ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 3 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.

ರೋಣ ತಾಲ್ಲೂಕಿನ ಕುರಹಟ್ಟಿ ಗ್ರಾಮ ಪಂಚಾಯತ್ ವಾರ್ಡ ನಂ 1, ಮುದೇನಗುಡಿ ಗ್ರಾಮ, ಮತ್ತು ಮಲ್ಲಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂದಿಗವಾಡ ಗ್ರಾಮ

ಮುಂಡರಗಿ ತಾಲೂಕ ಶೀಂಗಟಾಲೂರ ಗ್ರಾಮ ಪಂಚಾಯತ್ ವಾರ್ಡ ನಂ.1, ಶೀರನಹಳ್ಳಿ ಗ್ರಾಮ

ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವರದಿಯನ್ವಯ ಈ 3 ಪ್ರದೇಶಗಳನ್ನು ಕೊವಿಡ್-19 ಸೋಂಕು ನಿಯಂತ್ರಣ ಪ್ರತಿಬಂಧಿತ (ಕಂಟೇನ್‍ಮೆಂಟ್) ಪ್ರದೇಶಗಳೆಂದು ಘೋಷಿಸಿರುವುದನ್ನು ಹಿಂಪಡೆದು ತಕ್ಷಣದಿಂದ ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ. ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಸ್ ನಿಲುಗಡೆ ಸ್ಥಳದಲ್ಲೇ ಬೈಕ್ ಪಾರ್ಕಿಂಗ್, ಪ್ರಯಾಣಿಕರ ಪರದಾಟ

ಸ್ಥಳೀಯ ಬಸ್ ನಿಲ್ಧಾಣದ ನಿಲುಗಡೆ ಸ್ಥಳದಲ್ಲೇ ನಿತ್ಯ ಬೈಕ್ ಗಳ ಪಾರ್ಕಿಂಗ್ ಮಾಡುತ್ತಿದ್ದು ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಹೊಸ ಬಸ್ ನಿಲ್ಧಾಣ ಆರಂಭವಾದಾಗಿನಿಂದ ಬೈಕ ನಿಲ್ಲಿಸಲು ಪ್ರತ್ಯೇಕ ಜಾಗದ ವ್ಯವಸ್ಥೆ ಇಲ್ಲದಿರುವದು ಈ ಸಮಸ್ಯೆ ಉಂಟಾಗಿದೆ. ನಿಲ್ಧಾನದಲ್ಲಿ ಯಾವ ಸೂಚನಾ ಫಲಕವನ್ನು ಅಳಡಿಕೆಗೆ ಸಂಬಂಧಿಸಿದ ಸಾರಿಗೆ ಸಂಸ್ಥೆ ಸೂಕ್ತ ವ್ಯವಸ್ಥೆ ಮಾಡುತ್ತಿಲ್ಲ.

ಬೆಳಧಡಿ: ಪ್ರಧಾನ ಮಂತ್ರಿ ಜೀವನಜ್ಯೋತಿ ಚೆಕ್ ವಿತರಣೆ

ಮುಳಗುಂದ: ಸಮೀಪದ ಬೆಳಧಡಿ ಗ್ರಾಮದ ಅಂಚೆ ಕಚೇರಿಯಲ್ಲಿ ಮಂಗಳವಾರ ಗದಗ ಅಂಚೆ ವರಿಷ್ಠಾಧಿಕಾರಿ ಚಿದಾನಂದ ಪದ್ಮಸಾಲಿ ಅವರು ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆಯಡಿ ಸಂಗಮೇಶ ಅರಕೇರಿಮಠ ಅವರಿಗೆ 2 ಲಕ್ಷ ರೂ ಮೊತ್ತದ ಚೆಕ್ ವಿತರಿಸಿದರು.

ವಯಸ್ಸಿನ ಕಾರಣದಿಂದ ಸಿಎಂ ಬಿಎಸ್ವೈ ಅವರನ್ನು ಕೆಳಗಿಳಿಸುವುದು ಸೂಕ್ತ ಅಲ್ಲ: ಸಚಿವ ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ: ಸಿಎಂ ಯಡಿಯೂರಪ್ಪ ಸಮರ್ಥರಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಈಗ ಖಾಲಿ‌ ಇಲ್ಲ. ಯಡಿಯೂರಪ್ಪ ನವರು ಒಳ್ಳೆಯ ಕೆಲಸ‌ ಮಾಡುತ್ತಿದ್ದಾರೆ. ವಯಸ್ಸಿನ ಕಾರಣ ಹೇಳಿ‌ ಅವರನ್ನು ಕೆಳಗಿಳಿಸುವುದು ಸೂಕ್ತವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪ್ರತಿಕ್ರಿಯಿಸಿದರು.

ಸಾರಿಗೆ ನೌಕರರಿಗೆ ಅಭದ್ರತೆ: ಉದ್ಯೋಗ ಕಡಿತಕ್ಕೆ ಸ್ವಯಂ ನಿವೃತ್ತಿಯ ಮಾಸ್ಟರ್ ಪ್ಲ್ಯಾನ್..!

ಬೆಂಗಳೂರು: ಈಗಾಗಲೇ ಸಾರಿಗೆ ಇಲಾಖೆಯ 2000 ಗುತ್ತಿಗೆ ನೌಕರರನ್ನು ಮನೆಗೆ ಕಳುಹಿಸುತ್ತಿದೆ. ಇದರಿಂದ ಖಾಯಂ ನೌಕರರಿಗೂ…