ಗದಗ : ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಜಿಲ್ಲೆಯ ಎಲ್ಲ 9 ಸ್ಥಳಿಯ ಸಂಸ್ಥೆಗಳ ವಾರ್ಡ ಮಟ್ಟದ ಟಾಸ್ಕಫೋರ್ಸ್ ಸಮಿತಿಗಳನ್ನು ಮತ್ತು ಬೂತ ಮಟ್ಟದ ಸಮಿತಿಗಳನ್ನು ರಚಿಸಿ ಜಿಲ್ಲಾಡಳಿತ ನೀಡುವ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ವಹಿಸಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು ತಿಳಿಸಿದ್ದಾರೆ.


ಸಾರ್ವಜನಿಕರಿಗೆ ಜಾಗೃತಿ ಹಾಗೂ ಸೋಂಕುನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಕ್ರಮಗಳನ್ನು ಕಾಲಕಾಲಕ್ಕೆ ಕೈಗೊಳ್ಳಲು ಈ ಸಮಿತಿಗಳು ಸಾರ್ವಜನಿಕರ ಸಹಕಾರದೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಬೂತ ಹಾಗೂ ವಾರ್ಡ ಮಟ್ಟದ ತಮ್ಮ ವ್ಯಾಪ್ತಿಯಲ್ಲಿ ಕೊವಿಡ್-19 ಸೋಂಕು ಪೂರ್ಣವಾಗಿ ನಿಯಂತ್ರಣಕ್ಕೆ ತರುವ ಜವಾಬ್ದಾರಿ ನಿರ್ವಹಿಸಬೇಕು.

ಇದಕ್ಕೆ ಪೂರಕವಾಗಿ ಕೊವಿಡ್-19 ಸೋಂಕಿನ ಒಂದು ಲಕ್ಷಣವಾದ ಉಸಿರಾಟದ ತೋಂದರೆ ಸ್ಥಳದಲ್ಲೇ ತಕ್ಷಣವೇ ಪರೀಕ್ಷಿಸಲು ಪಲ್ಸ ಅಕ್ಸಿಯೋಮೀಟರ್ ಉಪಕರಣವನ್ನು ನೀಡಲಾಗುತ್ತಿದ್ದು ಇದನ್ನು ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಸಂಬAಧಿತ ವಾರ್ಡ ಮತ್ತು ಬೂತ ಮಟ್ಟದ ಸಿಬ್ಬಂದಿಗೆ ವಿತರಿಸಿ ಅವರಿಗೆ ಅದನ್ನು ಬಳಸುವ ಬಗೆ ಮತ್ತು ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಕುರಿತು ತರಬೇತಿಯನ್ನು ನೀಡಿ ವಿತರಿಸಿ ತಕ್ಷಣದಿಂದ ಸಮಸ್ಯೆ ಇರುವ ಸಾರ್ವಜನಿಕರ ಆರೋಗ್ಯ ತಪಾಸಣೆ ಚುರುಕುಗೊಳಿಸಬೇಕು. ಎಂದು ಜಿಲ್ಲಾಧಿಕಾರಿ ಕಟ್ಟು ನಿಟ್ಟಿನ ನಿರ್ದೇಶನ ನೀಡಿದ್ದಾರೆ. ಗದಗ ಬೆಟಗೇರಿ ನಗರ ಸಭೆ ಪೌರಾಯುಕ್ತ ಮನ್ಸೂರ್ ಅಲಿ ಅವರಿಗೆ ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು ಅವರು ಸಾಂಕೇತಿಕವಾಗಿ ಪಲ್ಸ ಅಕ್ಸಿಯೋಮೀಟರ್ ಉಪಕರಣ ಹಸ್ತಾಂತರಿಸಿದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಎಸ್.ಎನ್. ಹಾಗೂ ಬಸವರಾಜ ಇದ್ದರು.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ ಪೊಲೀಸರ ಕಾರ್ಯಾಚರಣೆ: ಕುರಿ, ಮೇಕೆ ಕಳ್ಳರು ಅಂದರ್..!

ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕು ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮೇಕೆ ಹಾಗೂ ಕುರಿ ಕಳ್ಳತನ ಪ್ರಕರಣಗಳು ಕಂಡು ಬಂದಿದ್ದವು. ಘಟನೆ ಗ್ರಾಮೀಣ ಭಾಗದ ಜನರ ನಿದ್ದೆಗೆಡಿಸಿತ್ತು. ಆದರೆ ಕೊನೆಗೂ ಕಳ್ಳರನ್ನು ಸೆರೆ ಹಿಡಿಯುವಲ್ಲಿ ಲಕ್ಷ್ಮೇಶ್ವರ ಪೊಲೀಸರು ಯಶಸ್ವಿಯಾಗಿದ್ದಾರೆ.

ಗದಗ ಜಿಲ್ಲೆಯ ಆರು ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಇಂದು ಮತ್ತೆ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ದಿನದಿಂದ ದಿನಕ್ಕೆ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.

ಮುಳಗುಂದ ಅಬ್ಬಿ ಕೆರೆಗೆ ಜಿಲ್ಲಾಧಿಕಾರಿ ಭೇಟಿ: ಸಾರ್ವಜನಿಕರ ಸಯೋಗದಲ್ಲಿ ಕೆರೆ ಅಭಿವೃದ್ದಿಗೆ ಸಲಹೆ.

ಪಟ್ಟಣಕ್ಕೆ ಶನಿವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ಮಳೆಯಿಂದ ಭರ್ತಿಯಾಗಿರುವ ಅಬ್ಬಿ ಕೆರೆ ವೀಕ್ಷಣೆ ಮಾಡಿದರು. ನಂತರ ಸ್ಥಳಿಯ ಮುಖಂಡರೊಂದಿಗೆ ಚರ್ಚಿಸಿದ ಅವರು ಜಿಲ್ಲೆಯಲ್ಲಿ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಕೆರೆಗಳನ್ನು ಜನಪ್ರತಿನಿಧಿಗಳು, ಸಾರ್ವಜನಿಕರು ಕೆರೆ ಅಭಿವೃದ್ದಿ ಸಮಿತಿ ರಚಿಸಿಕೊಂಡು ಕೆರೆಗಳ ಅಭಿವೃದ್ದಿಗೆ ಮುಂದಾಗಬೇಕು. ಕೆರೆಗಳ ಸಂರಕ್ಷಣೆಯಿಂದ ಅಂತರ್ಜಲ ವೃದ್ದಿಸುವುದರ ಜತೆಗೆ ರೈತರಿಗೂ ನೀರಿನ ಬವಣೆ ನೀಗಲಿದೆ. ಈಗಾಗಲೇ ಮಳೆಯಿಂದ ಕೆರೆಗಳು ಭರ್ತಿಯಾಗಿದ್ದು ಕೆರೆ ದಡದಲ್ಲಿ ಅರಣ್ಯ ಇಲಾಖೆಯ ಸಹಯೋಗದಲ್ಲಿ ಸಸಿ ನೆಡಬೇಕು ಎಂದು ಸಲಹೆ ನೀಡಿದರು.

ಚಿಕ್ಕಪ್ಪ, ಮಗ ಸೇರಿ ಗಾಂಜಾ ಸೇವಿಸಿದರು…ಮತ್ತಿನಲ್ಲಿ ಜಗಳವಾಡಿದರು…ಮುಂದೇನಾಯ್ತು?

ಕೋಲಾರ : ಗಾಂಜಾ ಅಮಲಿನಲ್ಲಿ ತಮ್ಮ ಚಿಕ್ಕಪ್ಪನನ್ನೇ ಬಾಲಕ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಮಾಲೂರು ತಾಲೂಕಿನ ಬೆನ್ನಘಟ್ಟ ಗ್ರಾಮದಲ್ಲಿ ಘಟನೆ ನಡೆದಿದೆ.