿ ನಿಯಂತ್ರಣಕ್ಕೆ ತರುವ ಜವಾಬ್ದಾರಿ ನಿರ್ವಹಿಸಬೇಕು.

ಇದಕ್ಕೆ ಪೂರಕವಾಗಿ ಕೊವಿಡ್-19 ಸೋಂಕಿನ ಒಂದು ಲಕ್ಷಣವಾದ ಉಸಿರಾಟದ ತೋಂದರೆ ಸ್ಥಳದಲ್ಲೇ ತಕ್ಷಣವೇ ಪರೀಕ್ಷಿಸಲು ಪಲ್ಸ ಅಕ್ಸಿಯೋಮೀಟರ್ ಉಪಕರಣವನ್ನು ನೀಡಲಾಗುತ್ತಿದ್ದು ಇದನ್ನು ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಸಂಬAಧಿತ ವಾರ್ಡ ಮತ್ತು ಬೂತ ಮಟ್ಟದ ಸಿಬ್ಬಂದಿಗೆ ವಿತರಿಸಿ ಅವರಿಗೆ ಅದನ್ನು ಬಳಸುವ ಬಗೆ ಮತ್ತು ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಕುರಿತು ತರಬೇತಿಯನ್ನು ನೀಡಿ ವಿತರಿಸಿ ತಕ್ಷಣದಿಂದ ಸಮಸ್ಯೆ ಇರುವ ಸಾರ್ವಜನಿಕರ ಆರೋಗ್ಯ ತಪಾಸಣೆ ಚುರುಕುಗೊಳಿಸಬೇಕು. ಎಂದು ಜಿಲ್ಲಾಧಿಕಾರಿ ಕಟ್ಟು ನಿಟ್ಟಿನ ನಿರ್ದೇಶನ ನೀಡಿದ್ದಾರೆ. ಗದಗ ಬೆಟಗೇರಿ ನಗರ ಸಭೆ ಪೌರಾಯುಕ್ತ ಮನ್ಸೂರ್ ಅಲಿ ಅವರಿಗೆ ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು ಅವರು ಸಾಂಕೇತಿಕವಾಗಿ ಪಲ್ಸ ಅಕ್ಸಿಯೋಮೀಟರ್ ಉಪಕರಣ ಹಸ್ತಾಂತರಿಸಿದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಎಸ್.ಎನ್. ಹಾಗೂ ಬಸವರಾಜ ಇದ್ದರು.

Leave a Reply

Your email address will not be published. Required fields are marked *

You May Also Like

1 ರಿಂದ 5ನೇ ತರಗತಿ ಶಾಲಾ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ

ಕೊರೋನಾ ಸೋಂಕಿನ ಭೀತಿ, ಕೊರೋನಾ ಎರಡನೇ ಅಲೆಯ ನಡುವೆಯೂ ರಾಜ್ಯದಲ್ಲಿ ಈಗಾಗಲೇ ಫೆಬ್ರವರಿ 1ರಿಂದ ಪೂರ್ಣ ಪ್ರಮಾಣದ ತರಗತಿ ಕೂಡ 9, 10, ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಗೊಂಡಿವೆ.

ಪಾಪ.. ಕೊಪ್ಪಳದಲ್ಲಿ ಭಿಕ್ಷೆಯೇ ಬದುಕಾಗಿಸಿಕೊಂಡವರ ಗತಿ ಏನು..?

ಕೊಪ್ಪಳ: ಮುಂಬೈಯಿಂದ ಪಿ-1173 ಸೋಂಕಿತ ಪ್ರಯಾಣಿಸಿದ್ದ ಬಸ್ ನಲ್ಲಿ 9 ಜನ ಭಿಕ್ಷುಕರು ಪ್ರಯಾಣಿಸಿದ್ದರಂತೆ. ಈ…

ಮುಂಬೈನ 800 ಚದರ ಅಡಿ ಜಾಗಕ್ಕೆ ತಿಂಗಳಿಗೆ 1 ರೂಪಾಯಿ!: ಪತ್ನಿಗೆ ಲೀಸ್ ಕೊಟ್ಟ ಬ್ಯಾಂಕ್ ಚೇರ್ಮನ್

ಖಾಸಗಿ ಬ್ಯಾಂಕಿನ ಮುಖ್ಯಸ್ಥರೊಬ್ಬರು ತಮ್ಮ ಪತ್ನಿಯ ಎನ್.ಜಿ.ಒ.ಗೆ ತಮ್ಮ ಬ್ಯಾಂಕಿನ ಪಕ್ಕದ ಜಾಗವನ್ನು ಬಳಸಿಕೊಳ್ಳಲು ನೀಡಿದ್ದ ವಿಷಯ ಈಗ ಬೆಳಕಿಗೆ ಬಂದಿದೆ. ತಿಂಗಳಿಗೆ ನಾಮಕಾವಸ್ಥೆ ಒಂದೇ ಒಂದು ರೂಪಾಯಿ ಬಾಡಿಗೆಯಷ್ಟೇ ಎಂದು ಎನ್.ಡಿ.ಟಿ.ವಿ ವರದಿ ಮಾಡಿದೆ. ಯೆಸ್ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕ್ ಗಳು ದಿವಾಳಿ ಹೊಂದಿದ್ದರ ಹಿಂದೆ ಬ್ಯಾಂಕ್ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರ ಸ್ವಾರ್ಥವಿತ್ತು ಎನ್ನುವುದನ್ನು ನೋಡಿದ್ದೇವೆ.

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?ರಾಜ್ಯದಲ್ಲಿಂದು 3648 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು