ಇ-ಜನ್ಮ ತಂತ್ರಾಂಶದಲ್ಲಿ ತಮ್ಮ ಡಿಜಿಟಲ್ ಸಹಿ ಮುಖಾಂತರ ಜನನ, ಮರಣ ವಿವರಗಳನ್ನು ಪಿಡಿಒಗಳು ದಾಖಲಿಸಬೇಕು.

ಬೆಂಗಳೂರು: ರಾಷ್ಟ್ರೀಯ ಜನನ-ಮರಣ ಕಾಯ್ದೆ 1967ರ ಅಧ್ಯಾಯ 5ರ ಪ್ರಕರಣ 27 ರ ಅಡಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಜನನ ಮತ್ತು ಮರಣ ಪತ್ರಗಳ ವಿತರಣಾಧಿಕಾರಿ ಎಂದು ರಾಜ್ಯಪಾಲರ ಆದೇಶದ ಪ್ರಕಾರ ನೇಮಕ ಮಾಡಿ, ಸರ್ಕಾರದ ಅಧೀನ ಕಾರ್ಯದರ್ಶಿ (ಜಿಪಂ) (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ) ಆದೇಶ ಹೊರಡಿಸಿದ್ದಾರೆ.

ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಪಿಡಿಒಗಳು ಈ ಕೆಲಸ ನಿರ್ವಹಿಸಬೇಕು ಮತ್ತು ಸರ್ಕಾರ ನಿಗದಿಪಡಿಸಿದ ಶುಲ್ಕವನ್ನು ಸಂಗ್ರಹಿಸಿ ಜಮಾ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರು ಪಿಡಿಒಗಳನ್ನು ಜನನ-ಮರಣ ಪತ್ರದ ವಿತರಣಾಧಿಕಾರಿ ಎಂದು ನೇಮಿಸಬಹುದು ಎಂದು ತಿಳಿಸಿರುವ ಆಧಾರದಲ್ಲಿ ಈ ನೇಮಕ ಮಾಡಲಾಗಿದೆ.

ಕರ್ನಾಟಕ ಗ್ರಾಮ್ ಸ್ವರಾಜ್ ಮತ್ತು ಪಂಚಾಯತ್ ಅಧಿನಿಯಮ 1993ರ ಪ್ರಕಾರ ಜನನ-ಮರಣಗಳ ತ್ವರಿತ ನೋಂದಣಿ ಮಾಡುವುದು ಗ್ರಾಮ ಪಂಚಾಯತಿಗಳ ಕರ್ತವ್ಯವಾಗಿದೆ. ಈಗ ಗ್ರಾಮ ಪಂಚಾಯತಿಯ ಪಿಡಿಒಗಳಿಗೆ ಈ ಹೊಣೆಯನ್ನು ನೀಡಲಾಗಿದೆ.

Leave a Reply

Your email address will not be published. Required fields are marked *

You May Also Like

ಜಿಲ್ಲೆಯಲ್ಲಿ ಧಾರ್ಮಿಕ ಹಬ್ಬಗಳನ್ನು ನಿರ್ಭಂದಿಸಿ ಜಿಲ್ಲಾಡಳಿತ ಆದೇಶ

ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಹೋಳಿ, ಯುಗಾದಿ, ಷಬ್-ಎ-ಬರಾತ್, ಗುಡ್‌ಫ್ರೆöÊಡೆ ಹಬ್ಬಗಳ ಸಂದರ್ಭಗಳ ನಡೆಯಬಹುದಾದ ಸಮಾರಂಭಗಳು, ಆಚರಣೆಗಳು

ಡಿಸಿಎಂ ಸವದಿ ಹೇಳಿಕೆಯಿಂಮಹಾರಾಷ್ಟ್ರದಲ್ಲಿ ಮೂಡಿದ ಸಂಚಲನ

ನಮಗೆ ಮುಂಬೈ ಮೇಲೆ ಹಕ್ಕು ಇದೆ. ಮುಂಬೈಯನ್ನು ರಾಜ್ಯಕ್ಕೆ ಸೇರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಿದ್ದು, ಅಲ್ಲಿವರೆಗೂ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸುವು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಜ.28 ರಂದು ಮಸ್ಕಿಯಲ್ಲಿ ಪ್ರತಿಭಟನೆ.

ವರದಿ: ವಿಠಲ ಕೆಳೂತ್ ಮಸ್ಕಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರಕ್ಕೆ ಅಪಮಾನ…