ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ (70) ನಿಧನ ಹೊಂದಿದ್ದಾರೆ. ನಿನ್ನೆ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮದುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಇವರನ್ನು ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ರಾತ್ರಿ 11 ಗಂಟೆಯ ಹೊತ್ತಿಗೆ ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ.

ಗಂಗಾಧರಯ್ಯ 118ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಗೂ 1500ಕ್ಕೂ ಹೆಚ್ಚು ನಾಟಕಗಳಲ್ಲಿ ನಟಿಸಿದ್ದರು. ಇತ್ತೀಚಿನವರೆಗೂ ಕೂಡ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ಶಬ್ದವೇದಿ, ಕುರಿಗಳು ಸರ್ ಕುರಿಗಳು, ನೀರ್ ದೋಸೆ, ಅಪ್ಪು, ಕ್ವಾಟ್ಲೆ ಸತೀಶ, ಕರ್ವ, ಪಾಪಿಗಳ ಲೋಕದಲ್ಲಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟ ಹುಲಿವಾನ್ ಗಂಗಾಧರಯ್ಯ ನಟಿಸಿದ್ದರು.

Leave a Reply

Your email address will not be published. Required fields are marked *

You May Also Like

ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟಿ ಸಂಜನಾ!

ಬೆಂಗಳೂರು : ಡ್ರಗ್ ಕೇಸ್ ನಲ್ಲಿ ಜೈಲು ಪಾಲಾಗಿರುವ ನಟಿ ಸಂಜನಾ ಅವರು, ಜಾಮೀನಿಗಾಗಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಮರ್ಯಾದೆಗೇಡು ಹತ್ಯೆ: ಮರ್ಡರ್ ಸಿನಿಮಾ ಪೋಸ್ಟರ್ ರಿಲೀಜ್ ಮಾಡಿದ RGV

ಮರ್ಯಾದೆಗೇಡು ಹತ್ಯೆ ಕುರಿತ ಸಿನಿಮಾ ಮರ್ಡರ್ ನ ಪೋಸ್ಟರ್ ಬಿಡುಗಡೆ ಮಾಡಿದ ರಾಮ್ ಗೋಪಾಲ್ ವರ್ಮಾ.…

ಲಾಕ್ ಡೌನ್ ಸಮಯದಲ್ಲಿ ಬಾಲಿವುಡ್ ನಟ ಸಲ್ಲು ಬಾಯ್ ಮಾಡಿದ್ದೆನು ಗೊತ್ತಾ..?

ಬಾಲಿವುಡ್ ನಟ ಸಲ್ಲು ಬಾಯ್ ಅಭಿಮಾನಿಗಳಿಗೆ ಮಾತ್ರ ಲಾಕ್ ಡೌನ್ ನಲ್ಲಿ ಸಲ್ಲುಭಾಯ್ ಏನು ಮಾಡ್ತಿದ್ದಾರೆ ಅಂತ ಕುತೂಹಲ ಇತ್ತು. ಆದ್ರೆ ಅಭಿಮಾನಿಗಳಿಗೆ ತಾವು ಈ ಬಿಡುವಿನಲ್ಲಿ ಏನು ಮಾಡ್ತಿದ್ದಾರೆ ಅಂತ ತೋರಿಸಿದ್ದಾರೆ.

ಸಹೃದಯಿ ಗಾಯನದ ದೈತ್ಯ ಪ್ರಭೆ: ಎಸ್.ಪಿ.ಬಿ.‌

ನಟ, ಗಾಯಕ, ನಿರ್ಣಾಯಕ ಹೀಗೆ ಹತ್ತಾರು ವಿಭಿನ್ನ ರೀತಿಯಲ್ಲಿ ಪರದೆ ಮೇಲೆ ಮೂಡುತ್ತಿದ್ದ ಎಸ್.ಪಿ. ಅತಿ ಸೂಕ್ಷ್ಮ ಜೀವಿ. ಸಾವಿರಾರು ಹಾಡುಗಳನ್ನು ನೂರಾರು ಗಾಯಕರು ಹಾಡಿ ಕೀರ್ತಿ ಗಳಿಸಿದ್ದಾರೆ. ಆದರೆ ಎಸ್.ಪಿ. ತರಹ ಕಲೆಯ ವಿವಿಧ ಮಗ್ಗುಲುಗಳನ್ನು ಅರ್ಥ ಮಾಡಿಕೊಂಡವರು ವಿರಳ. ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ಮೂಡಿ ಬಂದ ಜನಪ್ರಿಯ ಶೋ.