ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ (70) ನಿಧನ ಹೊಂದಿದ್ದಾರೆ. ನಿನ್ನೆ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮದುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಇವರನ್ನು ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ರಾತ್ರಿ 11 ಗಂಟೆಯ ಹೊತ್ತಿಗೆ ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ.

ಗಂಗಾಧರಯ್ಯ 118ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಗೂ 1500ಕ್ಕೂ ಹೆಚ್ಚು ನಾಟಕಗಳಲ್ಲಿ ನಟಿಸಿದ್ದರು. ಇತ್ತೀಚಿನವರೆಗೂ ಕೂಡ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ಶಬ್ದವೇದಿ, ಕುರಿಗಳು ಸರ್ ಕುರಿಗಳು, ನೀರ್ ದೋಸೆ, ಅಪ್ಪು, ಕ್ವಾಟ್ಲೆ ಸತೀಶ, ಕರ್ವ, ಪಾಪಿಗಳ ಲೋಕದಲ್ಲಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟ ಹುಲಿವಾನ್ ಗಂಗಾಧರಯ್ಯ ನಟಿಸಿದ್ದರು.

Leave a Reply

Your email address will not be published. Required fields are marked *

You May Also Like

ಇಂದ್ರಸೇನಾ ಅವತಾರ ತಾಳಲಿದ್ದಾರೆ ಶಿವಣ್ಣ!

ಬೆಂಗಳೂರು: ನಟ ಶಿವಣ್ಣ ಮತ್ತೊಂದು ಸಿನಿಮಾಗೆ ಕೈ ಹಾಕಿದ್ದಾರೆ. ಅಲ್ಲದೇ, ಈಗಾಗಲೇ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ.…

ನಟ ದ್ವಾರಕೀಶ್ ಪತ್ನಿ ನಿಧನ

ನಟ, ನಿರ್ಮಾಪಕ ದ್ವಾರಕೀಶ್‌ ಪತ್ನಿ ಅಂಬುಜಾ ದ್ವಾರಕೀಶ್ (80 ವರ್ಷ) ಶುಕ್ರವಾರ ನಿಧನ ಹೊಂದಿದ್ದಾರೆ.

ಜೊತೆ ಜೊತೆಯಲಿ ನಿರ್ದೇಶಕ ಆಸ್ಪತ್ರೆಗೆ ದಾಖಲು

ಜನಪ್ರಿಯ ಟಿವಿ ಧಾರಾವಾಹಿ ಜೊತೆ ಜೊತೆಯಲಿ ನಿರ್ದೇಶಕ ಆರೂರು ಜಗದೀಶ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅವರನ್ನು ಕಳೆದ ಒಂದು ವಾರದಿಂದ ಜಗದೀಶ್ ಮಣಿಪಾಲದ

ಅಂದು ”ಅದೇ ಕಣ್ಣು”… ಇಂದು ”ಅದೇ ಮುಖ”….!: ಅದೇ ಮುಖದೊಂದಿಗೆ ಪ್ರೇಕ್ಷಕರಿಗೆ ಲಗ್ಗೆ ಇಡಲು ಸಜ್ಜಾಗಿದ್ದಾರೆ ಸಂದೇಶ

‘ಅದೇ ಮುಖ” ಎಂಬ ಸಿನಿಮಾದ ಟೈಟಲ್. ಗಾಂಧಿನಗರದಲ್ಲಿ ಈ ಚಿತ್ರ ಹೇಗಿರಬಹುದು ಎಂಬ ಕುತೂಹಲ ಗರಿಗೆದರುವಂತೆ ಮಾಡಿದೆ.