ಅಗಸ್ಟ್ 5ಕ್ಕೆ ಜಮ್ಮ-ಕಾಶ್ಮೀರದ 370 ವಿಧಿ ರದ್ದು ಮಾಡಿದ ಪ್ರಕ್ರಿಯೆಗೆ ಒಂದು ವರ್ಷ ತುಂಬುತ್ತಿರುವುದು ಕೇವಲ ಕಾಕತಾಳೀಯವೆ?
ಲಕ್ನೋ: ‘ಅಗಸ್ಟ್ 3 ಅಥವಾ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಲಾಗಿಸುವುದು. ಪ್ರಧಾನಮಂತ್ರಿಯೇ ಇದನ್ನು ಮಾಡಬೇಕೆಂದು ಟ್ರಸ್ಟ್ ಅಭಿಲಾಷೆಯಾಗಿದ್ದು, ಅವರಿಗೆ ಆಹ್ವಾನ ನೀಡಿದ್ದೇವೆ ಎಂದು ನಿರ್ಮಾಣದ ಜವಾಬ್ದಾರಿ ಪಡೆದಿರುವ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.
ಶನಿವಾರ ಅಯೋಧ್ಯೆಯಲ್ಲಿ ಟ್ಟಸ್ಟ್ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಸ್ಟ್ ಸದಸ್ಯ ಕಾಮೇಶ್ವರ್ ಚೌಪಾಲ್ ಈ ಮಾಹಿತಿ ನೀಡಿದರು.
ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪಾ ರಾಜ್ ಮಾತನಾಡಿ, ಎಲ್ & ಟಿ ಕಂಪನಿಗೆ ನಿರ್ಮಾಣ ಕಾರ್ಯದ ಗುತ್ತಿಗೆ ನೀಡಲಾಗಿದೆ ಎಂದರು.
ಅಗಸ್ಟ್ 5ಕ್ಕೆ ಜಮ್ಮು-ಕಾಶ್ಮೀರದಲ್ಲಿ 370ನೆ ವಿಧಿ ರದ್ದು ಮಾಡಿ, ಆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿ ಒಂದು ವರ್ಷ ತುಂಬಲಿದೆ. ರಾಮ ಮಂದಿರ ನಿರ್ಮಾಣ ಮತ್ತು 370ನೆ ವಿಧಿ ರದ್ದು ಬಿಜೆಪಿಯ ಎರಡು ಪ್ರಮುಖ ಅಜೆಂಡಾ ಆಗಿದ್ದವು. ಕಳೆದ ವರ್ಷ ಆಗಸ್ಟ್ ನಲ್ಲಿ 370ನೆ ವಿಧಿ ರದ್ದಾಗಿತು. ನವೆಂಬರಿನಲ್ಲಿ ಸುಪ್ರೀಂಕೋರ್ಟ್ ವಿವಾದಿತ ಜಾಗದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿತು.