ಗದಗ : ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಜಿಲ್ಲೆಯ ಎಲ್ಲ 9 ಸ್ಥಳಿಯ ಸಂಸ್ಥೆಗಳ ವಾರ್ಡ ಮಟ್ಟದ ಟಾಸ್ಕಫೋರ್ಸ್ ಸಮಿತಿಗಳನ್ನು ಮತ್ತು ಬೂತ ಮಟ್ಟದ ಸಮಿತಿಗಳನ್ನು ರಚಿಸಿ ಜಿಲ್ಲಾಡಳಿತ ನೀಡುವ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ವಹಿಸಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು ತಿಳಿಸಿದ್ದಾರೆ.


ಸಾರ್ವಜನಿಕರಿಗೆ ಜಾಗೃತಿ ಹಾಗೂ ಸೋಂಕುನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಕ್ರಮಗಳನ್ನು ಕಾಲಕಾಲಕ್ಕೆ ಕೈಗೊಳ್ಳಲು ಈ ಸಮಿತಿಗಳು ಸಾರ್ವಜನಿಕರ ಸಹಕಾರದೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಬೂತ ಹಾಗೂ ವಾರ್ಡ ಮಟ್ಟದ ತಮ್ಮ ವ್ಯಾಪ್ತಿಯಲ್ಲಿ ಕೊವಿಡ್-19 ಸೋಂಕು ಪೂರ್ಣವಾಗಿ ನಿಯಂತ್ರಣಕ್ಕೆ ತರುವ ಜವಾಬ್ದಾರಿ ನಿರ್ವಹಿಸಬೇಕು.

ಇದಕ್ಕೆ ಪೂರಕವಾಗಿ ಕೊವಿಡ್-19 ಸೋಂಕಿನ ಒಂದು ಲಕ್ಷಣವಾದ ಉಸಿರಾಟದ ತೋಂದರೆ ಸ್ಥಳದಲ್ಲೇ ತಕ್ಷಣವೇ ಪರೀಕ್ಷಿಸಲು ಪಲ್ಸ ಅಕ್ಸಿಯೋಮೀಟರ್ ಉಪಕರಣವನ್ನು ನೀಡಲಾಗುತ್ತಿದ್ದು ಇದನ್ನು ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಸಂಬAಧಿತ ವಾರ್ಡ ಮತ್ತು ಬೂತ ಮಟ್ಟದ ಸಿಬ್ಬಂದಿಗೆ ವಿತರಿಸಿ ಅವರಿಗೆ ಅದನ್ನು ಬಳಸುವ ಬಗೆ ಮತ್ತು ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಕುರಿತು ತರಬೇತಿಯನ್ನು ನೀಡಿ ವಿತರಿಸಿ ತಕ್ಷಣದಿಂದ ಸಮಸ್ಯೆ ಇರುವ ಸಾರ್ವಜನಿಕರ ಆರೋಗ್ಯ ತಪಾಸಣೆ ಚುರುಕುಗೊಳಿಸಬೇಕು. ಎಂದು ಜಿಲ್ಲಾಧಿಕಾರಿ ಕಟ್ಟು ನಿಟ್ಟಿನ ನಿರ್ದೇಶನ ನೀಡಿದ್ದಾರೆ. ಗದಗ ಬೆಟಗೇರಿ ನಗರ ಸಭೆ ಪೌರಾಯುಕ್ತ ಮನ್ಸೂರ್ ಅಲಿ ಅವರಿಗೆ ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು ಅವರು ಸಾಂಕೇತಿಕವಾಗಿ ಪಲ್ಸ ಅಕ್ಸಿಯೋಮೀಟರ್ ಉಪಕರಣ ಹಸ್ತಾಂತರಿಸಿದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಎಸ್.ಎನ್. ಹಾಗೂ ಬಸವರಾಜ ಇದ್ದರು.

Leave a Reply

Your email address will not be published. Required fields are marked *

You May Also Like

ಆಶಾ ಕಾರ್ಯಕರ್ತೆಯರ ಸಹಕಾರ ಸಂಘ ಸ್ಥಾಪನೆಗೆ ಸೂಚನೆ

ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ನೀಡಲು 3 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗಿದೆ.

ಸಂಜನಾ, ರಾಗಿಣಿಗೆ ಬೇಲ್ ಬಾಂಬ್ ಪ್ರಕರಣದ ಹಿಂದಿನ ಸತ್ಯವೇನು?

ತುಮಕೂರು : ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ಸಂಜನಾ ಹಾಗೂ ರಾಗಿಣಿ ಅವರ ಜಾಮೀನಿಗೆ ಸಂಬಂಧಿಸಿದಂತೆ ಎನ್‍ ಡಿಪಿಎಸ್ ಕೋರ್ಟ್ ನ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಹೊಸ ಟ್ವೀಸ್ಟ್ ಸಿಕ್ಕಿದೆ.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪ್ರಶ್ನೆಪತ್ರಿಕೆ ಮಾದರಿ ಬದಲಾವಣೆ

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಜೂ.21 ರಿಂದ ಜುಲೈ 5ರ ವರೆಗೆ ಪರೀಕ್ಷೆ ನಡೆಯಲಿದೆ.

ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಗದಗ ಆಗಮಿಸಿದ ಸಿ ಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನುಹಮ್ಮಿಕೋಂಡಿದ್ದ ಸಿ ಎಂ ಬಸವರಾಜ ಬೊಮ್ಮಾಯಿಯವರು ಇಂದು ಗದಗ…