ಹೈದರಾಬಾದ್ : ಬಾಹುಬಲಿ ಖ್ಯಾತಿಯ ಪ್ರಭಾಸ್ ಅವರಿಗೆ ಬಾಲಿವುಡ್ ಪದ್ಮಾವತಿ ದೀಪಿಕಾ ಪಡುಕೋಣೆ  ಜೋಡಿಯಾಗುತ್ತಿದ್ದಾರೆ.

ಪ್ರಭಾಸ್ ಜೊತೆ ನಟಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ ಎಂಬ ಮಾತುಗಳು ಬಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿವೆ. ತೆಲುಗು ಚಲನಚಿತ್ರ ನಿರ್ಮಾಣ ಸಂಸ್ಥೆ ವೈಜಯಂತಿ ಮೂವೀಸ್ ಸಿನಿಮಾನಿರ್ಮಿಸುತ್ತಿದ್ದು, ಪ್ರಭಾಸ್ ಮತ್ತು ದೀಪಿಕಾ ಒಟ್ಟಿಗೆ ಅಭಿನಯಿಸುತ್ತಿರುವ ವಿಚಾರವನ್ನು ಅಧಿಕೃತವಾಗಿ ಸೋಶಿಯಲ್ ಮೀಡಿಯಾದಲ್ಲಿ ಪ್ರಕಟಿಸಿದೆ. 

ಮೊದಲ ಬಾರಿಗೆ ಪ್ರಭಾಸ್ ಮತ್ತು ದೀಪಿಕಾ ಪಡುಕೋಣೆ ಜೋಡಿಯಾಗಿ ತೆರೆಯ ಮೇಲೆ ಬರಲು ಸಿದ್ಧರಾಗಿದ್ದಾರೆ. ಹೀಗಾಗಿ ಟಾಪ್ ನಾಯಕ ಹಾಗೂ ನಾಯಕಿಯ ಅಭಿನಯ ನೋಡಲು ಅಭಿಮಾನಿಗಳು ಉತ್ಸುಕರಾಗಿ ಕಾಯುತ್ತಿದ್ದಾರೆ. 

ಇತ್ತೀಚೆಗಷ್ಟೆ ಪ್ರಭಾಸ್ ಅಭಿನಯದ 20ನೇ ಸಿನಿಮಾವಾಗಿರುವ ರಾಧೆ ಶ್ಯಾಮ್  ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಈಗ ಪ್ರಭಾಸ್ ಅವರ 21ನೇ ಸಿನಿಮಾದಲ್ಲಿ ನಾಯಕಿ ದೀಪಿಕಾ ಪಡುಕೋಣೆ ಎಂಬುದನ್ನು ರಿವೀಲ್ ಮಾಡುವ ಮೂಲಕ ಅಭಿಮಾನಿಗಳಿಗೆ ಮತ್ತೊಂದು ಬಿಗ್ ಸಪ್ರ್ರೈಸ್ ನೀಡಿದಂತಾಗಿದೆ. ಈ ಹಿಂದೆಯೇ ಈ ವಿಚಾರವಾಗಿ ಚಿತ್ರತಂಡ ದೀಪಿಕಾ ಪಡುಕೋಣೆ ಅವರನ್ನು ಸಂಪರ್ಕ ಮಾಡಿ ಮಾತುಕತೆ ನಡೆಸಿತ್ತು. ಆದರೆ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿರಲಿಲ್ಲ. ಇದೀಗ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಗೋಲ್ಡನ್ ಜುಬಲಿ ಸಂಭ್ರಮದಲ್ಲಿ ಈಶ್ವರಿ ಸಂಸ್ಥೆ

ಈಶ್ವರಿ ಸಂಸ್ಥೆಯನ್ನು ಕನ್ನಡ ಸಿನಿಪ್ರೇಮಿಗಳು ಮರೆಯುವ ಹಾಗಿಲ್ಲ. ಸಾಹಸಸಿಂಹ ವಿಷ್ಣುವರ್ಧನ್, ರೆಬೆಲ್ ಸ್ಟಾರ್ ಅಂಬರೀಶ್ ಅಂತಹ ಮಹಾನ್ ಕಲಾವಿದರನ್ನು ಕನ್ನಡ ಸಿನಿಮಾಗೆ ಪರಿಚಯಿಸಿದ ಕೀರ್ತಿ ಈಶ್ವರಿ ಸಂಸ್ಥೆಯದ್ದು. ಅಂತಹ ಈಶ್ವರಿ ಸಂಸ್ಥೆ ಇದೀಗ ಗೋಲ್ಡನ್ ಜುಬಲಿ ಸಂಭ್ರಮದಲ್ಲಿದೆ.

ನಟಿ ಕಂಗನಾ ವಿರುದ್ಧ ಮತ್ತೊಮ್ಮೆ ಮುಗಿಬಿದ್ದ ರಾಖಿ!

ಮುಂಬಯಿ : ನಟಿ ಕಂಗನಾ ರಣಾವತ್ ಅವರ ವಿರುದ್ಧ ಡವ್ ರಾಣಿ ರಾಖಿ ಸಾವಂತ್ ಮತ್ತೊಮ್ಮೆ ಮುಗಿ ಬಿದ್ದಿದ್ದಾರೆ. ಈ ಬಾರಿ ಮಹಾರಾಷ್ಟ್ರ ಸರ್ಕಾರ ಹಾಗೂ ಸಿಎಂ ಉದ್ಧವ್ ಠಾಕ್ರೆ ಅವರ ಕ್ಷಮೆ ಕೇಳಬೇಕು ಎಂದು ನಟಿ ರಾಖಿ ಸೂಚಿಸಿದ್ದಾರೆ.

ಕತ್ತಲ ಕೋಣೆ ಕನ್ನಡ ಸಿನಿಮಾಕ್ಕೆ ಭೋಜಪುರಿ ನಿರ್ಮಾಪಕನ ಕಣ್ಣು!

ಕತ್ತಲ ಕೋಣೆ ಕನ್ನಡ ಸಿನಿಮಾ ಮೇಲೆ ಇದೀಗ ಭೋಜಪುರಿ ನಿರ್ಮಾಪಕರು ಕಣ್ಣು ಬಿದ್ದಿದೆ. ಸಸ್ಪೆನ್ಸ್ ಥ್ರಿಲ್ಲರ್ ಹಾರರ್ ಸಿನಿಮಾ ಇದಾಗಿದ್ದು 1998ರ ಸತ್ಯ ಘಟನೆ ಆಧಾರಿತ ಚಿತ್ಯರ. ಉಡುಪಿಯ ಸಂದೇಶ ಶೆಟ್ಟಿ ಆಜ್ರಿ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿತ್ತು. ಚಿತ್ರದ ನಾಯಕ ನಟ ಕೂಡ ಸಂದೇಶ ಅವರೆ. ಅಂದುಕೊಂಡಂತಾದರೆ ಕನ್ನಡದ ಕತ್ತಲ ಕೋಣೆ ಮರಾಠಿಯಲ್ಲೂ ಸದ್ದು ಮಾಡಲಿದೆ.

ನಟ ಸುಶಾಂತ್ ಸಿಂಗ್ ಲಾಸ್ಟ್ ಪಿಕ್ಚರ್ ಟ್ರೈಲರ್: ಬದುಕು-ಸಾವಿನ ತಲ್ಲಣದ ಕಹಾನಿ

‘ಯಾವಾಗ ಹುಟ್ಟಬೇಕು, ಯಾವಾಗ ಸಾಯಬೇಕು ಎಂದು ನಿರ್ಧರಿಸುವುದು ನಮ್ ಕೈಲಿಲ್ಲ. ಆದರೆ, ಹೇಗೆ ಬದುಕಬೇಕು ಎಂದು…